Karnataka BJP is in ICU, Amit Shah should know the reality; Yatnal

ಅಮಿತ್ ಶಾ ಅವರೇ ಕರ್ನಾಟಕ ಬಿಜೆಪಿ ಐಸಿಯುನಲ್ಲಿದೆ, ವಾಸ್ತವ ತಿಳಿದುಕೊಳ್ಳಿ; ಯತ್ನಾಳ್

ವಿಜಯಪುರ: ಕರ್ನಾಟಕ ಬಿಜೆಪಿ (karnatka BJP) ಐಸಿಯುನಲ್ಲಿದ್ದು (ICU), ಸಂಘಟನೆ ಇಲ್ಲವಾಗಿದೆ. ಹೊರಾಟಕ್ಕೆ ಕರೆ ನೀಡಿದರೆ 10,15 ಜನ ಸೇರುವುದು ಇಲ್ಲ. ಈ ವಾಸ್ತವ ಅಮಿತ್ ಶಾ ( Amit Sha) ತಿಳಿಯಬೇಕು ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagowda Patil Yatnal) ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಕರ್ನಾಟಕ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಿಜೆಪಿ ನಾಯಕತ್ವ ಸರಿ ಇಲ್ಲ. ಕುಮಾರಸ್ವಾಮಿ ಅವರ ಜೊತೆ ಹೊಂದಾಣಿಕೆ ಇಲ್ಲ. ಅವರು ಮಿತ್ರ ಪಕ್ಷ ಆದ್ರೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇವರೇ ಏನ್ ಏನೋ ಮಾಡ್ತಾ ಇದ್ದಾರೆ.

ಗೃಹಸಚಿವ ಅಮಿತ್ ಶಾ ಎಲ್ಲವನ್ನೂ ತಿಳಿದುಕೊಳ್ಳಬೇಕು, ಯಡಿಯೂರಪ್ಪ ಕುಟುಂಬದ ಬಗ್ಗೆ, ಅವರ ಅಸ್ತಿತ್ವ ಇಲ್ಲ ಅನ್ನೋದು ತಿಳ್ಕೋಬೇಕು. ನಾನೂ ಯಡಿಯೂರಪ್ಪ ಜೀ ಯಡಿಯೂರಪ್ಪ ಜೀ ಅಂದರೆ ಕರ್ನಾಟಕದಲ್ಲಿ ಬಿಜೆಪಿಗೆ ಹೀನಾಯ ಸೋಲಾಗಲಿದೆ.

ವಿಜಯೇಂದ್ರ ಬದಲಾವಣೆ ಮಾಡಬೇಕು, ಯಡಿಯೂರಪ್ಪ ಕುಟುಂಬದಿಂದ ಬಿಜೆಪಿ ಮುಕ್ತವಾಗಬೇಕು ಎನ್ನುವುದು ಅನೇಕರ ಒತ್ತಾಯವಾಗಿದೆ. ನಮ್ಮ ಭೇಡಿಕೆ ಅದೇ ಆಗಿತ್ತು.

ಬಿಜಪಿ ಉದ್ದಾರ ಆಗಬೇಕು ಅಂದ್ರೆ ಭ್ರಷ್ಟಕುಟುಂಬದಿಂದ ಹೊರಬರಬೇಕು ವಿಜಯೇಂದ್ರ ಹಠಾವ್ ಮಾಡಬೇಕು ಎಂಬುದೇ ಎಲ್ಲರ ಆಗ್ರಹ.

ಮೊನ್ನೆ ನಡೆದ ಅವರ (ಬಿಎಸ್ ಯಡಿಯೂರಪ್ಪ) ಕುಟುಂಬದ ಮದುವೆಯಲ್ಲಿ ಡಿಕೆ ಶಿವಕುಮಾರ್ಗೂ, ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್ ಅವರಿಗೆ ಎಷ್ಟು ಆತ್ಮೀಯತೆ ಇತ್ತು. ಕಾರ್ಯಕರ್ತರು ಹಿಂದುತ್ವ ಸಲುವಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಸಿಕ್ಕಾಪಟ್ಟೆ ಕೇಸ್ ಬೀಳ್ತಾ ಇದೆ. ದಿನ ನಿತ್ಯ ಹಿಂದೂ ಕಾರ್ಯಕರ್ತರಿಗೆ ಪೊಲೀಸರು ನೋಟೀಸ್ ಕೊಡ್ತಾ ಇದ್ದಾರೆ.

ಇವರು ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್ ಜೊತೆ ಸರಸ ಸಲ್ಲಾಪ ನಡುಸ್ತಾರೆ.. ಕಾರ್ಯಕರ್ತರಿಗೆ ಏನ್ ಸಂದೇಶ ಕೊಡ್ತಾರೆ..? ಇಷ್ಟು ಆತ್ಮೀಯತೆ ಇದ್ದರೆ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಸೇರಿಬಿಡಿ ಬಿಜೆಪಿ ಬಿಟ್ ಹೋಗಿ. ಹಿಂದೂ ಕಾರ್ಯಕರ್ತರ ಪ್ರಾಣ ತಗೋಬೇಡಿ ಎಂದು ವಾಗ್ದಾಳಿ ನಡೆಸಿದರು.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!