MLA Konaraddy, District Collector visit rain-damaged area

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಕೋನರಡ್ಡಿ, ಜಿಲ್ಲಾಧಿಕಾರಿ ಭೇಟಿ

ಧಾರವಾಡ; ಪಟ್ಟಣದಲ್ಲಿ ಮೂರು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ರಸ್ತೆ ಸಂಚಾರವನ್ನೇ ಅಸ್ತವ್ಯಸ್ತಗೋಳಿಸಿದೆ ಪ್ರದೇಶಗಳಿಗೆ ಶಾಸಕ ಎನ್ ಎಚ್ ಕೋನರಡ್ಡಿ (N.H.Konaraddy), ಜಿಲ್ಲಾಧಿಕಾರಿ ದಿವ್ಯ ಪ್ರಭು (District Collector Divya Prabhu), ಎಸ್ ಪಿ ಡಾ.ಗೋಪಾಲ ಬ್ಯಾಕೋಡಿ ಭೇಟಿ ನೀಡಿ ಪರಿಶೀಲಿದರು.

ಇಬ್ರಾಹಿಂಪುರ ರಸ್ತೆ ಹಳ್ಳದ ಹತ್ತಿರವಿರುವ ಎಸ್ ಎಸ್ ಬಾಗಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಮಳೆಗೆ ಸಿಲುಕಿ ತೊಂದರೆ ಅನುಭವಿಸಿದ ಮಕ್ಕಳನ್ನು ಬೇಟಿ ಮಾಡಿ ದೈರ್ಯ ತುಂಬಿದರು. ನಂತರ ಹಾನಿಗಿಡಾದ ಪ್ರದೇಶಳನ್ನು ವೀಕ್ಷಣೆ ಮಾಡಿದರು.

ಸೋಮವಾರ ಸಂಜೆ ಸುರಿದ ಮಳೆಗೆ ಇಬ್ರಾಹಿಂಪುರ್ ನವಲಗುಂದ ಮಧ್ಯದ ಎರಡು ಹಳ್ಳಗಳು ತುಂಬಿ ಹರಿಯುತ್ತಿದ್ದರೆ ತಿರ್ಲಾಪುರ ಯಮನೂರ, ಹಾಳಕುಸುಗಲ, ಇಬ್ರಾಹಿಂಪೂರ ಹಾಗೂ ಪಟ್ಟಣದ ಕೆಲವು ಭಾಗಗಳಲ್ಲಿ ಗಟಾರ್ ತುಂಬಿ ನೀರು ರಸ್ತೆ ಮೇಲೆ ಹರಿದು ರಸ್ತೆ ಸಂಚಾರವನ್ನೇ ಮೃಘಶಿರ ಮಳೆ ಸ್ಥಗಿತಗೊಳಿಸಿತ್ತು.

ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದ ಗಟಾರು ತುಂಬಿ ರಸ್ತೆ ಮೇಲೆ ನೀರು ಹರಿದು ಪಕ್ಕದ ನೀರಾವರಿ ಕಾಲೋನಿ, ಮನೆಗಳಿಗೆ ನೀರು ನುಗ್ಗಿದರೆ ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಸೊಲ್ಲಾಪುರ ಶೆಟ್ಟರ ಕೆರಿ ಹತ್ತಿರ ಮಳೆ ನೀರು ಗಟಾರ್ ತುಂಬಿ ರಸ್ತೆಯ ಮೇಲೆ ಹರಿದಿತ್ತು ಇನ್ನು ವಸತಿ ಶಾಲೆಗಳಾದ ರಾಣಿ ಚೆನ್ನಮ್ಮ, ಬಿಸಿಎಂ ಹಾಸ್ಟೆಲ್, ದಿ. ದೇವರಾಜ ಅರಸು ಹಿಂದುಳಿದ ವರ್ಗದ ವಸತಿ, ಶಾಲೆ ಎಲ್.ಐ.ಸಿ ಆಫೀಸ್, ಅಂಬೇಡ್ಕರ್ ನಗರ, ಮಾಡೆಲ್ ಹೈಸ್ಕೂಲ್ ಹತ್ತಿರದ ಕುರಹಟ್ಟಿ ಪ್ಲಾಟ್, ಅಂಬೇಡ್ಕರ್ ನಗರ, ಬಸವೇಶ್ವರನಗರದ ಸರಕಾರಿ ಶಾಲೆಗಳು, ಹಾಗೂ ಹಾದಿ ಬಸವೇಶ್ವರ ದೇವಸ್ಥಾನದ ರಸ್ತೆಯು ನೀರಿನಿಂದ ಜಲಾವೃತಗೊಂಡಿದ್ದವು ಮಳೆಯಿಂದ ಜನರಿಗೆ ಭಯದ ವಾತಾವರಣ ಸೃಷ್ಟಿಯಾಗಿತ್ತು.

ಪ್ರತಿ ಬಾರಿ ಮಳೆ ಬಂದಾಗ ಈ ಶಾಲೆ ಮಕ್ಕಳು, ಇಬ್ರಾಹಿಂಪುರ್ ಗ್ರಾಮಸ್ಥರು ಹಾಗೂ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಈ ಹಿಂದೆಯೂ ಕೂಡ ಸಾಕಷ್ಟು ಬಾರಿ ರೈತರು ಹಾಗೂ ಸಾರ್ವಜನಿಕರು ಈ ಎರಡು ಹಳ್ಳಗಳಿಗೆ ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಮೌಖಿಕವಾಗಿ ಹಾಗೂ ಮನವಿ ಮುಖಾಂತರ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹೇಳಿದರೂ ಕೂಡ ಪ್ರಯೋಜನವಾಗುತ್ತಿಲ್ಲ ಆದಷ್ಟು ಬೇಗನೆ ಶಾಸಕರು ಮುತುವರ್ಜಿ ವಹಿಸಿ ಈ ಎರಡು ಹಳ್ಳಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ ಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.

ಅತಿ ಹೆಚ್ಚು ನೀರು ನುಗ್ಗಿದ ಪ್ರದೇಶಗಳಿಗೆ ತಹಶೀಲ್ದಾರ್ ಸುಧೀರ್ ಸಾಹುಕಾರ, ಪುರಸಭೆ ಮುಖ್ಯಧಿಕಾರಿ ಶರಣು ಪೂಜಾರ, ಸಿಪಿಐ ರವಿಕುಮಾರ ಕಪ್ಪತನ್ನವರ, ಪುರಸಭೆ ಅಧ್ಯಕ್ಷ ಶಿವಾನಂದ ತಡಿಸಿ ಹಾಗೂ ಪುರಸಭೆ ಸದಸ್ಯರು ಭೇಟಿ ಸಮಸ್ಯೆಗಳಿಗೆ ಸ್ಪಂದಿಸಿದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!