ಬೆಂಗಳೂರು; ನೆಲಮಂಗಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ (JDS) ಪಕ್ಷದ ಹಲವಾರು ಕಾರ್ಯಕರ್ತರು ಪಕ್ಷ ತೊರೆದು ಮಾಜಿ ಸಂಸದ ಡಿಕೆ ಸುರೇಶ್ (DK Suresh) ಸಮ್ಮುಖದಲ್ಲಿ ಕಾಂಗ್ರೆಸ್ (congress) ಪಕ್ಷ ಸೇರ್ಪಡೆಯಾದರು.
ಬೆಂಗಳೂರಿನಲ್ಲಿ ನಡೆದ ಸರಳ ಕಾರ್ಯಕ್ರಮದದಲ್ಲಿ ಜೆಡಿಎಸ್ ಮುಖಂಡರು ಹಾಗೂ ಅವರ 50ಕ್ಕೂ ಹೆಚ್ಚು ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು
ಟಿ.ಬೇಗೂರು ಪಂಚಾಯಿತಿ ಸದಸ್ಯ ಬಿ.ಕೆ. ಮುನಿರಾಜು, ಗ್ರಾ.ಪಂ.ಸದಸ್ಯ ಬಿ.ಕೆ.ಶ್ರೀನಿವಾಸ್, ವಜ್ರಘಟ್ಟೆಪಾಳ್ಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮುನಿರಾಮು, ಮುಖಂಡ ಸುರೇಶ್, ಮಣ್ಣೆ ಎನ್.ಸೀತಾರಾಮ ಎನ್.ಸೀತಾರಾಮಯ್ಯ, ದೊಡ್ಡಬೆಲೆ ಗಂಗಣ್ಣ, ಲಕ್ಕೇನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮಂಜುನಾಥ್, ಗ್ರಾ.ಹನುಮಂತರಾಜು, ರಾಧಾ ಸಿದ್ದರಾಜು, ಕಲಾವತಿ ಮುನಿರಾಜು ವಸಂತಕುಮಾರ, ಜಗದೀಶ್ ಚೌಡಯ್ಯ ಇನ್ನು ಅನೇಕರು ಸೇರ್ಪಡೆಗೊಂಡವರು.
ಶಾಸಕ ಎನ್.ಶ್ರೀನಿವಾಸ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾರಾ ಯಣಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ತಾಲೂಕು ಅಧ್ಯಕ್ಷ ವಜ್ರಘಟ್ಟ ನಾಗರಾಜು, ಮುಖಂಡ ಎಂ.ಕೆ.ನಾಗರಾಜು ಇದ್ದರು.