The government has implemented many schemes for the self-reliant life of women: CEO Dr. K.N. Anuradha

ಮಹಿಳೆಯರ ಸ್ವಾವಲಂಬಿ ಬದುಕಿಗೆ ಸರ್ಕಾರದಿಂದ ಹಲವು ಯೋಜನೆ ಜಾರಿ: ಸಿಇಒ ಡಾ.ಕೆ.ಎನ್ ಅನುರಾಧ

ಬೆಂ.ಗ್ರಾ.ಜಿಲ್ಲೆ: ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ (Dr. K.N. Anuradha) ಹೇಳಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಂಜೀವಿನಿ ಡೇ-ಎನ್.ಆರ್.ಎಲ್.ಎಂ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಡಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಿಬ್ಬಂದಿಗಳಿಗೆ ಸರ್ಕಾರದ ವಿವಿಧ ಇಲಾಖಾ ಕಾರ್ಯಕ್ರಮಗಳ ಒಗ್ಗೂಡಿಸುವಿಕೆಯ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮಗಳ ಅಭಿವೃದ್ಧಿಯಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಹಾಗಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಂಚಾಯಿತಿ ಮಟ್ಟದಲ್ಲಿ ಒಕ್ಕೂಟಗಳನ್ನು ರಚಿಸಿಕೊಂಡು ಗ್ರಾಮ ಮಟ್ಟದಲ್ಲಿ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಮಹಿಳೆಯರ ಸ್ವಾವಲಂಬಿ ಬದುಕಿಗೆ ಆರ್ಥಿಕ ಶಕ್ತಿ ತುಂಬಲಾಗುತ್ತಿದೆ.

ಮಹಿಳೆಯರು ಸ್ವಾವಲಂಬಿಯಾಗಿ ದುಡಿದು ಆರ್ಥಿಕವಾಗಿ ಸಧೃಡರಾಗಬೇಕು. ಆರ್ಥಿಕವಾಗಿ ಸ್ವಾತಂತ್ರಳಾಗದಿದ್ದರೆ ಎಂದಿಗೂ ಅವಳು ಸಬಲಳಾಗಲು ಸಾಧ್ಯವಿಲ್ಲ ಅದಕ್ಕಾಗಿ ಸರ್ಕಾರ ಮಹಿಳೆಯರಿಗೆ ಎನ್.ಆರ್.ಎಲ್.ಎಂ ಯೋಜನೆಯಡಿ ಹಲವಾರು ಉಚಿತ ತರಬೇತಿ ಕಾರ್ಯಕ್ರಮವನ್ನು ನಡೆಸುತ್ತಿದೆ ಮತ್ತು ಮಹಿಳೆಯರು ಸ್ವ ಉದ್ಯೊಗ ನಡೆಸಲು ಸ್ವ-ಸಹಾಯ ಸಂಘಗಳ ಮೂಲಕ ಸಾಲ ಸೌಲಭ್ಯ ನೀಡುತ್ತಿದೆ.

ಅದರಂತೆಯೇ ಜಿಲ್ಲೆಯಲ್ಲಿ 6 ಸಾವಿರ ಸ್ವ-ಸಹಾಯ ಸಂಘಗಳಿದ್ದು ಅದರಲ್ಲಿ 60 ಸಾವಿರ ಜನ ಮಹಿಳಾ ಸದಸ್ಯರು ಇದ್ದಾರೆ. ಸ್ವ-ಸಹಾಯ ಸಂಘಗಳು 2017-2018 ರಿಂದ ಇದುವರೆಗೆ ಜಿಲ್ಲೆಯಲ್ಲಿ 50 ಕೋಟಿ ವಹಿವಾಟು ನಡೆಸಿದ್ದಾರೆ, 31 ಕೋಟಿ ಹಣವನ್ನು ಸಾಲ ಪಡೆದಿದ್ದು  ಸದ್ಯ 21 ಕೋಟಿ ಹಣ ಮರು ಪಾವತಿಯಾಗಿದೆ ಹಾಗಾಗಿ ಮರು ಪಾವತಿ ಇನ್ನು ಹೆಚ್ಚು ನಡೆಸುವಂತೆ ಮಹಿಳಾ ಸಂಘದ ಸದಸ್ಯರಿಗೆ ತಿಳಿಸಿದರು.

ಎಸ್.ವಿ.ಇ.ಪಿ ಯೋಜನೆ

ಈ ಯೋಜನೆಯಡಿ 2400 ಮಹಿಳಾ ಉದ್ಯಮಿಗಳು ಸಾಲ ಪಡೆದು ಸ್ವ ಉದ್ಯೊಗವನ್ನು ನಡೆಸುತ್ತಿದ್ದಾರೆ.  ಭಾಗ್ಯ ಎಂಬುವವರು ಸ್ವ-ಸಹಾಯ ಸಂಘದಿಂದ ಎಸ್.ವಿ.ಇ.ಪಿ ಯೋಜನೆಯಲ್ಲಿ ಸಾಲ ಪಡೆದು ಶುಭ ಸಮಾರಂಭಗಳಿಗೆ ಹೂವಿನ ಅಲಂಕಾರವನ್ನು ಮಾಡಿಕೊಡುವ ಕೆಲಸವನ್ನು ಮಾಡುತ್ತಿದ್ದಾರೆ. ಇದರಿಂದ ಇವರು ಲಾಭವನ್ನು ಗಳಿಸಿದ್ದಾರೆ. ಹಾಗೆಯೇ ಮಂಜಮ್ಮ ಅವರು ಈ ಯೋಜನೆಯಿಂದ ಸಾಲ ಪಡೆದು ಊಟದ ತಟ್ಟೆ ತಯಾರಕ ಯಂತ್ರವನ್ನು  ಖರೀದಿಸಿ ಸ್ವ ಉದ್ಯೊಗವನ್ನು ಮಾಡುತ್ತಿದ್ದಾರೆ ಇದರಿಂದ ಅಧಿಕ ಲಾಭವನ್ನು ಗಳಿಸಿದ್ದಾರೆ.

ಪಿ.ಎಂ.ಎಫ್.ಎಂ.ಇ ಯೋಜನೆ

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಹಲವಾರು ಸ್ವ-ಸಹಾಯ ಸಂಘಗಳ ಮಹಿಳೆಯರು ಸಾಲ ಪಡೆದು ಸ್ವ ಉದ್ಯೊಗವನ್ನು ನಡೆಸುತ್ತಿದ್ದಾರೆ. ರಾಧಿಕಾ, ಜಗದೇಶ್ವರಿ ಸ್ವ-ಸಹಾಯ ಸಂಘ ಇವರು ಹಪ್ಪಳ ಮಾರಾಟ ಮಾಡುತ್ತಿದ್ದು ಇದರಿಂದ ಲಾಭವನ್ನು ಗಳಿಸಿದ್ದಾರೆ.

ಕೂಸಿನ ಮನೆ

ಅನೇಕ ಮಹಿಳೆಯರು ಮಕ್ಕಳನ್ನು ನೋಡಿಕೋಳ್ಳುತ್ತಲೆ ದುಡಿದು ಜೀವನ ನಡೆಸುತಿದ್ದಾರೆ. ಅವರಿಗೆ ದುಡಿಯುವ ಆಸೆ ಇದ್ದರು ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅದಕ್ಕಾಗಿ ಕೂಸಿನ ಮನೆಯನ್ನು ಪ್ರಾರಂಭಿಸಿದ್ದು ಮಹಿಳೆಯರು ತಮ್ಮ ಮಕ್ಕಳನ್ನು ಅಲ್ಲಿ ಬಿಟ್ಟು ಕೆಲಸಕ್ಕೆ ಹೋಗಿ ಬರಬಹುದು ಇದರಿಂದ ಮಹಿಳೆಯು ಆರ್ಥಿಕವಾಗಿ ಸಬಲಳಾಗಬಹುದು.

ಎಸ್.ಡಬ್ಲ್ಯೂ.ಎಂ ಯೋಜನೆಯ ಸ್ವಚ್ಚವಾಹಿನಿ ವಾಹನವನ್ನು ಮಹಿಳೆಯರೆ ಚಲಾಯಿಸುವ ಅವಕಾಶ ಕಲ್ಪಿಸಲಾಗಿದೆ ಮತ್ತು ನಲ್ ಜಲ್ ಮಿತ್ರ ಯೋಜನೆಯಡಿ ಮಹಿಳೆಯರು ತರಬೇತಿ ಪಡೆದು ಕೆಲಸ ಮಾಡಬಹುದಾಗಿದ್ದು ಈ ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಮಹಿಳೆಯರಿಗೆ ತಿಳಿಸಿದರು.

ಸ್ವ-ಸಹಾಯ ಗುಂಪುಗಳ ಕೊಡುಗೆ

ಗ್ರಾಮೀಣ ಮಟ್ಟದಲ್ಲಿ ಮಹಿಳೆಯರನ್ನು ಸಣ್ಣ ಗುಂಪುಗಳಾಗಿ ಸಂಘಟಿಸುವ ಮೂಲಕ ಆರ್ಥಿಕವಾಗಿ ಪುನಶ್ಚೇತನ ಗೊಳಿಸುವುದು ಸ್ವ ಸಹಾಯ ಸಂಘಗಳ ಮುಖ್ಯ ಗುರಿ. ಮಹಿಳೆಯರು ಸುಸ್ಥಿರ ವಾದ ಉದ್ಯೋಗಗಳನ್ನು ಕೈಗೊಳ್ಳಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ಬ್ಯಾಂಕ್ ಸಂಪರ್ಕ ಸೇವೆ, ಉದ್ಯಮದಾರರಾಗಿ ಬೆಳೆಯುವಲ್ಲಿ ಸೂಕ್ತ ಜ್ಞಾನ, ಕೌಶಲ್ಯ ಮತ್ತು ಅವಕಾಶಗಳನ್ನು ಒದಗಿಸಲಾಗುತ್ತದೆ.

ಸ್ವ-ಸಹಾಯ ಸಂಘಗಳಲ್ಲಿ ಎಲ್ಲಾ ಸದಸ್ಯರಿಗೂ ಸಮಾನ ಅವಕಾಶ ನೀಡಲಾಗಿದ್ದು, ಎಲ್ಲರಿಗೂ ಸಾಮಾನ ಸೌಲಭ್ಯ ಸಿಗಬೇಕು ಎಂದರು. ಹಾಗೇಯೇ ಸರ್ಕಾರದ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಎಲ್ಲರಿಗೂ ಅರಿವು ಮೂಡಿಸಿ ಎಂದು ಸ್ವ ಸಂಘಗಳ ಸದಸ್ಯರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವ ಕುಮಾರ್ ಅವರು ಮಾತನಾಡಿ, ಎನ್.ಆರ್.ಎಲ್.ಎಂ ಒಂದು ದೊಡ್ಡ ಆಲದ ಮರದ ರೀತಿ ಸವಿಸ್ತಾರವಾಗಿ ಬೆಳೆಯುತ್ತಿದೆ. ಈ ಯೋಜನೆಯಡಿ ಪ್ರಮುಖವಾಗಿ ಮಹಿಳೆಯರು ಸ್ವತಂತ್ರವಾಗಿ ಬದುಕಲು ಆಸರೆಯಾಗಿದೆ.

ಸಮಾಜದಲ್ಲಿ ಇರುವ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವ ಒಂದು ಆಶಯ ನಮ್ಮದು, ಇದೀಗ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮಹತ್ತರವಾದ ಹೆಜ್ಜೆಯನ್ನು ಇಡುತ್ತಿರುವುದು ಸಂತೋಷದ ವಿಷಯ, ಹಾಗೇ ಹೆಣ್ಣು ಮತ್ತು ಗಂಡು ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ಹಾಗಾಗಿ ಮಹಿಳೆಯರನ್ನು ಎಲ್ಲಾ ಕ್ಷೇತ್ರದಲ್ಲಿ ಸಮಾನವಾಗಿ ಕಾಣಬೇಕು, ಇದರ ಜೊತೆಗೆ ಸ್ವ – ಸಹಾಯ ಸಂಘಗಳ ಮೂಲಕ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಶೆಡ್ಡುಗಳನ್ನು ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದೇವೆ, ಇದೇ ರೀತಿ ಇನ್ನೂ ಉತ್ತಮ ತರಬೇತಿಯನ್ನು ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಸೆಂಟ್ರಲ್ ಫಾರ್ ಸ್ಟೇಬಿಲೇಶನ್ ಡೆವಲಪ್ಮೆಂಟ್ ಜನರಲ್ ಮ್ಯಾನೇಜರ್ ಸತ್ಯನಾರಾಯಣ, ಯೋಜನಾ ನಿರ್ದೇಶಕರಾದ ವಿಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಕೃಷಿ ಇಲಾಖೆ ಉನಿರ್ದೇಶಕರಾದ ಗಾಯಿತ್ರಿ, ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ಲಕ್ಷ್ಮಣ್, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಚಿಕ್ಕಣ್ಣ, ಲೀಡ್ ಬ್ಯಾಂಕ್ ಮ್ಯಾನೇಜರ್ ರಾಮೋಜಿ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವ-ಸಹಾಯ ಸಂಘಗಳ ಸದಸ್ಯರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!