₹25 crore reserved for art competitions for schools, colleges and the public

ಗುಡ್ಮಾರ್ನಿಂಗ್ ನ್ಯೂಸ್: ಶಾಲಾ, ಕಾಲೇಜು, ಸಾರ್ವಜನಿಕರ ಚಿತ್ರಕಲಾ ಸ್ಪರ್ಧೆಗೆ ₹25 ಕೋಟಿ ಮೀಸಲು

ಬೆಂಗಳೂರು: “ಶಾಲಾ,‌ ಕಾಲೇಜು ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆಯನ್ನು ವರ್ಷಕ್ಕೆ ಮೂರು ದಿನ ಸರ್ಕಾರದ ವತಿಯಿಂದ ಏರ್ಪಡಿಸಲಾಗುವುದು. ಇದಕ್ಕಾಗಿ ₹25 ಕೋಟಿ ಮೀಸಲಿಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ಬ್ರಿಗೇಡ್ ಫೌಂಡೇಶನ್ ನಿಂದ ನವೀಕರಣಗೊಂಡ ವೆಂಕಟಪ್ಪ ಆರ್ಟ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು.

“ಡಿಸೆಂಬರ್ ಕೊನೆ ವಾರದಲ್ಲಿ ಹೆಚ್ಚು ರಜೆಗಳು ಇರುತ್ತವೆ. ಇದರ ಬಗ್ಗೆ ರೂಪುರೇಷೆಗಳನ್ನು ಒಂದು ವಾರದಲ್ಲಿ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದರು.

“ಯುವ ಪೀಳಿಗೆಗೆ ನಮ್ಮ ಇತಿಹಾಸ ತಿಳಿಯಬೇಕು ಎಂದು ವಿಧಾನಸೌಧ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಚಿತ್ರಸಂತೆ, ಪುಸ್ತಕ ಮೇಳೆ ಆಯೋಜಿಸಲಾಗಿದೆ. ಈ ಮೂಲಕ ಬೆಂಗಳೂರಿಗೆ ಹೊಸ ರೀತಿಯ ರೂಪ ನೀಡಲು ಪ್ರಯತ್ನ ಮಾಡಲಾಗುತ್ತಿದೆ” ಎಂದರು.

“ಬೆಂಗಳೂರಿನಲ್ಲಿ ಶಾಲೆಗೆ ಒಟ್ಟಿಗೆ ಕರೆದರೆ 30- 40 ಸಾವಿರ ಜನರು ಬರುತ್ತಾರೆ. ಅದಕ್ಕಾಗಿ ಶಾಲೆಗಳ ನಡುವೆ ಮೊದಲು ಸ್ಪರ್ಧೆ ನಡೆಸಿ ನಂತರ ಅಂತಿಮ ಸ್ಪರ್ಧೆ ಏರ್ಪಡಿಸುವ ಬಗ್ಗೆ ಆಲೋಚನೆ ಮಾಡಲಾಗುವುದು. ಇದನ್ನು ಹೇಗೆ ರೂಪಿಸಬೇಕು ಎಂದು ಕಲಾವಿದರು, ‌ಕಲಾಸಕ್ತರು ಸಲಹೆ ನೀಡಬೇಕು” ಎಂದರು.

“ನಮ್ಮ ಪರಂಪರೆ ನಮ್ಮ ಆಸ್ತಿ ಮುಂದಿನ ಪೀಳಿಗೆ ಇದನ್ನು ಉಳಿಸಿಕೊಂಡು ಹೋಗಬೇಕು. ಕಲೆ ಕಲೆಗಾಗಿ ಅಲ್ಲ ಕಲೆ ಸಮಾಜಕ್ಕಾಗಿ ಎನ್ನುವುದನ್ನು ನಾವು ಮರೆಯಬಾರದು. ವೆಂಕಟಪ್ಪ ಆರ್ಟ್ ಗ್ಯಾಲರಿ ಸರ್ಕಾರದ ಆಸ್ತಿಯಲ್ಲ, ಸಮಾಜದ ಆಸ್ತಿ” ಎಂದರು.

“ಕಲೆ ಪ್ರಪಂಚವನ್ನು ಉಳಿಸುತ್ತದೆ. ನಮ್ಮ ಕಲ್ಪನೆ ಜ್ಞಾನಕ್ಕಿಂತ ದೊಡ್ಡದು ಎಂದು ಹಿರಿಯರು ಹೇಳಿದ್ದಾರೆ. ಕಲೆಯನ್ನು ಕಣ್ಣಲ್ಲಿ ನೋಡಿದಾಗ ಮಾತ್ರ ಅನುಭವಿಸಲು ಸಾಧ್ಯ. ನಮ್ಮ ಕಲೆ ನಮ್ಮ ಆಸ್ತಿ. ಇದು ಉಳಿಯಬೇಕು ಎಂದರೆ ಪ್ರವಾಸೋದ್ಯಮ ಬೆಳೆಯಬೇಕು” ಎಂದರು.

“ನಾನು ಶಾಲಾ ದಿನಗಳಲ್ಲಿ ಬೇಲೂರು,‌ ಹಳೇಬೀಡು ಹಾಗೂ ಹೈದರಾಬಾದ್ ನ ಸಾಲಾರ್ ಜಂಗ್ ಮ್ಯೂಸಿಯಂಗೆ ಹೋಗಿದ್ದೆ. ಆಗ ನಮ್ಮ ಅಧ್ಯಾಪಕರಿಗೆ ನಮ್ಮಲ್ಲಿ ಈ ರೀತಿಯ ಮ್ಯೂಸಿಯಂ ಇಲ್ಲವೇ ಎಂದು ಕೇಳಿದ್ದೆ. ಇದಾದ ನಂತರ ನನ್ನನ್ನು ಮೂರು ತಿಂಗಳ ನಂತರ ಇಲ್ಲಿಗೆ ಕರೆದುಕೊಂಡು ಬಂದಿದ್ದರು” ಎಂದು ನೆನಪುಗಳನ್ನು ಮೆಲುಕು ಹಾಕಿದರು.

“ಬೆಂಗಳೂರಿನ ಟ್ರಾಫಿಕ್‌ ತೊಂದರೆಗಳನ್ನು ತಪ್ಪಿಸಲು ಪ್ರಯತ್ನ ಮಾಡುತ್ತಿದ್ದೇವೆ. ಒಂದು ದಿನಗಳಲ್ಲಿ ಇದಾಗುವ ಕೆಲಸವಲ್ಲ. ಆದರೆ ಪ್ರಯತ್ನ ‌ಬಿಡಬಾರದು. ಟನಲ್ ರಸ್ತೆ, ಫ್ಲೈ ಓವರ್, ಮೆಟ್ರೋ ಸೇರಿದಂತೆ ಅನೇಕ ಯೋಜನೆಗಳಿಗೆ ರೂಪುರೇಷೆಗಳನ್ನು ರೂಪಿಸಲಾಗಿದೆ” ಎಂದು ಹೇಳಿದರು.

“ಪ್ರಣವ್ ಮುಖರ್ಜಿ ಅವರು ಹಾಗೂ ಮನಮೋಹನ್ ಸಿಂಗ್ ಅವರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕು. ಅವರ ಕಾರಣಕ್ಕೆ ಸಿಎಸ್ ಆರ್ ನಿಧಿಯನ್ನು ಇಂತಹ ಸಮಾಜಮುಖಿ ಕೆಲಸಗಳಿಗೆ ಬಳಸಿಕೊಳ್ಳಲು ಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ 1 ಲಕ್ಷ‌ ಕೋಟಿ ಯೋಜನೆ ರೂಪಿಸಲಾಗಿದೆ” ಎಂದರು.

“ಬ್ರಿಗೇಡ್ ಫೌಂಡೇಶನ್ ಅವರು ಇದೊಂದೆ ಕೆಲಸ ಮಾಡುತ್ತಿಲ್ಲ. ಬೆಂಗಳೂರಿಗೆ ಹೊಸ ವಿನ್ಯಾಸ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರ ಎಂಟತ್ತು ಕಟ್ಟಡಗಳನ್ನು ಕಟ್ಟಿರಬಹುದು. ಹೆಚ್ಚಿನ ಕಟ್ಟಡಗಳನ್ನು ಬ್ರಿಗೇಡ್, ಇರ್ಫಾನ್ ಅವರು,‌ ಶೋಭಾ, ಪ್ರೇಸ್ಟೀಜ್ ಸೇರಿದಂತೆ ಅನೇಕ ಸಂಸ್ಥೆಗಳು ನಿರ್ಮಾಣ‌ ಮಾಡಿವೆ. ಹೊಸ ರೂಪ ನೀಡಿವೆ” ಎಂದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!