We will take away Yettinahole water to protect the interests of farmers: DCM DK Shivakumar

ದೊಡ್ಡಬಳ್ಳಾಪುರ: ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ – ಡಿಸಿಎಂ ಡಿಕೆ ಶಿವಕುಮಾರ್

ದೊಡ್ಡಬಳ್ಳಾಪುರ: “ನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ನಿಮ್ಮ ಸಲಹೆಗಳನ್ನು ಸ್ವೀಕರಿಸಿ, ನಿಮಗೆ ಹೆಚ್ಚು ತೊಂದರೆಯಾಗದಂತೆ ಎತ್ತಿನಹೊಳೆ ಯೋಜನೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ರೈತರಿಗೆ ಭರವಸೆ ನೀಡಿದರು.

ಎತ್ತಿನಹೊಳೆ ಯೋಜನೆ ಸಂಬಂಧ 5 ಟಿಎಂಸಿ ನೀರನ್ನು ಸಂಗ್ರಹಿಸಲು ದೊಡ್ಡಬಳ್ಳಾಪುರಕ್ಕೆ ಹೊಂದಿಕೊಂಡಿರುವ ಕೊರಟಗೆರೆ ತಾಲೂಕು ಪೂಚನಹಳ್ಳಿಯಲ್ಲಿ ಬಳಿ ಬೈರಗೊಂಡಲು ಜಲಾಶಯ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾಮಗಾರಿಗಳ ಸ್ಥಳವನ್ನು ಶನಿವಾರ ಪರಿಶೀಲಿಸಿದರು.

ನಂತರ ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುವ ಸ್ಥಳೀಯ ಗ್ರಾಮಸ್ಥರ ಜೊತೆ ಮಾತನಾಡಿ, ಅವರ ಸಲಹೆ ಸ್ವೀಕರಿಸಿದರು. ಇದೇ ವೇಳೆ ಅವರಿಗೆ ಅನ್ಯಾಯ ಆಗದಂತೆ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿದರು.

ಈ ವೇಳೆ ಸ್ಥಳೀಯ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ. ಭೈರಗೊಂಡಲು ಜಲಾಶಯ ಮಾಡಿದರೆ 5 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಇದರಿಂದ 5 ಸಾವಿರ ಎಕರೆ ಪ್ರದೇಶ ಮುಳುಗಡೆಯಾಗಲಿದೆ” ಎಂದರು.

“ಹಾಸನ ಮಾರ್ಗವಾಗಿ ಪೈಪ್ ಲೈನ್ ಕೆಲಸ ಪೂರ್ಣಗೊಂಡು ಇಲ್ಲಿಯವರೆಗೂ ಬಂದಿದೆ. ಮುಂದೆ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲೂ ಪೈಪ್ ಲೈನ್ ಕೆಲಸ ಆರಂಭಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವನಾದ ಬಳಿಕ ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ದೊಡ್ಡಬಳ್ಳಾಪುರದಲ್ಲಿ (ಎಕರೆಗೆ 32 ಲಕ್ಷ) ಒಂದು ಬೆಲೆ, ಕೊರಟಗೆರೆ ಭಾಗದಲ್ಲಿ (20 ಲಕ್ಷ) ಒಂದು ಬೆಲೆ ನೀಡಲಾಗುತ್ತಿದೆ. ಪರಿಹಾರ ಸಮಾನವಾಗಿ ನೀಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಈ ವಿಚಾರ ಬಗೆಹರಿಸಲು ತೀರ್ಮಾನ ಕೈಗೊಳ್ಳುವ ಜವಾಬ್ದಾರಿಯನ್ನು ಪರಮೇಶ್ವರ್ ಅವರಿಗೆ ನೀಡಿದೆವು” ಎಂದು ಹೇಳಿದರು.

“ಕೋಲಾರ, ಚಿಕ್ಕಬಳ್ಳಾಪುರಕ್ಕೆ ನೀರು ತೆಗೆದುಕೊಂಡು ಹೋಗಲೇ ಬೇಕು. ನಿಮಗೆ ಭೂಮಿ ಬಿಟ್ಟುಕೊಡಲು ಇಚ್ಛೆ ಇಲ್ಲ. ಆದರೂ ಯೋಜನೆ ಮಾಡಲೇ ಬೇಕು. ಇದಕ್ಕೆ ಪರಿಹಾರ ಏನು? ನಿಮಗೆ ಯಾವ ರೀತಿ ಸಹಾಯ ಮಾಡಬಹುದು ಎಂದು ನಿಮ್ಮ ಜತೆ ಚರ್ಚಿಸಲು ಬಂದಿದ್ದೇನೆ. ನಿಮಗೆ ಸಹಾಯ ಮಾಡಲು ಬಂದಿದ್ದೇನೆ ಹೊರತು, ನಿಮಗೆ ತೊಂದರೆ ಮಾಡಲು ಬಂದಿಲ್ಲ. ಈ ಯೋಜನೆ ಜಾರಿಗೆ ನೀವೇ ಪರಿಹಾರ ಹೇಳಿ” ಎಂದರು.

“ಈ ಯೋಜನೆಗಾಗಿ 17 ಸಾವಿರ ಕೋಟಿ ಬಂಡವಾಳ ಹಾಕಿದ್ದೇವೆ. ಬಹುತೇಕ ಕಡೆಗಳಲ್ಲಿ ಕಾಮಗಾರಿ ಮುಗಿದಿವೆ. ಹೀಗಾಗಿ ಈ ಯೋಜನೆ ಜಾರಿ ಮಾಡಲೇಬೇಕು. ನೀವು ಬೈದರೂ ಸರಿ, ಸಲಹೆ ನೀಡಿದರೂ ಸರಿ. ನಿಮ್ಮ ಮಾತನ್ನು ಆಲಿಸಿ, ನಿಮ್ಮ ಸಲಹೆ ಸ್ವೀಕರಿಸಲು ಬಂದಿದ್ದೇನೆ. ನಾವು ಇಲ್ಲಿ ಯಾರಿಂದಲೂ ಜಮೀನನ್ನು ಪುಕ್ಕಟೆಯಾಗಿ ಕಿತ್ತುಕೊಳ್ಳಲು ಬಂದಿಲ್ಲ. ನಿಮ್ಮನ್ನು ಬಲವಂತವಾಗಿ ಒಕ್ಕಲು ಎಬ್ಬಿಸುವುದಿಲ್ಲ” ಎಂದು ಭರವಸೆ ನೀಡಿದರು.

“ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಸರ್ಕಾರ ಭೂಸ್ವಾಧೀನಪಡಿಸಿಕೊಳ್ಳುವ ರೈತರಿಗೆ ಮಾರುಕಟ್ಟೆ ಬೆಲೆಗಿಂತ 4 ಪಟ್ಟು, ಬೆಂಗಳೂರಿನಲ್ಲಿ 2 ಪಟ್ಟು ಪರಿಹಾರ ನೀಡಲು ಕಾನೂನು ತಂದಿದ್ದಾರೆ” ಎಂದರು.

“ಈ ಭಾಗದ ಜನ ಜಲಾಶಯವನ್ನು ಮುಂದೆ ಮಾಡಿ ಎಂದು ಪಟ್ಟು ಹಿಡಿದಿರುವುದಾಗಿ ನನಗೆ ಮಾಹಿತಿ ಬಂತು. ಹೀಗಾಗಿ ನಾನೇ ಬಂದು ಪರಿಸ್ಥಿತಿ ನೋಡಿ ಪರಿಶೀಲನೆ ಮಾಡಲು ಬಂದಿದ್ದೇನೆ. ನಿಮ್ಮ ಎಲ್ಲಾ ಅಭಿಪ್ರಾಯ, ಸಲಹೆ ಸ್ವೀಕರಿಸಿದ್ದೇನೆ” ಎಂದರು.

ಈ ವೇಳೆ ಮಾತನಾಡಿದ ಗ್ರಾಮಸ್ಥರು, “ಈ ಭಾಗದಲ್ಲಿರುವ ರೈತರು ಬಡವರು. ಎಲ್ಲರೂ 1 ಅಥವಾ 2 ಎಕರೆ ಭೂಮಿ ಹೊಂದಿರುವ ರೈತರು. ಹೀಗಾಗಿ ಇಲ್ಲಿ ಜಲಾಶಯ ನಿರ್ಮಾಣ ಮಾಡಬೇಡಿ. ಇನ್ನು ಮುಂದೆ ಕಣಿವೆ ಪ್ರದೇಶದಲ್ಲಿ ಎರಡು ಅಣೆಕಟ್ಟು ನಿರ್ಮಿಸಲು ಅವಕಾಶವಿದೆ. ಈ ಹಿಂದೆ ದೇವದುರ್ಗದಲ್ಲಿ ಅಣೆಕಟ್ಟು ನಿರ್ಮಿಸಲು ಉದ್ದೇಶಿಸಲಾಗಿತ್ತು. ಜಲಾಶಯವನ್ನು ಬೇರೆಡೆ ನಿರ್ಮಿಸಿ” ಎಂದು ಮನವಿ ಸಲ್ಲಿಸಿದರು.

“ನೀವು ಈ ಜಲಾಶಯಕ್ಕೆ ಸೂಚಿಸಿರುವ ಪರ್ಯಾಯ ಜಾಗವನ್ನು ಪರಿಶೀಲನೆ ಮಾಡುತ್ತೇನೆ. ನಿಮ್ಮ ಸಲಹೆಗಳನ್ನು ಪರಿಶೀಲನೆ ಮಾಡುತ್ತೇನೆ. ನಂತರ ಸಚಿವ ಸಂಪುಟ ಸಭೆಯಲ್ಲಿ ನಾನು ವರದಿ ಪ್ರಸ್ತಾಪಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ಆದಷ್ಟು ನಷ್ಟವನ್ನು ಕಡಿಮೆ ಮಾಡಿ ಈ ಯೋಜನೆ ಜಾರಿ ಮಾಡುತ್ತೇವೆ. ನಿಮ್ಮೆಲ್ಲರ ಹಿತವನ್ನು ಕಾಯುತ್ತೇವೆ” ಎಂದು ತಿಳಿಸಿದರು.

ಈ ವೇಳೆ ಸಚಿವ ಕೆಹೆಚ್ ಮುನಿಯಪ್ಪ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಸೇರಿದಂತೆ ಅನೇಕರು ಹಾಜರಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!