Mock show at BMCRC

ಬಿಎಂಸಿಆರ್‌ಸಿ ಯಲ್ಲಿ ಅಣಕು ಪ್ರದರ್ಶನ; ಅಗ್ನಿ ಅವಘಡ ತಡೆಗಟ್ಟುವಿಕೆ ಕುರಿತು ಜಾಗೃತಿ

ಬಳ್ಳಾರಿ: ಅಗ್ನಿ ಅವಘಡ ತಡೆಗಟ್ಟುವಿಕೆ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜಾಗೃತಿ ಮೂಡಿಸುವ ಕುರಿತು ನಗರದ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ (BMCRC) ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಅಣಕು ಪ್ರದರ್ಶನ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬಿಮ್ಸ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ತಡೆಗಟ್ಟುವಿಕೆಯಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಜವಾಬ್ದಾರಿಗಳು ಹಾಗೂ ಜಾಗೃತಿ ಮೂಡಿಸುವ ಕುರಿತು ಅಣಕು ಪ್ರದರ್ಶನದಲ್ಲಿ ವೈದ್ಯರು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಮನವರಿಕೆ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಭಾಗವಹಿಸಿ ಮಾತನಾಡಿ, ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ತುರ್ತು ಪರಿಸ್ಥಿತಿ ಸಂದರ್ಭ ಬಂದಾಗ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವೈದ್ಯರು, ಶುಶ್ರೂಷಕರು, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಒಂದೆಡೆ ಸೇರಲು ಧ್ವನಿವರ್ಧಕ ಅಳವಡಿಸಬೇಕು ಎಂದು ಬಿಮ್ಸ್ ಆಡಳಿತಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬರುವ ಸಾರ್ವಜನಿಕರಿಗೆ ಎಲ್ಲಾ ಮಾಹಿತಿಯನ್ನು ಒದಗಿಸುವ ಕಾರ್ಯವಾಗಬೇಕು. ಇದಕ್ಕೆ ಪರ್ಯಾಯವಾಗಿ ಧ್ವನಿವರ್ಧಕಗಳ ಬಳಸಬೇಕು. ಆಸ್ಪತ್ರೆಯಲ್ಲಿ ಯಾವುದೇ ರೀತಿಯ ತತ್‌ಕ್ಷಣ ಬೆಂಕಿಗೆ ನಾಂದಿಯಾಗುವಂತಹ ವಸ್ತುಗಳ ಮೇಲೆ ನಿಗಾವಹಿಸಬೇಕು. ತುರ್ತು ಸಂದರ್ಭದಲ್ಲಿ ಅತ್ಯಂತ ಎಚ್ಚರದಿಂದಿರಬೇಕು ಎಂದು ಹೇಳಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪೊಲೀಸ್ ಪಾಟೀಲ್ ಮಾತನಾಡಿ, ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದಲ್ಲಿ ಜಾಗರೂಕರಾಗಿರಬೇಕು. ಬೆಂಕಿ ನಂದಿಸುವ ಸಾಧನಗಳನ್ನು ಸುವ್ಯವಸ್ಥೆಯಲ್ಲಿ ಇಟ್ಟುಕೊಳ್ಳಬೇಕು. ಅಗ್ನಿಶಾಮಕ ದಳದವರು 24 ಗಂಟೆಯೂ ಸೇವೆ ನೀಡುತ್ತಾರೆ. ಜನರೂ ಜಾಗೃತರಾಗಿರಬೇಕು ಎಂದು ತಿಳಿಸಿದರು.

ಅಪಘಾತ ಸ್ಥಳದಲ್ಲಿ ನೀರಿನ ಸೌಕರ್ಯವಿಲ್ಲದಿದ್ದರೆ ಬೆಂಕಿಯನ್ನಾರಿಸುವುದು ಕಷ್ಟ. ಇಂಥ ಸನ್ನಿವೇಶಗಳಲ್ಲಿ ಆಧುನಿಕ ರೀತಿಯಲ್ಲಿ ತಯಾರಿಸಲಾಗಿರುವ ಬೆಂಕಿ ಆರಿಸುವ ಸಾಧನಗಳನ್ನು (ಫೈರ್ ಎಕ್ಸ್ಟಿಂಗ್ವಿಷರ್ಸ್) ಉಪಯೋಗಿಸಲಾಗುತ್ತದೆ. ಹಾಗಾಗಿ ಸಾರ್ವಜನಿಕರು ಇವುಗಳ ಸಾಮಾನ್ಯ ಮಾಹಿತಿಯೂ ಹೊಂದಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಬೆಂಕಿ ಆರಿಸುವ ಸಾಧನಗಳನ್ನು (ಫೈರ್ ಎಕ್ಸ್ಟಿಂಗ್ವಿಷರ್ಸ್) ಬಳಸಿ ಬೆಂಕಿ ನಂದಿಸುವ ಕಾರ್ಯದ ಅಣಕು ಪ್ರದರ್ಶಿಸಲಾಯಿತು.
ಬಳಿಕ ಅಗ್ನಿಶಾಮಕ ಅಧಿಕಾರಿಗಳ ತಂಡ ಮತ್ತು ಬಿಮ್ಸ್ ನ ವೈದ್ಯಕೀಯ ಅಧೀಕ್ಷಕರಾದ ಡಾ.ಇಂಧುಮತಿ ಅವರ ನೇತೃತ್ವದಲ್ಲಿ ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿಗಳ ತಂಡ ರಚಿಸಿ, ಕುತೂಹಲಕಾರಿಯಾಗಿ ಅಣಕು ಪ್ರದರ್ಶನ ನಡೆಸಲಾಯಿತು.

ಅಣಕು ಪ್ರದರ್ಶನದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದಲ್ಲಿ ಬಳಸಬಹುದಾದ ಬೆಂಕಿ ನಂದಿಸುವ ಸಾಧನಗಳು, ಅಗ್ನಿ ಸಂಭವಿಸಿದ ಸ್ಥಳದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸುವುದು, ಪ್ರಥಮ ಚಿಕಿತ್ಸೆ ಹಾಗೂ ಇತರೆ ಕ್ರಮಗಳ ಕುರಿತು ಪರಿಪೂರ್ಣ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಣಿತರಾದ ಪರಮೇಶ್ ಸೇರಿದಂತೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಇತರೆ ವೈದ್ಯಾಧಿಕಾರಿಗಳು, ಶುಶ್ರೂಷಕರು, ಸಿಬ್ಬಂದಿ ವರ್ಗದವರು ಹಾಗೂ ಇತರರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!