ಬೆಂಗಳೂರು: ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮಾಜಿ ಸಂಸದ ಡಿಕೆ ಸುರೇಶ್ (DK Suresh) ನಾಮಪತ್ರ ಸಲ್ಲಿಸಿದರು.
ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗೆ ಡಿಕೆ ಸುರೇಶ್ ಅವರು ನಾಮಪತ್ರ ಸಲ್ಲಿಸಿದರು.
ಈ ವೇಳೆ ಎಂಎಲ್ಸಿಗಳಾದ ಪುಟ್ಟಣ್ಣ, ಎಸ್ ರವಿ, ಮುಖಂಡರಾದ ಆರ್ ಕೆ ರಮೇಶ್ ಮತ್ತಿತರರು ಇದ್ದರು.