Bharat Kannada Sahitya Sammelana an opportunity to reflect the identity of Kannada: Dr. Mahesh Joshi

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಬಳ್ಳಾರಿ: ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕನ್ನಡಾಭಿಮಾನಿಗಳಿಗೆ ಅವಕಾಶ ದೊರೆತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi) ಅವರು ಹೇಳಿದರು.

ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನುಡಿಹಬ್ಬ, ಕನ್ನಡದ ಜಾತ್ರೆ ಇದ್ದಂತೆ. 68 ವರ್ಷಗಳ ಬಳಿಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡAತೆ ಅಖಂಡ ಜಿಲ್ಲೆಯಲ್ಲಿ ಡಿಸೆಂಬರ್ ನಲ್ಲಿ ಜರುಗುತ್ತಿದ್ದು, ಎರಡು ಜಿಲ್ಲೆಗಳ ಕನ್ನಡ ಸಾಹಿತ್ಯಕಾರರು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಮಾಧ್ಯಮದವರ ಪರಸ್ಪರ ಸಹಕಾರ ಮತ್ತು ಸಹಭಾಗಿತ್ವ ಅಗತ್ಯವಿದೆ ಎಂದರು.

ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಸೂಕ್ತ ಎಂದು ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಕುರಿತು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡAತೆ ಜಿಲ್ಲಾಧಿಕಾರಿಗಳು, ಹಿರಿಯ ಸಾಹಿತ್ಯ ಮುಖಂಡರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ದೀರ್ಘಾವಧಿಯ ನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿಯಲ್ಲಿ ನಡೆಯುತ್ತಿದ್ದು, ಇದಕ್ಕೆ ಬೇಕಾದ ಸ್ಥಳ ನಿಗದಿ, ದಿನಾಂಕ ಗೊತ್ತುಪಡಿಸುವಿಕೆ ಮತ್ತೀತರ ಅಗತ್ಯ ಕ್ರಮಗಳ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗುವುದು. ಬಳಿಕ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲು ಜಿಲ್ಲಾಡಳಿತದೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳು ಸಹಾಯ, ಸಹಯೋಗ ಮತ್ತು ಸಮಾಲೋಚನೆಯಿಂದ ಉತ್ಸುಕರಾಗಿದ್ದು, ಸಮ್ಮೇಳನಕ್ಕೆ ಸಾರ್ವಜನಿಕರು, ಗಡಿಭಾಗದ ಜನರು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದರು.

ಹಲವು ವರ್ಷಗಳ ಬಳಿಕ ಈ ಭಾಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಹಾಗಾಗಿ ಈ ಕುರಿತು ಸರ್ಕಾರಕ್ಕೆ ಅನುದಾನದ ಬೇಡಿಕೆ ಪ್ರಸ್ತಾಪಿಸಿದ್ದೇವೆ. ಜಿಲ್ಲಾಡಳಿತವು ಸಹ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದು ಸ್ಪಷ್ಟಪಡಿಸಿದರು.

88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಭಾಗದಲ್ಲಿ ನಡೆಯುತ್ತಿರುವುದು ಈ ಭಾಗದ ಜನರ ಬಹುದಿನಗಳ ಬೇಡಿಕೆ ಮತ್ತು ಸದಾವಕಾಶ ಸಿಕ್ಕಿದೆ. ಹಾಗಾಗಿ ಇಲ್ಲಿ ನಡೆಯುವುದರಿಂದ ಕನ್ನಡದ ಅಸ್ಮಿತೆಯು ಗಡಿಭಾಗದ ಎಲ್ಲೆ ಮೀರಿ ಹರಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ, ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಹಾಸನ ಜಿಲ್ಲಾ ಕಸಾಪ ಅಧ್ಯಕ್ಷ ಮಲ್ಲೇಶ್ ಗೌಡ, ಹಾವೇರಿ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಬಿ.ಹಿರೇಮಠ, ದಾವಣಗೆರೆ ಜಿಲ್ಲಾ ಕಸಾಪ ಅಧ್ಯಕ್ಷ ವಾಮದೇವಪ್ಪ ಹಾಗೂ ಇತರರು ಅವರು ಸುದ್ದಿಗೋಷ್ಠಿಯಲ್ಲಿದ್ದರು.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!