ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ (KSRTC) 8 ವರ್ಷಗಳ ಬಳಿಕ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ನಿಯೋಜನಾ ಆದೇಶ ವಿತರಣೆಯನ್ನು ಮಾಡಲು ತೀರ್ಮಾನಿಸಿದ್ದು, ಸಾಂಕೇತಿಕವಾಗಿ ಇಂದು 51 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ ಮಾಡಲಾಗಿದೆ.
ಚಾಲನಾ ಸಿಬ್ಬಂದಿಯ ನೇಮಕಾತಿಯು ಪಾರದರ್ಶಕವಾಗಿ ಮಾಡಿದ್ದು, ಮಾನವ ಹಸ್ತಕ್ಷೇಪವಿರುವುದಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿರುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ನಾಲ್ಕು ಸಾರಿಗೆ ನಿಗಮಗಳಿಂದ ಸುಮಾರು 1000ಕ್ಕೂ ಹೆಚ್ಚು ಮೃತರ ಅವಲಂಭಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿರುತ್ತದೆ.
ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ ₹1 ಕೋಟಿ ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ ₹10 ಲಕ್ಷಗಳ ಕುಟುಂಬ ಕಲ್ಯಾಣ ಯೋಜನೆಯಡಿ ಪರಿಹಾರವನ್ನು ನೀಡಲಾಗುತ್ತಿದೆ ಎಂದರು.
KSRTC ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಕಾರ್ಯಕ್ರಮದಲ್ಲಿ ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕಿ ಡಾ.ನಂದಿನಿ ದೇವಿ ಕೆ., ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕ ಇಬ್ರಾಹಿಂ ಮೈಗೂರ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ. ಎಸ್, ಕಾರ್ಮಿಕ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು., ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.