ಮೈನಿಂಗ್ ಮತ್ತು ಸ್ಟೀಲ್ ಇಂಡಸ್ಟ್ರೀಸ್ ಹಾಗೂ ಪಾಲುದಾರರ ಜೊತೆ ಸಮಾಲೋಚನಾ ಸಭೆ: ಡಾ.ಇ.ವಿ.ರಮಣ ರೆಡ್ಡಿ

Consultation meeting with mining and steel industries and stakeholders: Dr. E.V. Ramana Reddy

ಬಳ್ಳಾರಿ: ಈ ಭಾಗದ ಕೈಗಾರಿಕೆ ವಲಯಗಳಲ್ಲಿ ಉದ್ಯೋಗ ಸೃಷ್ಟಿಸುವುದರ ಜೊತೆಗೆ ಯುವ ಸಮುದಾಯದಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸಬೇಕು. ಇದಕ್ಕೆ ಕೈಗಾರಿಕೆಗಳೂ ಸಹ ಕೈಜೋಡಿಸಬೇಕು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಪ್ರಾಧಿಕಾರದ ಅಧ್ಯಕ್ಷ ಡಾ.ಇ.ವಿ.ರಮಣ ರೆಡ್ಡಿ (Dr.E.V.Ramana Reddy) ಹೇಳಿದರು.

ಸಂಡೂರು ತಾಲ್ಲೂಕಿನಲ್ಲಿ ಸ್ಕಿಲ್ ಪಾರ್ಕ್/ಅಕಾಡೆಮಿ ಸ್ಥಾಪಿಸುವ ಸಂಬಂಧ ಮೈನಿಂಗ್ ಮತ್ತು ಸ್ಟೀಲ್ ಇಂಡಸ್ಟ್ರೀಸ್ ಹಾಗೂ ಪಾಲುದಾರರ ಜೊತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ನಿಟ್ಟಿನಲ್ಲಿ ಕೈಗಾರಿಕೆ-ಪಾಲುದಾರರೊಂದಿಗೆ ಸಮಾಲೋಚನಾ ಸಭೆ ಆಯೋಜಿಸಲಾಗಿದ್ದು, ಕೈಗಾರಿಕೆಗಳು ಮತ್ತು ಪಾಲುದಾರರ ನಡುವಿನ ಅಂತರವನ್ನು ಕಡಿಮೆ ಮಾಡಲು ಹಾಗೂ ಉದ್ಯೋಗ ಕ್ಷೇತ್ರದಲ್ಲಿನ ಬೇಡಿಕೆಗಳನ್ನು ಪೂರೈಸಲು ಸಹಯೋಗ, ಸಹಭಾಗಿತ್ವ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಬೇಕಿದೆ ಎಂದು ತಿಳಿಸಿದರು.

ಪ್ರಸ್ತುತದಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಪಟ್ಟಿಗಳಿಗೆ ಸೀಮಿತವಾಗಿದ್ದಾರೆ. ಬದಲಾಗಿ ಅವರಿಗೆ ಕೌಶಲ್ಯತೆ ಆಧಾರಿತ ಶಿಕ್ಷಣ ಮೌಲ್ಯವು ನೀಡಬೇಕಿದೆ. ಹಾಗಾಗಿ ಇದಕ್ಕೆ ಕೈಗಾರಿಕೆಗಳ ಸಹಭಾಗಿತ್ವವೂ ಅವಶ್ಯಕತೆ ಇದೆ ಎಂದು ಅಭಿಪ್ರಾಯ ಪಟ್ಟರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕಾ ವಲಯಗಳು ಹೆಚ್ಚಾಗಿದ್ದು, ಉದ್ಯೋಗದಾತರು ಕೌಶಲ್ಯ ಶಿಕ್ಷಣ ಅಳವಡಿಸಬೇಕು. ಜೊತೆಗೆ ಸುರಕ್ಷತೆ ಮತ್ತು ದಕ್ಷತೆಗೆ ಆದ್ಯತೆ ನೀಡಬೇಕು. ಇದಕ್ಕೆ ಬೇಕಾದ ಎಲ್ಲಾ ಅಗತ್ಯ ಸಹಕಾರ ಜಿಲ್ಲಾಡಳಿತ ನೀಡಲಿದೆ ಎಂದು ಹೇಳಿದರು.

ಇದೇ ವೇಳೆ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾರ್ಖಾನೆಗಳ ವ್ಯವಸ್ಥಾಪಕರು ಮತ್ತು ಪಾಲುದಾರರು, ಈ ಭಾಗದ ಯುವಜನತೆಯು ಕೌಶಲ್ಯಾಧಾರಿತ ಶಿಕ್ಷಣ ಹೆಚ್ಚು ಅಳವಡಿಸಿಕೊಳ್ಳಬೇಕಿದೆ ಎಂದು ಅನಿಸಿಕೆ ಹಾಗೂ ಅಭಿಪ್ರಾಯ ಹಂಚಿಕೊಂಡರು.

ಈ ಸಂದರ್ಭದಲ್ಲಿ ಬೆಂಗಳೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಡಾ.ದಿನೇಶ್ ಕುಮಾರ್ ವೈ.ಕೆ., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ ಸೇರಿದಂತೆ ಜಿಲ್ಲೆಯ ವಿವಿಧ ಮೈನಿಂಗ್ ಮತ್ತು ಸ್ಟೀಲ್ ಕಾರ್ಖಾನೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]