Protect children from severe diarrhea (bedi) complications

ಗುಡ್ಮಾರ್ನಿಂಗ್ ನ್ಯೂಸ್: ತೀವ್ರ ಅತಿಸಾರ (ಬೇದಿ) ತೊಂದರೆಗಳಿಂದ ಮಕ್ಕಳನ್ನು ರಕ್ಷಿಸಿ

ಬೆಳಗಾವಿ: ತೀವ್ರ ಅತಿಸಾರದಿಂದ ಮಕ್ಕಳ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವುದನ್ನು ಗುರಿಯಾಗಿಸಿ ಅತಿಸಾರ (Diarrhea) ನಿಲ್ಲಿಸಿ ಅಭಿಯಾನ-2025 ಅನ್ನು ಕಡ್ಡಾಯವಾಗಿ ಆಚರಿಸಿ ಸಾರ್ವಜನಕರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸಬೇಕೆಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು ಮಾತನಾಡಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಾಡಿ ಕುಂಠಿತ ಪ್ರಗತಿ ಹೊಂದಿರುವ ತಾಲ್ಲೂಕಾ ಆರೋಗ್ಯ ಅಧಿಕಾರಿಗಳಿಗೆ ಪ್ರಗತಿ ಸಾಧಿಸಿ ವರದಿಯನ್ನು ಸಲ್ಲಿಸಲು ತಿಳಿಸಿದರು.

ಜನಸಾಮಾನ್ಯರಲ್ಲಿ ವಿಶೇಷವಾಗಿ ಪೋಷಕರು ಮತ್ತು ಮಕ್ಕಳಲ್ಲಿ ಪರಿಸರ ನೈರ್ಮಲ್ಯ, ಕೈ ತೊಳೆಯುವ ಸರಿಯಾದ ವಿಧಾನ, ವೈಯಕ್ತಿಕ ಶುಚಿತ್ವ ಹಾಗೂ ಅತಿಸಾರದಿಂದ ಪೀಡಿತ ಮಕ್ಕಳಿಗೆ ತುರ್ತು ಆರೈಕೆ ಮತ್ತು ಸೂಕ್ತ ಚಿಕಿತ್ಸೆ ನೀಡುವ ಕುರಿತು ಅರಿವು ಮೂಡಿಸುವುದು ಮತ್ತು ಈ ಮೂಲಕ 0-5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಶ್ವಿಯಾಗಿ ಹಮ್ಮಿಕೊಂಡು ಜಿಲ್ಲೆಯಲ್ಲಿ ಯಾವುದೇ ಮಗು ಅತಿಸಾರದಿಂದ ಬಳಲದಂತೆ ನೋಡಿಕೊಳ್ಳಲು ಸಭೆಯಲ್ಲಿ ಎಲ್ಲ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ಮಳೆಗಾಲ ಪ್ರಾರಂಭವಾಗಿರುವದರಿAದ ಅಲ್ಲಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪನ್ನವಾಗಿ ಕೀಟಜನ್ಯ ಸಾಂಕ್ರಾಮಿಕ ರೋಗಗಳಾದ ಡೆಂಗೀ, ಚಿಕುನ್ ಗುನ್ಯಾ, ಮಲೇರಿಯಾ ಕಾಯಿಲೆಗಳು ಹರಡಬಹುದಾಗಿದ್ದು, ಲಾರ್ವಾ ಸಮೀಕ್ಷೆಯನ್ನು ಕೈಕೊಂಡು ಸೊಳ್ಳೆ ಉತ್ಪನ್ನ ತಾಣಗಳನ್ನು ನಾಶಪಡಿಸಲು ಸಕ್ರೀಯ ಸಮೀಕ್ಷೆ ಕೈಕೊಳ್ಳಬೇಕೆಂದು ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು

ಜಿಲ್ಲೆಯಲ್ಲಿ ವಯಸ್ಕರಿಗೆ ಬಿ.ಸಿಜಿ. ಲಸಿಕೆಯನ್ನು ನೀಡಲಾಗುತ್ತಿದ್ದು, ಈ ಲಸಿಕೆಯನ್ನು 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ 18 ವರ್ಷ ಮೇಲ್ಪಟ್ಟ ಕಳೆದ ಐದು ವರ್ಷಗಳಲ್ಲಿ ಕ್ಷಯ ರೋಗದಿಂದ ಬಳಲಿದ ವ್ಯಕ್ತಿಗಳಿಗೆ, ಧೂಮ್ರಪಾನಿಗಳಿಗೆ, ಕ್ಷಯ ರೋಗಿಗಳ ಸಂಪರ್ಕವಿರುವವರಿಗೆ, ಮಧುಮೇಹ ರೋಗಿಗಳಿಗೆ ಹಾಗೂ ವಯಸ್ಸಿಗನುಗುಣವಾಗಿ ಕಡಿಮೆ ತೂಕ ಇರುವವರು ಬಿ.ಸಿಜಿ ಲಸಿಕೆಯನ್ನು ಪಡೆದು ಜಿಲ್ಲೆಯನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನು ಮಾಡಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ ಚಿಕ್ಕೋಡಿ ಅಪರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್. ಗಡೇದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವಿ.ವಿ.ಶಿಂಧೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಚಾಂದನಿ ದೆವಡಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಸ್ ಎಸ್ ಸಾಯನ್ನವರ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಗೀತಾ ಕಾಂಬಳೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿಶ್ವನಾಥ ಭೋವಿ, ಜಿಲ್ಲಾ ರೋಗವಾಹಕ ಆಶ್ರೀತರೋಗಗಳ ನಿಯಂತ್ರಣಾ ಅಧಿಕಾರಿ ಡಾ.ವಿವೇಕ ಹೊನ್ನಳ್ಳಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸಂಜಯ ದೊಡಮನಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ಉಪ ವಿಭಾಗದ ಎಚ್ ಅರುಣಕುಮಾರ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳು ಮತ್ತು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈಧ್ಯಾಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!