Hulikal Nataraj makes serious allegations against Karnataka State Science Council..!

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕುರಿತು ಹುಲಿಕಲ್ ನಟರಾಜ್ ಗಂಭೀರ ಆರೋಪ..!

ಬೆಂಗಳೂರು: ದೇಶದಲ್ಲಿಯೇ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಈ ಘನತೆಗೆ ಧಕ್ಕೆ ಬರುವಂತೆ ನಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಪರಿಷತ್ತನ್ನು ತನ್ನ ವಶಕ್ಕೆ ಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅದ್ಯಕ್ಷ ಹುಲಿಕಲ್ ನಟರಾಜ್ (Hulikal Nataraj) ಒತ್ತಾಯಿಸಿದ್ದಾರೆ‌.

ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನದ ದಾರಿ ಬಿಟ್ಟು ಎಷ್ಟೋ ಕಾಲವಾಗಿದ್ದು ಅದರಲ್ಲಿ ಅಧಿಕಾರ ಲಾಲಸೆಯ ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಅಧಿಕಾರ ಹಿಡಿದು ಕುಳಿತಿವೆ.

ಅಲ್ಲಿದ್ದ ಸಾರ್ವಜನಿಕರ ಕೋಟ್ಯಂತರ ಹಣವು ಈಗ ಖಾಲಿಯಾಗಿ ವಿಜ್ಞಾನ ಕಾರ್ಯಕ್ರಮಗಳಿಗೆ ಬೊಕ್ಕಸ ಖಾಲಿಯಾಗಿದೆ. ಉದ್ಯೋಗಿಗಳ ವೇತನಕ್ಕೂ ಹಣವಿಲ್ಲ. ಇಂತಹ ಪರಿಸ್ಥಿತಿಗೆ ಕಾರಣ ಯಾರು? ಈ ಸಮಸ್ಯೆಯಿಂದಾಗಿ ವಿಜ್ಞಾನ ಪರಿಷತ್ತು ಕೈಗೊಳ್ಳಬೇಕಾದ ಅಸಂಖ್ಯ ವಿಜ್ಞಾನ ಪ್ರಸರಣ ಕಾರ್ಯಕ್ರಮಗಳಿಗೆ ತಡೆಯುಂಟಾಗಿದೆ.

ವೈಜ್ಞಾನಿಕ ಮನೋಭಾವದ ಗಂಧ ಗಾಳಿ ಇಲ್ಲದೇ ಇರುವವರು ಅಲ್ಲಿ ಅಧಿಕಾರ ಹಿಡಿದು ಸದಾ ತಂಬಾಕು ಜಗಿಯುತ್ತಾ ವಿಜ್ಞಾನವನ್ನು ಮೂಲೆಗುಂಪು ಮಾಡಿರುವುದು ವಿಷಾದಕರ.

ವಿಜ್ಞಾನದ ಅರಿವು ಇಲ್ಲದಿದ್ದರೂ ಅಧಿಕಾರವನ್ನು ಹೇಗೆ ತಮ್ಮ ಮುಷ್ಠಿಯಲ್ಲಿರಿಸಿಕೊಳ್ಳಬೇಕು ಎಂಬ ಚಾಕಚಕ್ಯತೆ ಪ್ರಸ್ತುತದ ಅಧಿಕಾರಸ್ಥರಿಗೆ ಇದೆ. ಅದಕ್ಕಾಗಿ ಲಕ್ಷಾಂತರ ರೂಗಳನ್ನು ಒಂದೇ ಕಂತಿನಲ್ಲಿ ಜಮಾ ಮಾಡಿ ತಮ್ಮವರನ್ನೇ ಸದಸ್ಯರನ್ನು ಮಾಡಿ ಮೌಡ್ಯತೆಯನ್ನು ಬಿತ್ತುತ್ತಾ ಅಧಿಕಾರ ಲಾಲಸೆಯಲ್ಲಿ ಮೆರೆಯುತ್ತಿದ್ದಾರೆ.

ಡಾ.ಎಚ್.ನರಸಿಂಹಯ್ಯ ಅವರು ರಾಜ್ಯದಲ್ಲಿ ವಿಜ್ಞಾನದ ಚಟುವಟಿಕೆಗಳನ್ನು ಸಕ್ರಿಯವಾಗಿ ನಡೆಸಲು, ವೈಜ್ಞಾನಿಕ ಮನೋಭಾವ ಮೂಡಿಸಲು ಮಹದಾಸೆಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿಗೆ ಚಾಲನೆ ನೀಡಿದ್ದರು. ಈಗ ಅವರ ಆಶಯಗಳು ಮಣ್ಣುಪಾಲಾಗಿವೆ.

ಅಧಿಕಾರಕ್ಕಾಗಿ ತಮಗೆ ಬೇಕಾದವರನ್ನು ಸದಸ್ಯರನ್ನಾಗಿಸಿ ಅಲ್ಲಿ ಸದಾಕಾಲ ಅಧಿಕಾರ ಹಿಡಿದು ಕೂರುವ ದುರಾಸೆಗೆ ಕರ್ನಾಟಕದ ಮಾನ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದು ಈ ನಿಟ್ಟಿನಲ್ಲಿ ಸ್ವಾಗತಾರ್ಹ. ಮಾನ್ಯ ಮುಖ್ಯಮಂತ್ರಿಗಳು ಈ ಕುರಿತು ಗಮನ ಹರಿಸಬೇಕು.

ರಾಜ್ಯದಲ್ಲಿ ವೈಜ್ಞಾನಿಕ ಮನೋಭಾವದ ಪ್ರಸಾರಕ್ಕೆ ಈ ಸರ್ಕಾರವು ಅತ್ಯಂತ ಆದ್ಯತೆ ನೀಡಿದೆ. ಆದ್ದರಿಂದ ತಮಗೆ ಬೇಕಾದ ಸದಸ್ಯರನ್ನು ಸೇರ್ಪಡೆ ಮಾಡಿಕೊಂಡು ತಮಗೆ ಬೇಕಾದಂತೆ ಪರಿಷತ್ತಿನ ಚುಕ್ಕಾಣಿ ಹಿಡಿದು ನಡೆಸುತ್ತಿರುವ ದುಷ್ಟಶಕ್ತಿಗಳನ್ನು ಮಟ್ಟ ಹಾಕಲು ಕರ್ನಾಟಕ ಸರ್ಕಾರ ಮುಂದಾಗಬೇಕು. ತಕ್ಷಣವೇ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಬೇಕು ಎಂದು ಈ ಮೂಲಕ ಸರ್ಕಾರವನ್ನು ಹುಲಿಕಲ್ ನಟರಾಜ್ ಒತ್ತಾಯಿಸಿದ್ದಾರೆ‌.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!