Bengaluru District Level Mango and Jackfruit Sale Fair from June 13 to 15

ಇಂದಿನಿಂದ ಜೂ.15 ವರೆಗೆ ಬೆಂ.ಗ್ರಾ‌.ಜಿಲ್ಲಾ ಮಟ್ಟದ ಮಾವು ಮತ್ತು ಹಲಸು ಮಾರಾಟ ಮೇಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ (Fruit Exhibition and Sales Fair-2025) ಕಾರ್ಯಕ್ರಮವನ್ನು ಜೂನ್ 13 ರಿಂದ 15 ರವರೆಗೆ ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾವು ಹಲಸು ಮೇಳ ಆಯೋಜನೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ದೃಷ್ಟಿಯಿಂದ ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಸಿಗುವಂತೆ ಮಾಡಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ “ಮಾವು ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025 ಅನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಮಾವು ಬೆಳೆಯನ್ನು 4966.79 ಹೆಕ್ಟೇರ್ ಪ್ರದೇಶದಲಿ ಬೆಳೆಯಲಾಗುತ್ತಿದ್ದು, ಪ್ರಮುಖವಾಗಿ ಬಾದಾಮಿ, ರಸಪುರಿ, ತೋತಾಪುರಿ, ಮಲಿಕಾ, ಸೇಂದೂರಾ ಮುಂತಾದ ತಳಿಗಳನ್ನು ಬೆಳೆಯಲಾಗುತ್ತಿದ್ದು ವಾರ್ಷಿಕ ಉತ್ಪಾದನೆ 20,000 ರಿಂದ 22,000 ಮೆಟ್ರಿಕ್ ಟನ್ ಗಳೆಂದು ಅಂದಾಜಿಸಲಾಗಿರುತ್ತದೆ. ಹಲಸು ಬೆಳೆಯನ್ನು 39.29 ಹೆಕ್ಟೇರ್ ಪ್ರದೇಶದಲಿ ಬೆಳೆಯುತ್ತಿದ್ದು, ವಾರ್ಷಿಕ ಉತ್ಪಾದನೆ 1500 ರಿಂದ 2000 ಮೆಟ್ರಿಕ್ ಟನ್ ನಮ್ಮ ಅಂದಾಜಿಸಲಾಗಿದೆ.

ರಾಜ್ಯದ ಮಾರುಕಟ್ಟೆಗಳಲ್ಲಿ ಬೆಲೆ ಕುಸಿದಿರುವುದು ಮಾವು ಮತ್ತು ಹಲಸು ಬೆಳೆಗಾರರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಈ ನಿಟ್ಟಿನಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ಹಣ್ಣುಗಳ ಮೇಳ ಆಯೋಜಿಸುವ ಮೂಲಕ ಬೆಳೆಗಾರರಿಗೆ ಬೆಂಬಲ ನೀಡಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ. ಬೇರೆ ಜಿಲ್ಲೆಯ ಮಾರಾಟಗಾರರು ಭಾಗವಹಿಸಸಬುದಾಗಿದ್ದು ಮಾರಟಗಾರರಿಗೆ ಮಳಿಗೆ ನೀಡಲಾಗುವುದು.

ಈ ಮೇಳದಲ್ಲಿ 10 ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದ್ದು ರೈತರಿಂದ ನೇರವಾಗಿ ಗ್ರಾಹಕರು ಖರೀದಿ ಮಾಡಬಹುದಾಗಿದೆ.

ಸಾರ್ವಜನಿಕರು ಕೂಡ ಗುಣಮಟ್ಟದ ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದ್ದು, ಮೇಳದ ಸದುಪಯೋಗ ಪಡೆದುಕೊಳ್ಳಲು ಸಿಇಒ ಕೋರಿದರು.

ಸಸ್ಯ ಸಂತೆ

ಮೇಳದಲ್ಲಿ ಸಸ್ಯ ಸಂತೆ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು.

ಸಸ್ಯ ಸಂತೆ ಯಲ್ಲಿ ಮಾವು, ಸೀಬೆ, ತೆಂಗು, ನೆರಳೆ, ಕರಿಬೇವು ಇತ್ಯಾದಿ ಸಸಿಗಳು ಹಾಗೂ ಅಲಂಕಾರಿಕ ಗಿಡಗಳನ್ನು ಮಾರಾಟ ಮಾಡಲು ಉದ್ದೇಶಿಸಲಾಗಿದೆ.

ಮಾವು ಹಲಸು ಮಾರಾಟ ಮೇಳದ ಉದ್ಘಾಟನೆಯನ್ನು ಜೂನ್ 13 ರ ಬೆಳಿಗ್ಗೆ 11.00 ಗಂಟೆಗೆ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೇರವೇರಿಸಲಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಉಪಸ್ಥಿತರಿರುತ್ತಾರೆ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ರವರು ಸಸ್ಯ ಸಂತೆ ಮೇಳವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರು, ಮಾನ್ಯ ಶಾಸಕರು ವಿಧಾನ ಸಭೆ, ಶಾಸಕರು ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು ಭಾಗವಹಿಸಲಿದ್ದಾರೆ ಎಂದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!