Inauguration of the Literary S.L. Bhairappa Foundation

ಸಾಹಿತಿ ಎಸ್.ಎಲ್.ಭೈರಪ್ಪ ಪ್ರತಿಷ್ಠಾನ ಉದ್ಘಾಟನೆ

ಬೆಂಗಳೂರು: ಸಾಹಿತಿ ಎಸ್.ಎಲ್.ಭೈರಪ್ಪ (S.L.Bhyrappa) ಅವರ ಜೀವನ ಮತ್ತು ಸಾಹಿತ್ಯಕ್ಕೆ ಎರಡು ವಿಶ್ಲೇಷಣೆ ಅಗತ್ಯವಿಲ್ಲ. ಅವರ ಜೀವನ ಮತ್ತು ಬದುಕು ಎರಡೂ ಒಂದೇ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಅಭಿಪ್ರಾಯಪಟ್ಟರು.

ನಗರದ ಬಿಎಂಎಸ್ ಎಂಜನೀಯರಿಂಗ್ ಕಾಲೇಜಿನಲ್ಲಿ ನಡೆದ ಸಾಹಿತಿ ಎಸ್.ಎಲ್ ಭೈರಪ್ಪ ಪ್ರತಿಷ್ಠಾನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಎಸ್.ಎಲ್. ಭೈರಪ್ಪನವರ ಕೃತಿಗಳನ್ನು ಅರ್ಥ ಮಾಡಿಕೊಳ್ಳುವುದೇ ಕಷ್ಟ. ನಾನು ಪರ್ವ ಕಾದಂಬರಿಯನ್ನು ಕಾಲೇಜು ಜೀವನದಲ್ಲಿಯೇ ಓದಲು ಪ್ರಯತ್ನ ಮಾಡಿದ್ದೆ, ಅಷ್ಟು ಸುಲಭವಾಗಿ ಅರ್ಥವಾಗಿರಲಿಲ್ಲ. ಕೆಲವು ವರ್ಷಗಳ ನಂತರ ಮತ್ತೆ ಓದಿದೆ. ಪ್ರತಿ ಸಾರಿ ಓದಿದಾಗ ಹೊಸ ಆಯಾಮ ಸಿಗುತ್ತದೆ. ನನಗೆ ಕಾಡಿರುವ ಎರಡು ಪುಸ್ತಕಗಳು ಒಂದು ಭೈರಪ್ಪ ಅವರ ಕಾದಂಬರಿ ಹಾಗೂ ಸ್ವಾಮಿ ವಿವೇಕಾನಂದರ ಲೈಫ್ ಆಪ್ಟರ್ ಡೆತ್ ಎಂದು ಹೇಳಿದರು.

ಸ್ವಾಮಿ ವಿವೇಕಾನಂದರ ಲೈಫ್ ಆಪ್ಟರ್ ಡೆತ್ ಪುಸ್ತಕದಲ್ಲಿ ವಿವೇಕಾನಂದರು ಸಾಧಕರಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವುದು ಸಾಧಕ. ಅಂತಹ ಒಬ್ಬ ಸಾಧಕರು ಎಸ್. ಎಲ್. ಭೈರಪ್ಪ ಅವರು, ಅವರ ಜೀವನ ಮತ್ತು ಸಾಹಿತ್ಯಕ್ಕೆ ಎರಡು ವಿಶ್ಲೇಷಣೆ ಅಗತ್ಯವಿಲ್ಲ. ಜೀವನ ಮತ್ತು ಬದುಕು ಎರಡೂ ಒಂದೇ ಆಗಿದೆ. ಕೆಲವರು ದೊಡ್ಡ ಪ್ರಶಸ್ತಿಗಳನ್ನು ತೆಗೆದುಕೊಂಡಿದ್ದಾರೆ. ಆದರೆ, ಅವರ ಬದುಕು ಮತ್ತು ಬರಹಕ್ಕೆ ತದ್ವಿರುದ್ದವಾಗಿರುತ್ತದೆ ಎಂದರು.

ಬದುಕನ್ನು ತಿಳಿದುಕೊಳ್ಳುವುದೇ ಕಷ್ಟ. ಅಂತಹ ಬದುಕನ್ನು ಆದರ್ಶವಾಗಿಟ್ಟುಕೊಂಡು ಸಾಹಿತ್ಯ ಬರೆಯುವುದು ದೊಡ್ಡ ಸವಾಲು ಅವರಿಗೆ ಇನ್ನೊಬ್ಬ ವ್ಯಕ್ತಿ, ಇನ್ನೊಂದು ವಿಚಾರ ಅವರಿಗೆ ಸವಾಲು ಅಲ್ಲ. ಅವರು ಬಹಳ ಗಟ್ಟಿಯಾಗಿದ್ದಾರೆ. ಆದರೆ, ಅವರು ಬರೆಯುವ ಪ್ರತಿಯೊಂದು ಶಬ್ದವೂ ಪರೀಕ್ಷೆ. ಒಂದು ಕೃತಿ ಬರಬೇಕಾದರೆ ಮರು ಜನ್ಮ ಪಡೆಯುತ್ತ ಬಂದಿದೆ.

ಇದನ್ನು ಬರೆಯಬೇಕೆಂದರೆ ಎಷ್ಟು ಕಷ್ಟ ಇದೆ. ಅಷ್ಟು ಸುಲಭ ಇಲ್ಲ. ಅವರು ಯಾವುದೇ ಪ್ರಶಸ್ತಿಗೂ ಲಾಬಿ ಮಾಡಿಲ್ಲ. ಕೆಲವರು ನೊಬೆಲ್ ಪ್ರಶಸ್ತಿಗೂ ಲಾಬಿ ಮಾಡಿದವರು ಇದ್ದಾರೆ. ಎಲ್ಲರೂ ಒಂದೇ ಥರ ವಿಚಾರ ಮಾಡಲು ಸಾಧ್ಯವಿಲ್ಲ. ವಿಭಿನ್ನತೆ ಬಹಳ ಮುಖ್ಯ.

ಭೈರಪ್ಪನವರು ಪಾತ್ರಗಳಲ್ಲಿ ವಿಭಿನ್ನತೆ ತಂದಿದ್ದಾರೆ. ಪುಸ್ತಕದ ಮೊದಲ ಪುಟ ಓದಿದರೆ ಮುಂದಿನ ಪುಟ ತಿರುವಬೇಕು ಎನಿಸಬೇಕು. ಅವರು ಪೌರಾಣಿಕ ಮತ್ತು ಆಧುನಿಕ ವಿಷಯಗಳನ್ನೊಳಗೊಂಡ ಕಾದಂಬರಿ ಬರೆದಿದ್ದಾರೆ‌.

ಮುಂದಿನ ತೊಬ್ಬಂತೈದು ವರ್ಷಗಳ ನಂತರ ಓದಿದರೂ ಆಗಲೂ ಪ್ರಸ್ತುತವಾದ ವಿಷಯ ಅವರು ಬರೆದಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಗೌರವಧನ ಬರುವುದು ಭೈರಪ್ಪ ಅವರಿಗೆ. ಭೈರಪ್ಪ ಅವರು ಬಡವರಾಗಲು ಓದುಗರು ಬಿಟ್ಟಿಲ್ಲ. ನಾವು ದುಡ್ಡು ಕೊಟ್ಟು ಪುಸ್ತಕ ಓದಬೇಕು. ಭೈರಪ್ಪ ಅವರದು ಸಿದ್ದರಾಮಯ್ಯ ಅವರ ಬಜೆಟ್ ಇದ್ದಹಾಗೆ. ತೆರಿಗೆ ಸಂಗ್ರಹ ಹೆಚ್ಚಾಗಿದೆ ಎನ್ನುತ್ತಾರೆ. ಆದರೆ ಸಾಲ ಮಾಡುವುದು ಹೆಚ್ಚುತ್ತಿದೆ ಎಂದರು.

ಭೈರಪ್ಪ ಅವರು ತಮ್ಮ ಊರಿಗೆ ಕುಡಿಯುವ ನೀರಿನ ಯೋಜನೆ ಮಾಡಲು ನನ್ನ ಬಳಿ ಬಂದರು. ಅವರಿಗೆ ಹುಟ್ಟೂರಿನ ಬಗ್ಗೆ ಇದ್ದ ಅಭಿಮಾನ ಮೆಚ್ಚುವಂಥದ್ದು. ಬಹಳ ಜನ ಹುಟ್ಟೂರು ಮರೆಯುತ್ತಾರೆ. ಭೈರಪ್ಪ ಅವರ ಕಳಕಳಿಯ ಮುಂದೆ ನಮ್ಮದೇನು ಅಲ್ಲ. ಅವರ ಊರಿಗೆ ನೀರು ಕೊಡಿಸಿರುವ ಗೌರವ ಅವರಿಗೆ ಸಲ್ಲಬೇಕು. ಅವರು ಇನ್ನೊಂದು ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಅವರ ಹೆಸರಿನಲ್ಲಿ ಟ್ರಸ್ಟ್ ಮಾಡಿದ್ದಾರೆ. ನಮಗೆ ಸಮಾಜ ಏನು ಕೊಟ್ಟಿದೆಯೋ ಅದನ್ನು ನಾವು ಸಮಾಜಕ್ಕೆ ವಾಪಸ್ ಕೊಟ್ಟಾಗ ನಮ್ಮ ಬದುಕಿನ ಬ್ಯಾಲೆನ್ಸ್ ಸೀಟ್ ಪೂರ್ತಿಯಾಗುತ್ತದೆ. ಭೈರಪ್ಪನವರು ತಮಗೆ ಸಮಾಜ ಕೊಟ್ಟಿರುವುದನ್ನು ಸಮಾಜಕ್ಕೆ ಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಾಹಿತಿ ಎಸ್. ಎಲ್. ಭೈರಪ್ಪ, ಶತಾವಧಾನಿ ಆರ್.ಗಣೇಶ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಹನಾ ವಿಜಯಕುಮಾರ್, ಅರುಣ್ ಹಾಜರಿದ್ದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!