ದೊಡ್ಡಬಳ್ಳಾಪುರ: ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ – ಡಿಸಿಎಂ ಡಿಕೆ ಶಿವಕುಮಾರ್

We will take away Yettinahole water to protect the interests of farmers: DCM DK Shivakumar

ದೊಡ್ಡಬಳ್ಳಾಪುರ: “ನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ನಿಮ್ಮ ಸಲಹೆಗಳನ್ನು ಸ್ವೀಕರಿಸಿ, ನಿಮಗೆ ಹೆಚ್ಚು ತೊಂದರೆಯಾಗದಂತೆ ಎತ್ತಿನಹೊಳೆ ಯೋಜನೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ರೈತರಿಗೆ ಭರವಸೆ ನೀಡಿದರು.

ಎತ್ತಿನಹೊಳೆ ಯೋಜನೆ ಸಂಬಂಧ 5 ಟಿಎಂಸಿ ನೀರನ್ನು ಸಂಗ್ರಹಿಸಲು ದೊಡ್ಡಬಳ್ಳಾಪುರಕ್ಕೆ ಹೊಂದಿಕೊಂಡಿರುವ ಕೊರಟಗೆರೆ ತಾಲೂಕು ಪೂಚನಹಳ್ಳಿಯಲ್ಲಿ ಬಳಿ ಬೈರಗೊಂಡಲು ಜಲಾಶಯ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾಮಗಾರಿಗಳ ಸ್ಥಳವನ್ನು ಶನಿವಾರ ಪರಿಶೀಲಿಸಿದರು.

ನಂತರ ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುವ ಸ್ಥಳೀಯ ಗ್ರಾಮಸ್ಥರ ಜೊತೆ ಮಾತನಾಡಿ, ಅವರ ಸಲಹೆ ಸ್ವೀಕರಿಸಿದರು. ಇದೇ ವೇಳೆ ಅವರಿಗೆ ಅನ್ಯಾಯ ಆಗದಂತೆ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿದರು.

ಈ ವೇಳೆ ಸ್ಥಳೀಯ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ. ಭೈರಗೊಂಡಲು ಜಲಾಶಯ ಮಾಡಿದರೆ 5 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಇದರಿಂದ 5 ಸಾವಿರ ಎಕರೆ ಪ್ರದೇಶ ಮುಳುಗಡೆಯಾಗಲಿದೆ” ಎಂದರು.

“ಹಾಸನ ಮಾರ್ಗವಾಗಿ ಪೈಪ್ ಲೈನ್ ಕೆಲಸ ಪೂರ್ಣಗೊಂಡು ಇಲ್ಲಿಯವರೆಗೂ ಬಂದಿದೆ. ಮುಂದೆ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲೂ ಪೈಪ್ ಲೈನ್ ಕೆಲಸ ಆರಂಭಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವನಾದ ಬಳಿಕ ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ದೊಡ್ಡಬಳ್ಳಾಪುರದಲ್ಲಿ (ಎಕರೆಗೆ 32 ಲಕ್ಷ) ಒಂದು ಬೆಲೆ, ಕೊರಟಗೆರೆ ಭಾಗದಲ್ಲಿ (20 ಲಕ್ಷ) ಒಂದು ಬೆಲೆ ನೀಡಲಾಗುತ್ತಿದೆ. ಪರಿಹಾರ ಸಮಾನವಾಗಿ ನೀಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಈ ವಿಚಾರ ಬಗೆಹರಿಸಲು ತೀರ್ಮಾನ ಕೈಗೊಳ್ಳುವ ಜವಾಬ್ದಾರಿಯನ್ನು ಪರಮೇಶ್ವರ್ ಅವರಿಗೆ ನೀಡಿದೆವು” ಎಂದು ಹೇಳಿದರು.

“ಕೋಲಾರ, ಚಿಕ್ಕಬಳ್ಳಾಪುರಕ್ಕೆ ನೀರು ತೆಗೆದುಕೊಂಡು ಹೋಗಲೇ ಬೇಕು. ನಿಮಗೆ ಭೂಮಿ ಬಿಟ್ಟುಕೊಡಲು ಇಚ್ಛೆ ಇಲ್ಲ. ಆದರೂ ಯೋಜನೆ ಮಾಡಲೇ ಬೇಕು. ಇದಕ್ಕೆ ಪರಿಹಾರ ಏನು? ನಿಮಗೆ ಯಾವ ರೀತಿ ಸಹಾಯ ಮಾಡಬಹುದು ಎಂದು ನಿಮ್ಮ ಜತೆ ಚರ್ಚಿಸಲು ಬಂದಿದ್ದೇನೆ. ನಿಮಗೆ ಸಹಾಯ ಮಾಡಲು ಬಂದಿದ್ದೇನೆ ಹೊರತು, ನಿಮಗೆ ತೊಂದರೆ ಮಾಡಲು ಬಂದಿಲ್ಲ. ಈ ಯೋಜನೆ ಜಾರಿಗೆ ನೀವೇ ಪರಿಹಾರ ಹೇಳಿ” ಎಂದರು.

“ಈ ಯೋಜನೆಗಾಗಿ 17 ಸಾವಿರ ಕೋಟಿ ಬಂಡವಾಳ ಹಾಕಿದ್ದೇವೆ. ಬಹುತೇಕ ಕಡೆಗಳಲ್ಲಿ ಕಾಮಗಾರಿ ಮುಗಿದಿವೆ. ಹೀಗಾಗಿ ಈ ಯೋಜನೆ ಜಾರಿ ಮಾಡಲೇಬೇಕು. ನೀವು ಬೈದರೂ ಸರಿ, ಸಲಹೆ ನೀಡಿದರೂ ಸರಿ. ನಿಮ್ಮ ಮಾತನ್ನು ಆಲಿಸಿ, ನಿಮ್ಮ ಸಲಹೆ ಸ್ವೀಕರಿಸಲು ಬಂದಿದ್ದೇನೆ. ನಾವು ಇಲ್ಲಿ ಯಾರಿಂದಲೂ ಜಮೀನನ್ನು ಪುಕ್ಕಟೆಯಾಗಿ ಕಿತ್ತುಕೊಳ್ಳಲು ಬಂದಿಲ್ಲ. ನಿಮ್ಮನ್ನು ಬಲವಂತವಾಗಿ ಒಕ್ಕಲು ಎಬ್ಬಿಸುವುದಿಲ್ಲ” ಎಂದು ಭರವಸೆ ನೀಡಿದರು.

“ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಸರ್ಕಾರ ಭೂಸ್ವಾಧೀನಪಡಿಸಿಕೊಳ್ಳುವ ರೈತರಿಗೆ ಮಾರುಕಟ್ಟೆ ಬೆಲೆಗಿಂತ 4 ಪಟ್ಟು, ಬೆಂಗಳೂರಿನಲ್ಲಿ 2 ಪಟ್ಟು ಪರಿಹಾರ ನೀಡಲು ಕಾನೂನು ತಂದಿದ್ದಾರೆ” ಎಂದರು.

“ಈ ಭಾಗದ ಜನ ಜಲಾಶಯವನ್ನು ಮುಂದೆ ಮಾಡಿ ಎಂದು ಪಟ್ಟು ಹಿಡಿದಿರುವುದಾಗಿ ನನಗೆ ಮಾಹಿತಿ ಬಂತು. ಹೀಗಾಗಿ ನಾನೇ ಬಂದು ಪರಿಸ್ಥಿತಿ ನೋಡಿ ಪರಿಶೀಲನೆ ಮಾಡಲು ಬಂದಿದ್ದೇನೆ. ನಿಮ್ಮ ಎಲ್ಲಾ ಅಭಿಪ್ರಾಯ, ಸಲಹೆ ಸ್ವೀಕರಿಸಿದ್ದೇನೆ” ಎಂದರು.

ಈ ವೇಳೆ ಮಾತನಾಡಿದ ಗ್ರಾಮಸ್ಥರು, “ಈ ಭಾಗದಲ್ಲಿರುವ ರೈತರು ಬಡವರು. ಎಲ್ಲರೂ 1 ಅಥವಾ 2 ಎಕರೆ ಭೂಮಿ ಹೊಂದಿರುವ ರೈತರು. ಹೀಗಾಗಿ ಇಲ್ಲಿ ಜಲಾಶಯ ನಿರ್ಮಾಣ ಮಾಡಬೇಡಿ. ಇನ್ನು ಮುಂದೆ ಕಣಿವೆ ಪ್ರದೇಶದಲ್ಲಿ ಎರಡು ಅಣೆಕಟ್ಟು ನಿರ್ಮಿಸಲು ಅವಕಾಶವಿದೆ. ಈ ಹಿಂದೆ ದೇವದುರ್ಗದಲ್ಲಿ ಅಣೆಕಟ್ಟು ನಿರ್ಮಿಸಲು ಉದ್ದೇಶಿಸಲಾಗಿತ್ತು. ಜಲಾಶಯವನ್ನು ಬೇರೆಡೆ ನಿರ್ಮಿಸಿ” ಎಂದು ಮನವಿ ಸಲ್ಲಿಸಿದರು.

“ನೀವು ಈ ಜಲಾಶಯಕ್ಕೆ ಸೂಚಿಸಿರುವ ಪರ್ಯಾಯ ಜಾಗವನ್ನು ಪರಿಶೀಲನೆ ಮಾಡುತ್ತೇನೆ. ನಿಮ್ಮ ಸಲಹೆಗಳನ್ನು ಪರಿಶೀಲನೆ ಮಾಡುತ್ತೇನೆ. ನಂತರ ಸಚಿವ ಸಂಪುಟ ಸಭೆಯಲ್ಲಿ ನಾನು ವರದಿ ಪ್ರಸ್ತಾಪಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ಆದಷ್ಟು ನಷ್ಟವನ್ನು ಕಡಿಮೆ ಮಾಡಿ ಈ ಯೋಜನೆ ಜಾರಿ ಮಾಡುತ್ತೇವೆ. ನಿಮ್ಮೆಲ್ಲರ ಹಿತವನ್ನು ಕಾಯುತ್ತೇವೆ” ಎಂದು ತಿಳಿಸಿದರು.

ಈ ವೇಳೆ ಸಚಿವ ಕೆಹೆಚ್ ಮುನಿಯಪ್ಪ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಸೇರಿದಂತೆ ಅನೇಕರು ಹಾಜರಿದ್ದರು.

ರಾಜಕೀಯ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ.

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="121720"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]