Mission Vidyakashi-0.2: Vidyashakti Yojana for Educational Strengthening

ಮಿಷನ್ ವಿದ್ಯಾಕಾಶಿ-0.2: ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ ವಿದ್ಯಾಶಕ್ತಿ ಯೋಜನೆ

ಧಾರವಾಡ: ಜಿಲ್ಲೆಯನ್ನು ಮತ್ತೇ ಶಿಕ್ಷಣ ಕಾಶಿಯನ್ನಾಗಿಸಲು ಕಳೆದ ವರ್ಷದಿಂದ ಆರಂಭಿಸಿರುವ ಮಿಷನ್ ವಿದ್ಯಾಕಾಶಿ (Mission Vidyakashi) ಶೈಕ್ಷಣಿಕ ಸುಧಾರಣೆಯಲ್ಲಿ ಯಶಸ್ಸು ಕಂಡರೂ ಎಸ್.ಎಸ್.ಎಲ್.ಸಿ (SSLC) ಫಲಿತಾಂಶದ ರ್ಯಾಂಕಿಂಗ್‍ದಲ್ಲಿ ಸ್ವಲ್ಪ ಹಿನ್ನಡೆ ಆಯಿತ್ತು. ಆದರೆ ದೀರ್ಘಕಾಲದಲ್ಲಿ ಮಿಷನ್ ವಿದ್ಯಾಕಾಶಿಯ ಪರಿಣಾಮಕಾರಿ ಬದಲಾವಣೆ, ಪ್ರಯೋಜನೆ, ಸುಧಾರಣೆಗಳು ಎದ್ದು ಕಾಣುತ್ತವೆ. ಈ ಹಿನ್ನಲೆಯಲ್ಲಿ ಪ್ರಸಕ್ತ ವರ್ಷದ ಮಿಷನ್ ವಿದ್ಯಾಕಾಶಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಸುಧಾರಣೆ ಮತ್ತು ಬಲವರ್ಧನೆಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಧಾರವಾಡ ಐಐಐಟಿ ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮಿಷನ್ ವಿದ್ಯಾಕಾಶಿ ಯೋಜನೆಯಡಿ ವಿದ್ಯಾಶಕ್ತಿ ಕಾರ್ಯಕ್ರಮ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಧಾರವಾಡ ಐಐಐಟಿ ಸಹಯೋಗದಲ್ಲಿ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ 6ನೇ, 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಶಾಲೆಯ ಸ್ಮಾರ್ಟ ಬೋರ್ಡಗಳಿಂದ ನೇರ ಪಾಠಗಳನ್ನು ಕಲಿಸಲಾಗುತ್ತದೆ ಎಂದು ಹೇಳಿದರು.

ವಿದ್ಯಾಶಕ್ತಿ ಕಾರ್ಯಕ್ರಮದ ಮೂಲಕ ಈಗಾಗಲೇ ಸ್ಮಾರ್ಟ ಬೋರ್ಡ ಹೊಂದಿರುವ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಧಾರವಾಡ ಐಐಐಟಿ ಸಹಯೋಗದಲ್ಲಿ 6ನೇ, 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಆನ್‍ಲೈನ್ ತರಗತಿಗಳ ಮೂಲಕ ಉಚಿತವಾಗಿ ಮತ್ತು ನೇರವಾಗಿ ಲೈವ್ ಕ್ಲಾಸ್ ಮಾಡಲಾಗುತ್ತದೆ. ಕ್ಲಾಸ್ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳ ಸಂವಹನಕ್ಕೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಳೆದ ಸಾಲಿನಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಡೆಸಿದ ಬೇಸ್‍ಲೈನ್ ಪರೀಕ್ಷೆಯಲ್ಲಿ, ವಿದ್ಯಾರ್ಥಿಗಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳು ಕಠಿಣವಾಗಿದ್ದು ಮತ್ತು ಈ ವಿಷಯಗಳ ಬೇಸಿಕ್ ಅಂಶಗಳು ತಿಳಿದಿರದ ಬಗ್ಗೆ ಕಂಡುಬಂದಿತ್ತು.

ಈ ಸಮಸ್ಯೆಯ ಪರಿಹಾರ ಮತ್ತು ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ವಿಶೇಷವಾಗಿ ಗ್ರಾಮೀಣ ಹಾಗೂ ಸ್ಲಂ ವ್ಯಾಪ್ತಿಗೆ ಒಳಪಡುವ ಪ್ರದೇಶದ ಶಾಲೆಗಳ ಮಕ್ಕಳಲ್ಲಿ ಕಠಿಣವೆನಿಸುವ ವಿಷಯಗಳ ಕುರಿತು ಅಗತ್ಯ ಜ್ಞಾನ, ತರಬೇತಿ ಮತ್ತು ಕಲಿಕೆಯನ್ನು ರೂಢಿಗೊಳಿಸುವುದು ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಮುಂದಿನ ಜುಲೈ ತಿಂಗಳಿಂದ ಸ್ಮಾರ್ಟ ಬೋರ್ಡ ಹೊಂದಿರುವ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಐಐಐಟಿ ಧಾರವಾಡ ಅವರ ಸಹಯೋಗ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ಆನ್‍ಲೈನ್ ಮೂಲಕ ಪಾಠ ಪ್ರಾರಂಭವಾಗಲಿದೆ. ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಶೇ. 50 ಕ್ಕಿಂತ ಕಡಿಮೆ ಫಲಿತಾಂಶದ ಶಾಲೆಗಳ ಸಮೀಕ್ಷೆ ಪೂರ್ಣ: ಮಿಷನ್ ವಿದ್ಯಾಕಾಶಿಯಡಿ ಸಾಕಷ್ಟು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾಗಿಯೂ ಜಿಲ್ಲೆಯ 106 ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ. 50 ಕ್ಕಿಂತ ಕಡಿಮೆಯಾಗಿದೆ. ಮತ್ತು ಆರು ಶಾಲೆಗಳು ಶೂನ್ಯ ಫಲಿತಾಂಶ ಪಡೆದಿವೆ.

ಈ ಕುರಿತು ಶೈಕ್ಷಣಿಕ ತಂಡಗಳಿಂದ ಆಯಾ ಶಾಲೆಗಳಿಗೆ ಭೇಟಿ ನೀಡಿ, ಫಲಿತಾಂಶ ಕಡಿಮೆಯಾಗಲು ಕಾರಣ ಮತ್ತು ಅಲ್ಲಿನ ಸೌಲಭ್ಯಗಳ ಕುರಿತು ವಿವರ ಸಂಗ್ರಹಿಸಲಾಗಿದೆ. ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿಯನ್ನು ವಿಶ್ಲೇಷಣೆ ಮಾಡುತ್ತಿದ್ದಾರೆ. ಲೋಪ ಕಂಡು ಬಂದಲ್ಲಿ ಶಿಕ್ಷಣ ಇಲಾಖೆಯ ನಿಯಮಾನುಸಾರ ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳು ಮತ್ತು ಶಿಕ್ಷಕರು ಸಕ್ರೀಯವಾಗಿ ಪಾಲ್ಗೋಂಡು, ಮಿಷನ್ ವಿದ್ಯಾಕಾಶಿಯ ಕಾರ್ಯಕ್ರಮಗಳು ಮತ್ತು ಶಾಲಾ ಶಿಕ್ಷಣ ಇಲಾಖೆಯ ಯೋಜನೆಗಳನ್ನು ಯಶಸ್ವಿಯಾಗಿ ಜರುಗಿಸಬೇಕು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಯಿಂದ ಪ್ರತಿ ಶಾಲೆಯ, ಶಿಕ್ಷಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಪರಿಹರಿಸಲಾಗುವುದು. ಶಿಕ್ಷಕರು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಶಿಕ್ಷಕರ ಸಮಸ್ಯೆಗಳ ಕುರಿತು ಚರ್ಚೆ ಮತ್ತು ಸ್ಪಂದನೆ: ನಿರಂತರವಾಗಿ ಶಾಲೆಯಲ್ಲಿ ಇದ್ದು ಮಕ್ಕಳಿಗೆ ನಿಯಮಾನುಸಾರ ಪಾಠ ಮಾಡಲು ಅನುಕೂಲವಾಗುವಂತೆ ಮತ್ತು ಆಡಳಿತಾತ್ಮಕವಾಗಿ ಆಗುತ್ತಿರುವ ಸಮಸ್ಯೆಗಳ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವದಕ್ಕಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ, ಮುಖ್ಯ ಶಿಕ್ಷಕರ, ಮುಖ್ಯೋಪಾಧ್ಯಯರ, ಶಿಕ್ಷಕರನ್ನು ಪ್ರತಿನಿಧಿಸುವಂತೆ ಶೀಘ್ರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಪಂಚಾಯತ ಸಿಇಓ ನೇತೃತ್ವದಲ್ಲಿ ಒಂದು ಸಭೆ ಆಯೋಜಿಸಲಾಗುತ್ತಿದೆ.

ಈ ಸಭೆಯಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಿ, ಪರಿಹಾರಗಳಿಗಾಗಿ ಅವರಿಂದ ಸಲಹೆಗಳನ್ನು ಸಹ ಪಡೆಯಲಾಗುತ್ತದೆ. ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಹಂತದಲ್ಲಿ ಕೈಗೊಳ್ಳಬಹುದಾದ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ನಿರ್ದೇಶನ ನೀಡಲಾಗುತ್ತದೆ. ನೌಕರ ಸ್ನೇಹಿ ಆಡಳಿತದ ಭಾಗವಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಮತ್ತೊಂದು ಅವಕಾಶ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಶಾಲೆಗಳಿಗೆ ಉಸ್ತುವಾರಿ ಸಚಿವರಿಂದ ಸನ್ಮಾನ ಗೌರವ: ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಸಾಧನೆ ಮಾಡಿರುವ ಸರ್ಕಾರಿ ಶಾಲೆಗಳಿಗೆ ಮತ್ತು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರ್ಯಾಂಕ್ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರ, ಮುಖ್ಯೋಪಾಧ್ಯಯರ ಸಭೆ ಜರುಗಿಸಿ, ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಧನೆಗೆ ಮಾರ್ಗದರ್ಶನ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿದ್ಯಾಶಕ್ತಿ ಕಾರ್ಯಕ್ರಮದ ಪ್ರಥಮ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಜಿಲ್ಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಹೆಚ್ಚು ಆಯೋಜಿಸಬೇಕು. ಶಿಕ್ಷಕರು ನಿಗದಿತ ಸಮಯಕ್ಕೆ ಶಾಲೆಗಳಿಗೆ ಹಾಜರಾಗಿ ವೇಳಾಪಟ್ಟಿ ಅನುಸಾರ ವರ್ಗಗಳನ್ನು ತೆಗೆದುಕೊಳ್ಳಬೇಕು. ಕಲಿಸುವಿಕೆಯ ಕುರಿತು ಯಾವುದೇ ನಿರ್ಲಕ್ಷ್ಯ, ಉದಾಸೀನತೆ ತೋರದೆ ಎಲ್ಲರೂ ಪ್ರಾಮಾಣಿಕವಾಗಿ ಈ ಶೈಕ್ಷಣಿಕ ಉತ್ಸವದಲ್ಲಿ ಭಾಗವಹಿಸಬೇಕೆಂದು ಅವರು ಹೇಳಿದರು.

ಐಐಐಟಿ ಯ ನಿರ್ದೇಶಕ ಪ್ರೋ. ಎಸ್.ಆರ್.ಮಹಾದೇವ ಪ್ರಸನ್ನ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶಿವಸುಬ್ರಮಣ್ಯ ಎಸ್. ಅವರು ವಿದ್ಯಾಶಕ್ತಿ ಕಾರ್ಯಕ್ರಮ ಕುರಿತು ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಡಿವಾಯ್‍ಪಿಸಿ ಎಸ್.ಎಂ.ಹುಡೇದಮನಿ ಯೋಜನೆ ಕುರಿತು ಮಾತನಾಡಿದರು. ಕುಲಸಚಿವ ಡಾ. ಮೂರುಗನಾಥಂ ಪೆÇನ್ನುಸಾಮಿ ಅವರು ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ರಾಜೇಶ ಎನ್.ಎಸ್. ಅವರು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಧಾರವಾಡ ಐಐಐಟಿ ಯ ವಿದ್ಯಾರ್ಥಿ ಕಲ್ಯಾಣ ಮತ್ತು ಆಡಳಿತ ವಿಭಾಗದ ಡೀನ್‍ರಾದ ಪ್ರೋ. ಗೋಪಿನಾಥ ಕೆ., ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರೋ. ಪರ್ವತಿ, ಐಡಿಆರ್‍ಪಿ ಯ ಸಿಇಓ ಡಾ. ದೀಪಕ ಕೆ.ಟಿ. ಮತ್ತು ಸಲಹೆಗಾರ ಶಶೀಧರ ಶೆಟ್ಟರ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಜಯಶ್ರೀ ಕಾರೆಕರ, ಪ್ರೋಬೇಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ ಸೇರಿದಂತೆ ಇತರರು ಇದ್ದರು.

ವಿದ್ಯಾಶಕ್ತಿ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯ ಅಧಿಕಾರಿಗಳು, ಶಾಲಾ ಮೇಲ್ವಿಚಾರಕರು, ಹಿರಿಯ ಉಪನ್ಯಾಸಕರು, ಬಿಆರ್‍ಸಿ, ಇಸಿಓ, ಬಿಆರ್‍ಪಿ, ಸಿಆರ್‍ಪಿ ಸೇರಿದಂತೆ ವಿವಿಧ ಹಂತದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!