The positions I have obtained are the result of my hard work: B.C. Anand

ನಾನು ಪಡೆದ ಹುದ್ದೆಗಳು ಭಿಕ್ಷೆಯಲ್ಲ, ನನ್ನ ಶ್ರಮದ ಫಲ: ಬಿಸಿ ಆನಂದ್ ತಿರುಗೇಟು

ದೊಡ್ಡಬಳ್ಳಾಪುರ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ (T.Venkataramaniah) ಶಾಸಕರಾಗುವ ಮುಂಚಿನಿಂದಲೂ ನಾನು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು, ಬಮೂಲ್ ನಿರ್ದೇಶಕರಾಗಿ ಸೇರಿದಂತೆ ನಾನು ಅನುಭವಿಸಿರುವ ಅಧಿಕಾರ ಹಾಗೂ ಹುದ್ದೆಗಳು ರಾಜಕೀಯವಾಗಿ ನನ್ನ ಶ್ರಮದಿಂದ ಗಳಿಸಿರುವುದೇ ಹೊರತು ನಿಮ್ಮ ಭಿಕ್ಷೆಯಿಂದ ಬಂದಿದ್ದಲ್ಲ ಎಂದು ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ (BC Anand Kumar) ತಿರುಗೇಟು ನೀಡಿದ್ದಾರೆ.

ನಗರದ ಬಮೂಲ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಮೂಲ್ ಚುನಾವಣೆ, ಕೆಎಂಎಫ್ ನಿರ್ದೇಶಕ ಸ್ಥಾನ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ನಿಲ್ಲಲು ನಾನು ಹಾಕಿದ ಭಿಕ್ಷೆ ಎನ್ನುವ ಮಾಜಿ ಶಾಸಕರ ಮಾತಿನಲ್ಲಿ ಸತ್ಯವಿಲ್ಲ. ಅವರು 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂದರು. ಆದರೆ ನಾನು 1995ರಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೆ.

ಮಾಜಿ ಶಾಸಕ ಗಂಟಿಗಾನಹಳ್ಳಿ ಕೃಷ್ಣಪ್ಪ ಅವರ ಪರವಾಗಿ ಕೆಲಸ ಮಾಡಿದ್ದೆ. 1997ರಲ್ಲಿ ಮಜರಾಹೊಸಹಳ್ಳಿ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಬರಲು ಶ್ರಮಿಸಿದ್ದೆ.

ಡಿಕೆ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ರಾಜೀವ್ ಗಾಂಧಿ ಶಕ್ತಿ ಕೇಂದ್ರದ ಪ್ರತಿನಿಯಾಗಿ ಕೆಲಸ ಮಾಡಿದ್ದೆ. ಮಾಜಿ ಶಾಸಕರು ರಾಜಕೀಯವಾಗಿ ಸಕ್ರಿಯವಾಗುವ ಮುಂಚೆಯೇ ಗ್ರಾಮಪಂಚಾಯಿತಿ ಸದಸ್ಯನಾಗಿ, ಉಪಾಧ್ಯಕ್ಷನಾಗಿ ನಂತರ ಅಧ್ಯಕ್ಷನಾಗಿ ನಂತರ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಸಹ ಸ್ಪರ್ಧಿಸಿ, ಕಡಿಮೆ ಅಂತರದಿಂದ ಸೋತಿದ್ದೆ.

ನನಗೆ ಪಕ್ಷ ನೀಡಿದ್ದಕ್ಕಿಂತ ಹೆಚ್ಚಾಗಿ ಅದರ ಎರಡರಷ್ಟು ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಮಾಜಿ ಶಾಸಕರಾದ ಜೆ.ನರಸಿಂಹಸ್ವಾಮಿ, ಆರ್.ಜಿ.ವೆಂಕಟಾಚಲಯ್ಯ ಅವರ ಗೆಲುವಿಗೆ ಶ್ರಮಿಸಿದ್ದೇನೆ. ಆದರೆ ಯಾವುದೇ ಆಸೆ ಆಮಿಷಕ್ಕೆ ಬಲಿಯಾಗಿಲ್ಲ. ಅದನ್ನು ನೀವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

ಜೆ.ನರಸಿಂಹಸ್ವಾಮಿ ಅವರಿಗೆ ನಾನು ಬೆಂಬಲಿಸಿದಾಗ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾಗಿತ್ತು. ಈಗಿನ ಶಾಸಕ ಧೀರಜ್ ಮುನಿರಾಜು ಸಹ ಉತ್ತಮ ವ್ಯಕ್ತಿ ಎಂದು ಬೆಂಬಲಿಸಿದ್ದೇನೆ. ಭ್ರಷ್ಟರಾದರೆ ಅವರು ಯಾರೇ ಆಗಲೀ ಅವರನ್ನು ನಾನು ಬೆಂಬಲಿಸುವುದಿಲ್ಲ.

ಬಮೂಲ್ ಚುನಾವಣೆಗೆ ನನ್ನ ಯೋಗ್ಯತೆ ನೋಡಿ ಸ್ಪರ್ಧಿಸಲು ಅವಕಾಶ ನೀಡಿದ್ದರು. ನನಗೆ ನೀವು ಭಿಕ್ಷೆ ಕೊಡುವಷ್ಟು ಯೋಗ್ಯರಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ಮಾಜಿ ಶಾಸಕರ ಸಹೋದರನನ್ನು ಏಕೆ ನಿಲ್ಲಿಸಲಿಲ್ಲ ಎಂದರು.

ಜಿಲ್ಲಾ ಪಂಚಾಯಿತಿ ಟಿಕೆಟ್ ನಾನು ಕೇಳಿರಲಿಲ್ಲ

ಕಾಂಗ್ರೆಸ್ ಕಟ್ಟಾಳುವಾಗಿ ಅಡಿಪಾಯ ಹಾಕಿದ್ದೇನೆ. ಡಿಕೆಶಿ ಪಟ್ಟಾ ಶಿಷ್ಯ ನಾನು. ಜಿಲ್ಲಾ ಪಂಚಾಯಿತಿ ಚುನಾವಣೆಗೆ ನಾನು ಅವರ ಬಳಿ ಅರ್ಜಿ ಹಾಕಿರಲಿಲ್ಲ. ಅದಕ್ಕೆ ಬಲವಂತ ಮಾಡಿದವರು ಅವರು. ಅಂದು ಸಿ.ನಾರಾಯಣಸ್ವಾಮಿ, ಡಾ.ವಿಜಯಕುಮಾರ್ ಎದುರಿಸುವ ಶಕ್ತಿ ಅವರಲ್ಲಿ ಇರಲಿಲ್ಲ .ನಾನು ಯಾವತ್ತೂ ನಿಮ್ಮ ಬಳಿ ಭಿಕ್ಷೆ ಬೇಡಿಲ್ಲ ನನಗೆ ನಿಗಮ ಮಂಡಳಿಯಲ್ಲಿ ಸ್ಥಾನ ಕೊಟ್ಟಿದ್ದರೆ ಅದು ಭಿಕ್ಷೆ ಅಂದುಕೊಳ್ಳುತ್ತೇನೆ ಎಂದರು.

ಕೆಎಂಎಫ್ ಕೇಳಿಲ್ಲ

ನಾನು ಕೆಎಂಎಫ್ ನಿರ್ದೇಶಕರಾಗಲು ಸಹ ಭಿಕ್ಷೆ ಕೊಟ್ಟಿದ್ದು ಎಂದು ಹೇಳಿದ್ದೀರಿ. ಅದು ಸುಳ್ಳು ನನಗೆ ನಿರ್ದೇಶಕರಾಗುವ ಉದ್ದೇಶವೇ ಇರಲಿಲ್ಲ. ಡಿಕೆ ಶಿವಕುಮಾರ್ ಅವರು ನನ್ನನ್ನು ಕೆಎಂಎಫ್ ನಿರ್ದೇಶಕರಾಗಿಸಿದರು. ಇದು ಅವರ ಹಾಕಿದ ಭಿಕ್ಷೆ ಎನ್ನುಬಹುದು.

ಡಿಕೆಶಿಗೆ ಹಾರ ತಾಲೂಕಿಗೋಸ್ಕರ

ಕೆಪಿಸಿಸಿ ವಕ್ತಾರರು ಆರೋಪಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲು ರಾತ್ರೋರಾತ್ರಿ ಹೋಗಿಲ್ಲ. ತಾಲೂಕಿನಲ್ಲಿ ಬಮೂಲ್‍ನಲ್ಲಿ ಕೆಲಸಗಳಾಗಬೇಕು. ಈ ಹಿಂದೆ ಬಮೂಲ್ ಉತ್ಪನ್ನಗಳ ಘಟಕಕ್ಕೆ ಡಿಕೆ ಶಿವಕುಮಾರ್ ಜಮೀನು ಮಂಜೂರು ಮಾಡಿಸಿದ್ದಾರೆ. ಅವರಿಂದ ನಮ್ಮ ತಾಲೂಕಿಗೆ ಕೆಲಸಗಳಾಗಬೇಕಿದೆ. ಅವರ ಮೇಲಿನ ಅಭಿಮಾನದಿಂದ ಹಾರ ಹಾಕಿ ಬಂದೆ ಎಂದರು.

ಕಾಂಗ್ರೆಸ್ ಶಕ್ತಿಹೀನ

ನಿಮ್ಮ ಬಗ್ಗೆ ಅಧಿಕಾರಿಗಳಲ್ಲಿ ಒಳ್ಳೆ ಅಭಿಪ್ರಾಯ ಇಲ್ಲ. ಅಪ್ಪನ ಬಗ್ಗೆ ಮಾತನಾಡಿರುವುದು ಆಕಸ್ಮಿಕವಾಗಿ ಬಂದಿರುವುದು. ಆದರೆ ನನ್ನ ಮೇಲೆ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಲು ಹೊರಟಿದ್ದರು. ಅದಕ್ಕಾಗಿ ನಾನು ಅಡಾಸ್ ಪದ ಬಳಸಬೇಕಾಯಿತು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತನೂ ನಿಮ್ಮಿಂದ ಉದ್ದಾರ ಆಗಿಲ್ಲ. ಪಕ್ಷ ಬಿಟ್ಟು ಹೊರಬಂದು ನಿಮ್ಮ ಶಕ್ತಿ ಪ್ರದರ್ಶಿಸಿ, ಇವರು ಪಕ್ಷ ಬಿಟ್ಟರೆ ಕಾಂಗ್ರೆಸ್ ಫೀನಿಕ್ಸ್‍ನಂತೆ ಮೇಲೇಳುತ್ತದೆ. ಕೊವಿಡ್ ಸಮಯದಲ್ಲಿ ಯಾರು ಜನರಿಗೆ ಸಹಾಯ ಮಾಡಿದ್ದರೋ ಅವರನ್ನು ಜನ ಬೆಂಬಲಿಸಿದ್ದಾರೆ. ಯಾರಿಗೂ ಸಹಾಯ ಮಾಡದವರನ್ನು ದೂರ ನಿಲ್ಲಿಸಿದ್ದಾರೆ.

ಶಾಸಕರಾಗಿದ್ದಾಗ ಅಧಿಕಾರಿಗಳಿಂದ ಹಣ ಪಡೆದಿಲ್ಲ ಎಂದು ನಿರೂಪಿಸಿ, ನಾನು ಏನು ಜನರಿಗೆ ಸಹಾಯ ಮಾಡಿದ್ದೇನೆ ನೀವು ಏನು ಮಾಡಿದ್ದೀರಿ, ಎನ್ನುವುದು ಸಾಬೀತು ಮಾಡಲು ಧರ್ಮಸ್ಥಳಕ್ಕೆ ಬನ್ನಿ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದರು.

ಸುದ್ಧಿಗೋಷ್ಟಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ಬಿಜೆಪಿ ತಾಲೂಕು ಅಧ್ಯಕ್ಷ ನಾಗೇಶ್, ನಾಗರಿಕ ಹಿತರಕ್ಷಣಾ ಸಮಿತಿಯ ರವೀಂದ್ರ ಕುಮಾರ್ ಮತ್ತಿತರರಿದ್ದರು.

ರಾಜಕೀಯ

ರಾಹುಲ್ ಗಾಂಧಿ ಬಂಧನ..!| Video

ರಾಹುಲ್ ಗಾಂಧಿ ಬಂಧನ..!| Video

ಮತ ಕಳವು (Vote chori) ಕುರಿತಂತೆ ಚುನಾವಣೆ ಆಯೋಗದ ವಿರುದ್ಧ ದಾಖಲೆ ಬಿಡುಗಡೆ ಮಾಡಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi)

[ccc_my_favorite_select_button post_id="112441"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು ಪರಾರಿ

ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು

ಕೃಷಿ ಜಮೀನುಗಳಲ್ಲಿನ ಬೋರ್ವೆಲ್ ಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು (Cable wire) ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು (Thieves) ಬೆನ್ನತ್ತಿದ ರೈತರು, ವಾಹನವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

[ccc_my_favorite_select_button post_id="112373"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!