ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ಬೆಂಗಳೂರು: ದೊಡ್ಡಬಳ್ಳಾಪುರ ಬಳಿ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನ (ಎಡಿಬಿ) ಉನ್ನತ ಅಧಿಕಾರಿಗಳ ತಂಡಕ್ಕೆ ಗುರುವಾರ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿ ವಿವರಿಸಲಾಯಿತು.

ಎಡಿಬಿ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಫೂಕ್ ಯೆನ್ ಚಾಂಗ್ ನೇತೃತ್ವದ ಒಂಬತ್ತು ಜನರ ತಂಡಕ್ಕೆ ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ.ಮಹೇಶ್, ಕರ್ನಾಟಕ ಉದ್ಯೋಗಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಹಾಗೂ ಕೈಗಾರಿಕಾ ಸಚಿವರ ಆಪ್ತ ಕಾರ್ಯದರ್ಶಿ ನರೇಂದ್ರ ಅವರ ನೇತೃತ್ವದಲ್ಲಿ ಪ್ರ್ಯಾತ್ಯಕ್ಷಿಕೆ ನೀಡಲಾಯಿತು.

ಉದ್ದೇಶಿತ ಕ್ವಿನ್ ಸಿಟಿಯಲ್ಲಿ ದೇಶ ವಿದೇಶಗಳ ಮುಂಚೂಣಿ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಕ್ಯಾಂಪಸ್ ಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ಹಾಕಿಕೊಂಡಿದೆ.

ಈ ‘ಕ್ವಿನ್ ಸಿಟಿ’ಯನ್ನು ಜ್ಞಾನ-ಆರೋಗ್ಯ-ನಾವೀನ್ಯಾತಾ ವಲಯವನ್ನಾಗಿಸುವುದು ಸರ್ಕಾರದ ಉದ್ದೇಶವಾಗಿದೆ.

ಈ ಹಿನ್ನೆಲೆಯಲ್ಲಿ, ಇಲ್ಲಿ ತಮ್ಮ ಕ್ಯಾಂಪಸ್ ಗಳನ್ನು ಸ್ಥಾಪಿಸಲು ಮುಂದಾಗುವ ಶಿಕ್ಷಣ ಸಂಸ್ಥೆಗಳು ಬ್ಯಾಂಕಿನಿಂದ ಸಾಲ ನೆರವು ಕೋರುವ ಸಾಧ್ಯತೆ ಇರುತ್ತದೆ. ಹೀಗಾಗಿ, ಎಡಿಬಿ ಉನ್ನತಾಧಿಕಾರಿಗಳಿಗೆ ಯೋಜನೆ ಕುರಿತು ವಿವರ ಮಾಹಿತಿ ಇದ್ದರೆ ಅನುಕೂಲವಾಗುತ್ತದೆ ಎಂಬುದನ್ನು ಗಮನದಲ್ಲಿರಿಸಿಕೊಂಡು ಮಾಹಿತಿ ಪ್ರಸ್ತುತಪಡಿಸಲಾಯಿತು.

ಯೋಜನೆ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ ಎಡಿಬಿ ನಿಯೋಗದ ಸದಸ್ಯರು, ಎಂತಹ ಸಂಸ್ಥೆಗಳು ಕ್ವಿನ್ ಸಿಟಿಗೆ ಬರಲಿವೆ, ಉದ್ದೇಶಿತ ಸಂಪರ್ಕ ವ್ಯವಸ್ಥೆ, ಮೂಲಸೌಕರ್ಯ ಇನ್ನಿತರ ಅಂಶಗಳ ಬಗ್ಗೆ ವಿವರ ಪಡೆದರು. ನಂತರ, ಅವರು ಪ್ರಸ್ತಾವಿತ ಕ್ವಿನ್ ಸಿಟಿ ಕುರಿತು ಮೆಚ್ಚುಗೆ ಮಾತುಗಳನ್ನು ಕೂಡ ಆಡಿದರು.

ಶಾಲಾ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ ಉನ್ನತ ಶಿಕ್ಷಣದ ವಲಯಗಳಿಗೆ ಸಂಬಂಧಿಸಿದ ಹಲವು ಉಪಕ್ರಮಗಳಲ್ಲಿ ಭಾಗಿಯಾಗುವ ಬಗ್ಗೆ ಆಸಕ್ತಿ ಹೊಂದಿರುವುದಾಗಿ ತಿಳಿಸಿದ ಎಡಿಬಿ ಪ್ರತಿನಿಧಿಗಳು, “ಕ್ವಿನ್ ಸಿಟಿಯಲ್ಲಿನ ಅವಕಾಶಗಳ ಬಗ್ಗೆ ಪರಿಶೋಧಿಸಲಾಗುವುದು. ರಾಜ್ಯ ಸರ್ಕಾರದ ಜೊತೆ ನಿಕಟ ಸಂಪರ್ಕದಲ್ಲಿದ್ದು ಸಹಭಾಗಿತ್ವದ ಅವಕಾಶಗಳ ಬಗ್ಗೆ ಸಮಾಲೋಚನೆ ಮುಂದುವರಿಸಲಾಗುವುದು” ಎಂದರು.

ಎಡಿಬಿಯ ಶಿಕ್ಷಣ ವಿಭಾಗದ ತಜ್ಞರಾದ ಕೆ.ಡಬ್ಲ್ಯು.ಸ್ಯಾಮ್ಯುಯೆಲ್, ನಹ್ಯುನ್ ಕಿಮ್, ಶಾನ್ ಎಂ.ವೆಲ್ ಬೌರ್ನ್, ಲೀಹ್ ಮೆಕ್ ಮ್ಯಾನಸ್ ಮತ್ತಿತರರು ಇದ್ದರು

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!