ಉಡುಪಿ: ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠದಲ್ಲಿ ನಡೆದಿದೆ.
ಮೃತ ಪತ್ನಿಯನ್ನು ರೇಖಾ ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಗಣೇಶ್ ಪೂಜಾರಿ ಕೊಲೆ ಆರೋಪಿ ಎಂದು ವರದಿಯಾಗಿದೆ.
ಮದ್ಯ ವ್ಯಸನಿಯಾಗಿದ್ದ ಗಣೇಶ್ ಪೂಜಾರಿ ಜೂನ್19 ಗುರುವಾರ ರಾತ್ರಿ ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆ ಎನ್ನುವ ಸಿಟ್ಟಿನಿಂದ ವಿಪರೀತ ಕುಡಿದಿದ್ದಾನೆ. ಕಂಠ ಪೂರ್ತಿ ಕುಡಿದು ಮದ್ಯದ ಅಮಲಿನಲ್ಲಿದ್ದ ಗಣೇಶ್ ಮನೆಗೆ ಬಂದು ಪತ್ನಿ ರೇಖಾಳನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ.
ಕೊಲೆ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಣೇಶ್ ಪೂಜಾರಿಯನ್ನು ಬಂಧಿಸಿಲಾಗಿದೆ.