Bharat Kannada Sahitya Sammelana an opportunity to reflect the identity of Kannada: Dr. Mahesh Joshi

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಬಳ್ಳಾರಿ: ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕನ್ನಡಾಭಿಮಾನಿಗಳಿಗೆ ಅವಕಾಶ ದೊರೆತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi) ಅವರು ಹೇಳಿದರು.

ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನುಡಿಹಬ್ಬ, ಕನ್ನಡದ ಜಾತ್ರೆ ಇದ್ದಂತೆ. 68 ವರ್ಷಗಳ ಬಳಿಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡAತೆ ಅಖಂಡ ಜಿಲ್ಲೆಯಲ್ಲಿ ಡಿಸೆಂಬರ್ ನಲ್ಲಿ ಜರುಗುತ್ತಿದ್ದು, ಎರಡು ಜಿಲ್ಲೆಗಳ ಕನ್ನಡ ಸಾಹಿತ್ಯಕಾರರು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಮಾಧ್ಯಮದವರ ಪರಸ್ಪರ ಸಹಕಾರ ಮತ್ತು ಸಹಭಾಗಿತ್ವ ಅಗತ್ಯವಿದೆ ಎಂದರು.

ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಸೂಕ್ತ ಎಂದು ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಕುರಿತು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡAತೆ ಜಿಲ್ಲಾಧಿಕಾರಿಗಳು, ಹಿರಿಯ ಸಾಹಿತ್ಯ ಮುಖಂಡರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ದೀರ್ಘಾವಧಿಯ ನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿಯಲ್ಲಿ ನಡೆಯುತ್ತಿದ್ದು, ಇದಕ್ಕೆ ಬೇಕಾದ ಸ್ಥಳ ನಿಗದಿ, ದಿನಾಂಕ ಗೊತ್ತುಪಡಿಸುವಿಕೆ ಮತ್ತೀತರ ಅಗತ್ಯ ಕ್ರಮಗಳ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗುವುದು. ಬಳಿಕ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲು ಜಿಲ್ಲಾಡಳಿತದೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳು ಸಹಾಯ, ಸಹಯೋಗ ಮತ್ತು ಸಮಾಲೋಚನೆಯಿಂದ ಉತ್ಸುಕರಾಗಿದ್ದು, ಸಮ್ಮೇಳನಕ್ಕೆ ಸಾರ್ವಜನಿಕರು, ಗಡಿಭಾಗದ ಜನರು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದರು.

ಹಲವು ವರ್ಷಗಳ ಬಳಿಕ ಈ ಭಾಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಹಾಗಾಗಿ ಈ ಕುರಿತು ಸರ್ಕಾರಕ್ಕೆ ಅನುದಾನದ ಬೇಡಿಕೆ ಪ್ರಸ್ತಾಪಿಸಿದ್ದೇವೆ. ಜಿಲ್ಲಾಡಳಿತವು ಸಹ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದು ಸ್ಪಷ್ಟಪಡಿಸಿದರು.

88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಭಾಗದಲ್ಲಿ ನಡೆಯುತ್ತಿರುವುದು ಈ ಭಾಗದ ಜನರ ಬಹುದಿನಗಳ ಬೇಡಿಕೆ ಮತ್ತು ಸದಾವಕಾಶ ಸಿಕ್ಕಿದೆ. ಹಾಗಾಗಿ ಇಲ್ಲಿ ನಡೆಯುವುದರಿಂದ ಕನ್ನಡದ ಅಸ್ಮಿತೆಯು ಗಡಿಭಾಗದ ಎಲ್ಲೆ ಮೀರಿ ಹರಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ, ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಹಾಸನ ಜಿಲ್ಲಾ ಕಸಾಪ ಅಧ್ಯಕ್ಷ ಮಲ್ಲೇಶ್ ಗೌಡ, ಹಾವೇರಿ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಬಿ.ಹಿರೇಮಠ, ದಾವಣಗೆರೆ ಜಿಲ್ಲಾ ಕಸಾಪ ಅಧ್ಯಕ್ಷ ವಾಮದೇವಪ್ಪ ಹಾಗೂ ಇತರರು ಅವರು ಸುದ್ದಿಗೋಷ್ಠಿಯಲ್ಲಿದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!