ಆತ್ಮಹತ್ಯೆ ಪರಿಹಾರವಲ್ಲ.. ವಿದ್ಯಾರ್ಥಿಗಳು ಆತ್ಮ ಸ್ಥೈರ್ಯ ಬೆಳಸಿಕೊಳ್ಳಿ: ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್

Students should develop self-confidence: Inspector Dr. M.B. Naveen Kumar

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಗಳಿಗೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಕಳವಳಕಾರಿಯಾಗಿದ್ದು, ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರವಲ್ಲ ಎಂಬುದನ್ನು ಅರಿತು, ವಿದ್ಯಾರ್ಥಿಗಳು ಆತ್ಮ ಸ್ಥೈರ್ಯವನ್ನು ಬೆಳಸಿಕೊಳ್ಳಬೇಕೆಂದು ದೊಡ್ಡಬಳ್ಳಾಪುರ ಮಹಿಳಾ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಬಿ. ನವೀನ್ ಕುಮಾರ್ (Dr. M.B. Naveen Kumar) ಸಲಹೆ ನೀಡಿದರು.

ನಗರದ. ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆತ್ಮಹತ್ಯೆ ಪರಿಹಾರವಲ್ಲ.. ವಿದ್ಯಾರ್ಥಿಗಳು ಆತ್ಮ ಸ್ಥೈರ್ಯ ಬೆಳಸಿಕೊಳ್ಳಿ: ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್

ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಗಳಿಗೆ ಮನೋವ್ಯಾದಿಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಆಧುನಿಕ ಯುವ ಸಮುದಾಯಕ್ಕೆ ಕಳಂಕವಾಗಲಿದೆ, ರಾಷ್ಟ್ರಪಿತಾ ಮಹಾತ್ಮ ಗಾಂಧಿ ಅವರು ಹೇಳಿದ್ದಾರೆ ಆತ್ಮಹತ್ಯೆ ಮಹಾಪಾಪ ಎಂದು.

ವಿದ್ಯಾರ್ಥಿಗಳಿಗೆ ಆ ರೀತಿಯ ಸಂದರ್ಭ ಎದುರಾದಲ್ಲಿ, ಆ ಸ್ಥಳದಿಂದ, ಆ ಪರಿಸ್ಥಿತಿಯಿಂದ ಹೊರಬನ್ನಿ, ಯೋಚಿಸಿ.. ನಾ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸಾಧಿಸುವುದೇನು ಎಂಬುದನ್ನು ಪ್ರಶ್ನಿಸಿಕೊಳ್ಳಿ. ನಿಮಗೆ ಸಾಧಿಸುವ ಶಕ್ತಿಯಿಂದ ಪ್ರಾಣಿಗಳಿಗೆ ಇಲ್ಲದ ಬುದ್ದಿ ಇದೆ, ಓಡಾಡಲು ಕೈಕಾಲ್ ಇದೆ, ಸಾಧನೆ ಮಾಡಲು ಅನೇಕ ಅವಕಾಶಗಳಿವೆ ಇವುಗಳನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

ಬಾಲ ಕಾರ್ಮಿಕ ವಿರೋಧಿ ದಿನ

ಮುಂದಿವರಿದು ಮಾತನಾಡಿದ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಹಾಗೂ ಈ ಅನಿಷ್ಟ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜೂನ್‌ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.

ಆತ್ಮಹತ್ಯೆ ಪರಿಹಾರವಲ್ಲ.. ವಿದ್ಯಾರ್ಥಿಗಳು ಆತ್ಮ ಸ್ಥೈರ್ಯ ಬೆಳಸಿಕೊಳ್ಳಿ: ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್

ದೇಶದಲ್ಲಿ ಬಾಲಕಾರ್ಮಿಕರನ್ನು ನಿಷೇಧಿಸಲಾಗಿದ್ದು, ಹದಿನಾಲ್ಕು ವರ್ಷದೊಳಗಿನ ವಯಸ್ಸಿನ ಮಕ್ಕಳನ್ನು ಬಾಲ ಕಾರ್ಮಿಕರೆನ್ನಲಾಗಿದೆ.

ಓದುವ ವಯಸ್ಸಿನಲ್ಲಿ ದುಡಿಯಲು ಹೋಗಿ ಸುಂದರವಾದ ಬಾಲ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿರುವ ಬಾಲಕಾರ್ಮಿಕತನವನ್ನು ತೊಡೆದು ಹಾಕುವ ಉದ್ದೇಶದಿಂದ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ ಎಂದರು.

ಈ ವೇಳೆ ಪ್ರತಿಜ್ಞಾವಿಧಿ ಭೋಧಿಸಲಾಯಿತು.

ಆತ್ಮಹತ್ಯೆ ಪರಿಹಾರವಲ್ಲ.. ವಿದ್ಯಾರ್ಥಿಗಳು ಆತ್ಮ ಸ್ಥೈರ್ಯ ಬೆಳಸಿಕೊಳ್ಳಿ: ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸುನಿತಾ, ಮಹಿಳಾ ಠಾಣೆ ಪಿಎಸ್ಐ ಶುಭ, ಸಿಬ್ಬಂದಿಗಳಾದ ಶ್ರುತಿ, ಜಗದೀಶ್ ಕುಮಾರ್ ಸೇರಿದಂತೆ ಕಾಲೇಜಿನ ಉಪನ್ಯಾಸಕಗಳು ಹಾಜರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]