ಹೈದರಾಬಾದ್; ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿ (Gali Janardhana Reddy) ನಾಲ್ವರು ಅಪರಾಧಿಗಳಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿದೆ.
ಗಾಲಿ ಜನಾರ್ದನ ರೆಡ್ಡಿ, ಅವರ ಪಿಎ ಅಲಿ ಖಾನ್, ಬಿ.ವಿ. ಶ್ರೀನಿವಾಸ ರೆಡ್ಡಿ, ರಾಜಗೋಪಾಲ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ
ನಾಂಪಲ್ಲಿ ಸಿಬಿಐ ನ್ಯಾಯಾಲಯವು ಈ ನಾಲ್ವರಿಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ
ತೆಲಂಗಾಣ ಹೈಕೋರ್ಟ್ ಅವರು ದೇಶ ಬಿಟ್ಟು ಹೋಗಬಾರದು ಮತ್ತು 10 ಲಕ್ಷ ರೂ. ವೈಯಕ್ತಿಕ ಬಾಂಡ್ ಸಲ್ಲಿಸಬೇಕು ಎಂಬ ಷರತ್ತು ವಿಧಿಸಿದೆ.
ಹಿನ್ನೆಲೆ
ಆಂಧ್ರಪ್ರದೇಶದಲ್ಲಿ ವೈ.ಎಸ್ ರಾಜಶೇಖರರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು.
ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು.
ಗಣಿಗಾರಿಕೆ ಮಂಜೂರಾತಿ ವೇಳೆ ಇಲಾಖೆಗಳಿಂದ ಅಕ್ರಮವಾಗಿದೆ. ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ಆಗಿದೆ ಎಂದು ಆರೋಪಿಸಲಾಗಿತ್ತು.
ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಜನಾರ್ಧನ ರೆಡ್ಡಿ ಅವರ ಮೇಲಿದೆ.