ಉತ್ತರಾಖಂಡ: ಇಂದು ಬೆಳಿಗ್ಗೆ 5:20 ರ ಸುಮಾರಿಗೆ, ಶ್ರೀ ಕೇದಾರನಾಥ ಧಾಮದಿಂದ ಗುಪ್ತಕಾಶಿಗೆ ಹೋಗುತ್ತಿದ್ದ ಹೆಲಿಕಾಪ್ಟರ್ (helicopter crash)ಗೌರಿಕುಂಡ್ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ.
ಪೈಲಟ್ (5 ವಯಸ್ಕರು ಮತ್ತು 1 ಮಗು) ಸೇರಿದಂತೆ ಆರು ಪ್ರಯಾಣಿಕರಿದ್ದರು ಎನ್ನಲಾಗಿದೆ. ಎಲ್ಲರೂ ಸಾವನಪ್ಪಿದ್ದಾರೆ ಎಂದು ವರದಿಯಾಗಿ.
ಹೆಲಿಕಾಪ್ಟರ್ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ನವರು ಎನ್ನಲಾಗಿದೆ.
ಪರಿಹಾರ ಮತ್ತು ರಕ್ಷಣಾ ಕಾರ್ಯದ ದೃಷ್ಟಿಯಿಂದ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳನ್ನು ಘಟನೆಯ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (ಯುಸಿಎಡಿಎ) ತಿಳಿಸಿದೆ.
ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.