Amit Shah suggests a double fight against the Congress government: BY Vijayendra

ಕಾಂಗ್ರೆಸ್ ಸರ್ಕಾರದ ವಿರುದ್ಧ ದ್ವಿಗುಣ ಹೋರಾಟಕ್ಕೆ ಅಮಿತ್ ಶಾ ಸಲಹೆ: ಬಿವೈ ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಸರಕಾರದ ವಿರುದ್ಧ ನಮ್ಮ ಹೋರಾಟವನ್ನು ದ್ವಿಗುಣಗೊಳಿಸಬೇಕೆಂಬ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ರಾಷ್ಟ್ರೀಯ ಮುಖಂಡ ಅಮಿತ್ ಶಾ (Amith Sha) ಅವರು ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಮುಂಜಾನೆ ನಾನು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ಅರವಿಂದ ಬೆಲ್ಲದ್ ಅವರ ಜೊತೆಗೂಡಿ ಮಾನ್ಯ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಿದ್ದೇವೆ. ರಾಜ್ಯ ರಾಜಕಾರಣ, ಪ್ರಸ್ತುತ ಬೆಳವಣಿಗೆಗಳ ಕುರಿತು ಚರ್ಚಿಸಿದ್ದೇವೆ ಎಂದು ವಿವರಿಸಿದರು.

ಅಲ್ಪಸಂಖ್ಯಾತರ ಓಲೈಕೆ ನಿಟ್ಟಿನಲ್ಲಿ ರಾಜ್ಯ ಸರಕಾರ ತೀರ್ಮಾನ ತೆಗೆದುಕೊಳ್ಳುತ್ತಿದೆ. ನಿನ್ನೆ ವಸತಿ ಇಲಾಖೆಯಡಿ ಅಲ್ಪಸಂಖ್ಯಾತರಿಗೆ ಶೇ 10 ಇದ್ದ ಮೀಸಲಾತಿಯನ್ನು ಶೇ 15ಕ್ಕೆ ಏರಿಸಿದ್ದಾರೆ.

ದೇಶದ ಪ್ರಧಾನಿ ನರೇಂದ್ರ ಮೋದಿಯವರು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಔರ್ ಸಬ್ ಕಾ ಪ್ರಯಾಸ್’ ಆಧಾರದ ಮೇಲೆ ದೇಶದ ಹಿಂದೂಗಳು, ಅಲ್ಪಸಂಖ್ಯಾತರು ಸೇರಿ ಎಲ್ಲರಿಗೂ ನ್ಯಾಯ ಕೊಡುತ್ತಿದ್ದಾರೆ. ಮೋದಿಜೀ ಅವರು ಕೊಟ್ಟ ಕಿಸಾನ್ ಸಮ್ಮಾನ್ ಯೋಜನೆಯು ರೈತರಿಗೆ 6 ಸಾವಿರ ಜಮಾ ಆಗುತ್ತಿದ್ದು, ಇದು ಕೇವಲ ಹಿಂದೂಗಳಿಗೆ ಮಾತ್ರ ಅಲ್ಲ ಎಂದು ಗಮನ ಸೆಳೆದರು. ರೈತಾಪಿ ವರ್ಗದ ಎಲ್ಲ ಸಮುದಾಯ, ಧರ್ಮದವರಿಗೆ ಅದು ಜಮಾ ಆಗುತ್ತಿದೆ ಎಂದು ವಿವರಿಸಿದರು.

ಮೋದಿಜೀ ಅವರ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮವು ಕೇವಲ ಹಿಂದೂ ಹೆಣ್ಮಕ್ಕಳಿಗೆ ಮಾತ್ರ ಸೀಮಿತವಾಗಿಲ್ಲ. ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಖಂಡಿತವಾಗಿ ಭಗವಂತ ಒಳ್ಳೆಯದು ಮಾಡಲು ಸಾಧ್ಯವಿಲ್ಲ, ಬಿಜೆಪಿ ಹೋರಾಟ ಒಂದು ಕಡೆ ಇದ್ದರೆ, ಮುಖ್ಯಮಂತ್ರಿಗಳ ನಡವಳಿಕೆ ಅವರ ಸ್ಥಾನಕ್ಕೆ ಅಪಮಾನ ಮಾಡುವಂತಿದೆ ಎಂದು ಆಕ್ಷೇಪಿಸಿದರು.

ಜನರಿಂದ ಸರಕಾರಕ್ಕೆ ತಕ್ಕ ಉತ್ತರ

ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಬರುವ ದಿನಗಳಲ್ಲಿ ರಾಜ್ಯದ ಜನರೇ ಅವರಿಗೆ ಉತ್ತರ ನೀಡುತ್ತಾರೆ ಎಂದು ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಜೊತೆ ಸಮನ್ವಯಕ್ಕಾಗಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಮತ್ತು ಶಾಸಕರ ಜೊತೆ ಅಧಿವೇಶನಕ್ಕೆ ಮೊದಲು ಚರ್ಚೆ ಮಾಡುವುದಾಗಿ ಅವರು ಪ್ರಶ್ನೆಗೆ ಉತ್ತರ ನೀಡಿದರು.

ಲಂಚ ಇಲ್ಲದೇ ಕೆಲಸಗಳು ಆಗುತ್ತಿಲ್ಲ..
ವಸತಿ ಹಂಚಿಕೆಗೆ ಹಣ ಕೊಡಬೇಕೆಂಬ ಕಾಂಗ್ರೆಸ್ಸಿನ ಬಿ.ಆರ್.ಪಾಟೀಲ್ ಅವರ ಆರೋಪ ಕುರಿತ ಧ್ವನಿಸುರುಳಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ಹೈಕಮಾಂಡಿನ ಎಟಿಎಂ ಆಗಿ ಸರಕಾರವನ್ನು ಪರಿವರ್ತನೆಗೊಳಿಸಿದೆ.

ಹಿಂದೆ ಬಿಜೆಪಿಯ ಸರಕಾರದ ವಿರುದ್ಧ ಶೇ 40 ರ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದರು. ಇವತ್ತು ಜನಸಾಮಾನ್ಯರು, ಉದ್ಯಮಿಗಳು ಸೇರಿ ಯಾರನ್ನೇ ಕೇಳಿದರೂ ಶೇ 100 ಭ್ರಷ್ಟಾಚಾರ ನಡೆಯುವ ಬಗ್ಗೆ ಜನಸಾಮಾನ್ಯರೇ ಮಾತನಾಡುತ್ತಿದ್ದಾರೆ. ಈ ರೀತಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋದ ಬಗ್ಗೆ ಸ್ವತಃ ಆಡಳಿತ ಪಕ್ಷದ ಶಾಸಕರೇ ಬಹಿರಂಗ ಪಡಿಸಿದ್ದಾರೆ. ಯಾವುದೇ ಇಲಾಖೆಗೆ ಹೋದರೂ ಲಂಚ ಇಲ್ಲದೇ ಕೆಲಸಗಳು ಆಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿಗಳು ಸೇರಿ ಎಲ್ಲರೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ. ಬಿ.ಆರ್.ಪಾಟೀಲರ ಆಡಿಯೋ ಇವುಗಳಿಗೆ ಚಿಕ್ಕ ನಿದರ್ಶನ ಎಂದು ತಿಳಿಸಿದರು. ಈ ವಿಷಯದಲ್ಲಿ ಜನರು ಸರಕಾರದ ಬಗ್ಗೆ ಬೇಸತ್ತಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್‍ನವರು ಕಿರುಕುಳ ಕುರಿತ ಪ್ರಶ್ನೆಗೆ ಉತ್ತರ ನೀಡಿ, ಕಾನೂನು ತರುವುದಾಗಿ ಹೇಳಿದ್ದರು. ಇಂಥ ಘಟನೆ ಆದಾಗ ದೊಡ್ಡ ಭಾಷಣ ಬಿಗಿದಿದ್ದರು. ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಹೀಗಾದರೆ, ರಾಜ್ಯದಲ್ಲಿ ಏನಾಗಿದೆ ಪರಿಸ್ಥಿತಿ ಎಂದು ಕೇಳಿದರು. ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಳ ಕುರಿತು ಸದನದಲ್ಲೂ ಚರ್ಚೆ ಆಗಿದೆ. ಕಾನೂನು ತರುವುದಾಗಿ ಹೇಳಿದ್ದರು. ಯಾವುದನ್ನೂ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಟೀಕಿಸಿದರು.

RCB ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಹಾಗೂ 11 ಸಾವಿನ ನಂತರ ಹೊಸ ಕಾನೂನು ತರುವುದಾಗಿ ಕಥೆ ಹೇಳುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ರಾಜ್ಯ ಸರಕಾರ ತನ್ನ ಆದ್ಯತೆಯನ್ನು ಮರೆತು, ಅಭಿವೃದ್ಧಿಯೂ ಇಲ್ಲದೆ, ಭ್ರಷ್ಟಾಚಾರದಲ್ಲಿ ಮುಳುಗಿ ಹೋದ ಪರಿಣಾಮವಾಗಿ ರಾಜ್ಯದ ಜನರು ಸಮಸ್ಯೆ ಅನುಭವಿಸಬೇಕಾಗಿದೆ ಎಂದರು. ಪಕ್ಷದೊಳಗಿನ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದೇವೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]