Mission Vidyakashi-0.2: Vidyashakti Yojana for Educational Strengthening

ಮಿಷನ್ ವಿದ್ಯಾಕಾಶಿ-0.2: ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ ವಿದ್ಯಾಶಕ್ತಿ ಯೋಜನೆ

ಧಾರವಾಡ: ಜಿಲ್ಲೆಯನ್ನು ಮತ್ತೇ ಶಿಕ್ಷಣ ಕಾಶಿಯನ್ನಾಗಿಸಲು ಕಳೆದ ವರ್ಷದಿಂದ ಆರಂಭಿಸಿರುವ ಮಿಷನ್ ವಿದ್ಯಾಕಾಶಿ (Mission Vidyakashi) ಶೈಕ್ಷಣಿಕ ಸುಧಾರಣೆಯಲ್ಲಿ ಯಶಸ್ಸು ಕಂಡರೂ ಎಸ್.ಎಸ್.ಎಲ್.ಸಿ (SSLC) ಫಲಿತಾಂಶದ ರ್ಯಾಂಕಿಂಗ್‍ದಲ್ಲಿ ಸ್ವಲ್ಪ ಹಿನ್ನಡೆ ಆಯಿತ್ತು. ಆದರೆ ದೀರ್ಘಕಾಲದಲ್ಲಿ ಮಿಷನ್ ವಿದ್ಯಾಕಾಶಿಯ ಪರಿಣಾಮಕಾರಿ ಬದಲಾವಣೆ, ಪ್ರಯೋಜನೆ, ಸುಧಾರಣೆಗಳು ಎದ್ದು ಕಾಣುತ್ತವೆ. ಈ ಹಿನ್ನಲೆಯಲ್ಲಿ ಪ್ರಸಕ್ತ ವರ್ಷದ ಮಿಷನ್ ವಿದ್ಯಾಕಾಶಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಸುಧಾರಣೆ ಮತ್ತು ಬಲವರ್ಧನೆಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಧಾರವಾಡ ಐಐಐಟಿ ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮಿಷನ್ ವಿದ್ಯಾಕಾಶಿ ಯೋಜನೆಯಡಿ ವಿದ್ಯಾಶಕ್ತಿ ಕಾರ್ಯಕ್ರಮ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಧಾರವಾಡ ಐಐಐಟಿ ಸಹಯೋಗದಲ್ಲಿ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ 6ನೇ, 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಶಾಲೆಯ ಸ್ಮಾರ್ಟ ಬೋರ್ಡಗಳಿಂದ ನೇರ ಪಾಠಗಳನ್ನು ಕಲಿಸಲಾಗುತ್ತದೆ ಎಂದು ಹೇಳಿದರು.

ವಿದ್ಯಾಶಕ್ತಿ ಕಾರ್ಯಕ್ರಮದ ಮೂಲಕ ಈಗಾಗಲೇ ಸ್ಮಾರ್ಟ ಬೋರ್ಡ ಹೊಂದಿರುವ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಧಾರವಾಡ ಐಐಐಟಿ ಸಹಯೋಗದಲ್ಲಿ 6ನೇ, 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಆನ್‍ಲೈನ್ ತರಗತಿಗಳ ಮೂಲಕ ಉಚಿತವಾಗಿ ಮತ್ತು ನೇರವಾಗಿ ಲೈವ್ ಕ್ಲಾಸ್ ಮಾಡಲಾಗುತ್ತದೆ. ಕ್ಲಾಸ್ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳ ಸಂವಹನಕ್ಕೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಳೆದ ಸಾಲಿನಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಡೆಸಿದ ಬೇಸ್‍ಲೈನ್ ಪರೀಕ್ಷೆಯಲ್ಲಿ, ವಿದ್ಯಾರ್ಥಿಗಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳು ಕಠಿಣವಾಗಿದ್ದು ಮತ್ತು ಈ ವಿಷಯಗಳ ಬೇಸಿಕ್ ಅಂಶಗಳು ತಿಳಿದಿರದ ಬಗ್ಗೆ ಕಂಡುಬಂದಿತ್ತು.

ಈ ಸಮಸ್ಯೆಯ ಪರಿಹಾರ ಮತ್ತು ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ವಿಶೇಷವಾಗಿ ಗ್ರಾಮೀಣ ಹಾಗೂ ಸ್ಲಂ ವ್ಯಾಪ್ತಿಗೆ ಒಳಪಡುವ ಪ್ರದೇಶದ ಶಾಲೆಗಳ ಮಕ್ಕಳಲ್ಲಿ ಕಠಿಣವೆನಿಸುವ ವಿಷಯಗಳ ಕುರಿತು ಅಗತ್ಯ ಜ್ಞಾನ, ತರಬೇತಿ ಮತ್ತು ಕಲಿಕೆಯನ್ನು ರೂಢಿಗೊಳಿಸುವುದು ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಮುಂದಿನ ಜುಲೈ ತಿಂಗಳಿಂದ ಸ್ಮಾರ್ಟ ಬೋರ್ಡ ಹೊಂದಿರುವ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಐಐಐಟಿ ಧಾರವಾಡ ಅವರ ಸಹಯೋಗ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ಆನ್‍ಲೈನ್ ಮೂಲಕ ಪಾಠ ಪ್ರಾರಂಭವಾಗಲಿದೆ. ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಶೇ. 50 ಕ್ಕಿಂತ ಕಡಿಮೆ ಫಲಿತಾಂಶದ ಶಾಲೆಗಳ ಸಮೀಕ್ಷೆ ಪೂರ್ಣ: ಮಿಷನ್ ವಿದ್ಯಾಕಾಶಿಯಡಿ ಸಾಕಷ್ಟು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾಗಿಯೂ ಜಿಲ್ಲೆಯ 106 ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ. 50 ಕ್ಕಿಂತ ಕಡಿಮೆಯಾಗಿದೆ. ಮತ್ತು ಆರು ಶಾಲೆಗಳು ಶೂನ್ಯ ಫಲಿತಾಂಶ ಪಡೆದಿವೆ.

ಈ ಕುರಿತು ಶೈಕ್ಷಣಿಕ ತಂಡಗಳಿಂದ ಆಯಾ ಶಾಲೆಗಳಿಗೆ ಭೇಟಿ ನೀಡಿ, ಫಲಿತಾಂಶ ಕಡಿಮೆಯಾಗಲು ಕಾರಣ ಮತ್ತು ಅಲ್ಲಿನ ಸೌಲಭ್ಯಗಳ ಕುರಿತು ವಿವರ ಸಂಗ್ರಹಿಸಲಾಗಿದೆ. ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿಯನ್ನು ವಿಶ್ಲೇಷಣೆ ಮಾಡುತ್ತಿದ್ದಾರೆ. ಲೋಪ ಕಂಡು ಬಂದಲ್ಲಿ ಶಿಕ್ಷಣ ಇಲಾಖೆಯ ನಿಯಮಾನುಸಾರ ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳು ಮತ್ತು ಶಿಕ್ಷಕರು ಸಕ್ರೀಯವಾಗಿ ಪಾಲ್ಗೋಂಡು, ಮಿಷನ್ ವಿದ್ಯಾಕಾಶಿಯ ಕಾರ್ಯಕ್ರಮಗಳು ಮತ್ತು ಶಾಲಾ ಶಿಕ್ಷಣ ಇಲಾಖೆಯ ಯೋಜನೆಗಳನ್ನು ಯಶಸ್ವಿಯಾಗಿ ಜರುಗಿಸಬೇಕು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಯಿಂದ ಪ್ರತಿ ಶಾಲೆಯ, ಶಿಕ್ಷಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಪರಿಹರಿಸಲಾಗುವುದು. ಶಿಕ್ಷಕರು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಶಿಕ್ಷಕರ ಸಮಸ್ಯೆಗಳ ಕುರಿತು ಚರ್ಚೆ ಮತ್ತು ಸ್ಪಂದನೆ: ನಿರಂತರವಾಗಿ ಶಾಲೆಯಲ್ಲಿ ಇದ್ದು ಮಕ್ಕಳಿಗೆ ನಿಯಮಾನುಸಾರ ಪಾಠ ಮಾಡಲು ಅನುಕೂಲವಾಗುವಂತೆ ಮತ್ತು ಆಡಳಿತಾತ್ಮಕವಾಗಿ ಆಗುತ್ತಿರುವ ಸಮಸ್ಯೆಗಳ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವದಕ್ಕಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ, ಮುಖ್ಯ ಶಿಕ್ಷಕರ, ಮುಖ್ಯೋಪಾಧ್ಯಯರ, ಶಿಕ್ಷಕರನ್ನು ಪ್ರತಿನಿಧಿಸುವಂತೆ ಶೀಘ್ರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಪಂಚಾಯತ ಸಿಇಓ ನೇತೃತ್ವದಲ್ಲಿ ಒಂದು ಸಭೆ ಆಯೋಜಿಸಲಾಗುತ್ತಿದೆ.

ಈ ಸಭೆಯಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಿ, ಪರಿಹಾರಗಳಿಗಾಗಿ ಅವರಿಂದ ಸಲಹೆಗಳನ್ನು ಸಹ ಪಡೆಯಲಾಗುತ್ತದೆ. ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಹಂತದಲ್ಲಿ ಕೈಗೊಳ್ಳಬಹುದಾದ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ನಿರ್ದೇಶನ ನೀಡಲಾಗುತ್ತದೆ. ನೌಕರ ಸ್ನೇಹಿ ಆಡಳಿತದ ಭಾಗವಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಮತ್ತೊಂದು ಅವಕಾಶ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಶಾಲೆಗಳಿಗೆ ಉಸ್ತುವಾರಿ ಸಚಿವರಿಂದ ಸನ್ಮಾನ ಗೌರವ: ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಸಾಧನೆ ಮಾಡಿರುವ ಸರ್ಕಾರಿ ಶಾಲೆಗಳಿಗೆ ಮತ್ತು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರ್ಯಾಂಕ್ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರ, ಮುಖ್ಯೋಪಾಧ್ಯಯರ ಸಭೆ ಜರುಗಿಸಿ, ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಧನೆಗೆ ಮಾರ್ಗದರ್ಶನ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿದ್ಯಾಶಕ್ತಿ ಕಾರ್ಯಕ್ರಮದ ಪ್ರಥಮ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಜಿಲ್ಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಹೆಚ್ಚು ಆಯೋಜಿಸಬೇಕು. ಶಿಕ್ಷಕರು ನಿಗದಿತ ಸಮಯಕ್ಕೆ ಶಾಲೆಗಳಿಗೆ ಹಾಜರಾಗಿ ವೇಳಾಪಟ್ಟಿ ಅನುಸಾರ ವರ್ಗಗಳನ್ನು ತೆಗೆದುಕೊಳ್ಳಬೇಕು. ಕಲಿಸುವಿಕೆಯ ಕುರಿತು ಯಾವುದೇ ನಿರ್ಲಕ್ಷ್ಯ, ಉದಾಸೀನತೆ ತೋರದೆ ಎಲ್ಲರೂ ಪ್ರಾಮಾಣಿಕವಾಗಿ ಈ ಶೈಕ್ಷಣಿಕ ಉತ್ಸವದಲ್ಲಿ ಭಾಗವಹಿಸಬೇಕೆಂದು ಅವರು ಹೇಳಿದರು.

ಐಐಐಟಿ ಯ ನಿರ್ದೇಶಕ ಪ್ರೋ. ಎಸ್.ಆರ್.ಮಹಾದೇವ ಪ್ರಸನ್ನ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶಿವಸುಬ್ರಮಣ್ಯ ಎಸ್. ಅವರು ವಿದ್ಯಾಶಕ್ತಿ ಕಾರ್ಯಕ್ರಮ ಕುರಿತು ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಡಿವಾಯ್‍ಪಿಸಿ ಎಸ್.ಎಂ.ಹುಡೇದಮನಿ ಯೋಜನೆ ಕುರಿತು ಮಾತನಾಡಿದರು. ಕುಲಸಚಿವ ಡಾ. ಮೂರುಗನಾಥಂ ಪೆÇನ್ನುಸಾಮಿ ಅವರು ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ರಾಜೇಶ ಎನ್.ಎಸ್. ಅವರು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಧಾರವಾಡ ಐಐಐಟಿ ಯ ವಿದ್ಯಾರ್ಥಿ ಕಲ್ಯಾಣ ಮತ್ತು ಆಡಳಿತ ವಿಭಾಗದ ಡೀನ್‍ರಾದ ಪ್ರೋ. ಗೋಪಿನಾಥ ಕೆ., ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರೋ. ಪರ್ವತಿ, ಐಡಿಆರ್‍ಪಿ ಯ ಸಿಇಓ ಡಾ. ದೀಪಕ ಕೆ.ಟಿ. ಮತ್ತು ಸಲಹೆಗಾರ ಶಶೀಧರ ಶೆಟ್ಟರ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಜಯಶ್ರೀ ಕಾರೆಕರ, ಪ್ರೋಬೇಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ ಸೇರಿದಂತೆ ಇತರರು ಇದ್ದರು.

ವಿದ್ಯಾಶಕ್ತಿ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯ ಅಧಿಕಾರಿಗಳು, ಶಾಲಾ ಮೇಲ್ವಿಚಾರಕರು, ಹಿರಿಯ ಉಪನ್ಯಾಸಕರು, ಬಿಆರ್‍ಸಿ, ಇಸಿಓ, ಬಿಆರ್‍ಪಿ, ಸಿಆರ್‍ಪಿ ಸೇರಿದಂತೆ ವಿವಿಧ ಹಂತದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.

ರಾಜಕೀಯ

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. D.K.Shivakumar

[ccc_my_favorite_select_button post_id="109990"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]