A wife was killed by her husband within a month of marriage..!

ಮದುವೆಯಾದ ಒಂದು ತಿಂಗಳಲ್ಲೇ ಗಂಡನ ಬಲಿ ಪಡೆದ ಹೆಂಡತಿ..!

ಮೆಹಬೂಬ್ ನಗರ; ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಪತ್ನಿ ತನ್ನ ಗಂಡನನ್ನು ತನ್ನ ಪ್ರಿಯಕರನೊಂದಿಗೆ ಸೇರಿ ಹತ್ಯೆ (Murder) ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ಮೆಹಬೂಬ್ ನಗರದ ಜೋಗುಳಾಂಬಾ ಗದ್ವಾಲ್‌ನಲ್ಲಿ ನಡೆದಿದೆ.

ಜೋಗುಳಾಂಬಾ ಗದ್ವಾಲ್ ಜಿಲ್ಲೆಯ ತೇಜೇಶ್ವರ್ (32 ವರ್ಷ) ಮೃತ ದುರ್ದೈವಿ. ಐಶ್ವರ್ಯ ಕೊಲೆ ಆರೋಪಿ ಪತ್ನಿ ಎಂದು ಗುರುತಿಸಲಾಗಿದೆ.

ಖಾಸಗಿ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ, ಕುಟುಂಬ ಸದಸ್ಯರು ಈ ವರ್ಷದ ಫೆಬ್ರವರಿ 13 ರಂದು ಆಂಧ್ರ ಪ್ರದೇಶದ ಕರ್ನೂಲ್‌ನ ಐಶ್ವರ್ಯ ಅವರನ್ನು ವಿವಾಹವಾಗಲು ನಿಶ್ಚಯಿಸಿದ್ದರು.

ಆದರೆ ಮದುವೆಗೆ ಐದು ದಿನಗಳ ಮೊದಲೇ ಯುವತಿ ಐಶ್ವರ್ಯ ನಾಪತ್ತೆಯಾಗಿದ್ದರು. ಕರ್ನೂಲ್‌ನ ಪ್ರಮುಖ ಬ್ಯಾಂಕಿನ ಉದ್ಯೋಗಿಯೊಂದಿಗೆ ಆಕೆಗೆ ಸಂಬಂಧವಿದ್ದು, ಅವರ ಬಳಿಗೆ ಹೋಗಿದ್ದಾಳೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಐಶ್ವರ್ಯ ಫೆಬ್ರವರಿ 16 ರಂದು ಮನೆಗೆ ಮರಳಿದ್ದಾಳೆ.

ಈ ವೇಳೆ ತೇಜೇಶ್ವರ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದು, ತಾನು ಯಾರನ್ನೂ ಪ್ರೀತಿಸುತ್ತಿಲ್ಲ ಮತ್ತು ವರದಕ್ಷಿಣೆ ನೀಡಲು ತನ್ನ ತಾಯಿ ಎದುರಿಸುತ್ತಿರುವ ತೊಂದರೆಯನ್ನು ಸಹಿಸಲಾರದೆ ತನ್ನ ಸ್ನೇಹಿತನ ಮನೆಗೆ ಹೋಗಿದ್ದಾಳೆ ಎಂದು ಹೇಳಿದ್ದಳಂತೆ

ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆ ಎಂದು ಅತ್ತಿದ್ದಾಳೆ. ಇದರಿಂದ, ಐಶ್ವರ್ಯ ಅವರನ್ನು ನಂಬಿದ ತೇಜೇಶ್ವರ್ ಅವರನ್ನು ಮದುವೆಯಾಗಲು ಒಪ್ಪಿಕೊಂಡಿದ್ದಾರೆ.

ಆತನ ಹೆತ್ತವರಿಗೆ ಇದು ಇಷ್ಟವಾಗದಿದ್ದರೂ, ಅವರು ಆಕೆಯ ಮನವೊಲಿಸಿ ಮೇ 18 ರಂದು ಐಶ್ವರ್ಯಳನ್ನು ಮದುವೆಯಾದರು.

ಮದುವೆ ನಂತರ ಐಶ್ವರ್ಯ ತನ್ನ ಗಂಡನನ್ನು ನಿರ್ಲಕ್ಷಿಸಿ ಯಾವಾಗಲೂ ಫೋನ್‌ನಲ್ಲಿ ಮಾತನಾಡುತ್ತಿದ್ದಳು, ಆದ್ದರಿಂದ ಮದುವೆಯಾದ ಎರಡನೇ ದಿನದಿಂದಲೇ ಇಬ್ಬರಿಗೂ ಸಮಸ್ಯೆಗಳು ಶುರುವಾಗಿದೆ. ಇದರ ನಡುವೆ, ಜೂನ್ 17 ರಂದು ತೇಜೇಶ್ವರ್ ಏಕಾಏಕಿ ಕಾಣೆಯಾದಾಗ.. ಅವರ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ

ಪೊಲೀಸರು ಹುಡುಕಾಟದ ಅರಂಭಿಸಿದಾಗ, ತೇಜೇಶ್ವರ್ ಅವರ ಶವ ಆಂಧ್ರ ಪ್ರದೇಶದ ಪನ್ಯಂ ಪೊಲೀಸರಿಗೆ ಪತ್ತೆಯಾಗಿದೆ. ಈ ಕುರಿತು ತೇಜೇಶ್ವರ್ ಅವರ ಕುಟುಂಬ ಸದಸ್ಯರು ಐಶ್ವರ್ಯ ಅವರ ಬಗ್ಗೆ ಅನುಮಾನ ವ್ಯಕ್ತಪಡಿಸಿದರು, ಪೊಲೀಸರು ಐಶ್ವರ್ಯ ಮತ್ತು ಅವರ ತಾಯಿ ಸುಜಾತಾ ಅವರನ್ನು ಪ್ರಶ್ನಿಸಿದಾಗ, ಆಘಾತಕಾರಿ ವಿಷಯಗಳು ಬೆಳಕಿಗೆ ಬಂದವು.

ಐಶ್ವರ್ಯ ಅವರ ತಾಯಿ ಸುಜಾತಾ ಕರ್ನೂಲ್‌ನ ಪ್ರಮುಖ ಬ್ಯಾಂಕಿನಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಾರೆ. ಅದೇ ಬ್ಯಾಂಕಿನ ಉದ್ಯೋಗಿಯೊಂದಿಗೆ ಅವರು ವಿವಾಹೇತರ ಸಂಬಂಧ ಹೊಂದಿದ್ದರು ಎಂದು ತಿಳಿದುಬಂದಿದೆ.

ಉದ್ಯೋಗಿ ಕ್ರಮೇಣ ಐಶ್ವರ್ಯ ಅವರೊಂದಿಗೆ ಸಂಬಂಧವನ್ನು ಪ್ರಾರಂಭಿಸಿದರು ಎಂದು ತಿಳಿದುಬಂದಿದೆ. ತೇಜೇಶ್ವರ್ ಅವರನ್ನು ಮದುವೆಯಾದ ನಂತರ ಐಶ್ವರ್ಯ ಬ್ಯಾಂಕ್ ಉದ್ಯೋಗಿಯೊಂದಿಗೆ 2,000 ಬಾರಿ ಮಾತನಾಡಿದ್ದಾರೆ ಎಂದು ಪೊಲೀಸರು ಕರೆ ಡೇಟಾದಲ್ಲಿ ಪತ್ತೆಹಚ್ಚಿದ್ದಾರೆ.

ತಮ್ಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತೇಜೇಶ್ವರ್ ಅವರ ಆಸ್ತಿಯನ್ನು ವಶಪಡಿಸಿಕೊಳ್ಳುವುದಾಗಿ ಭರವಸೆ ನೀಡಿ ಅವರನ್ನು ಕೊಲೆ ಮಾಡಲು ಅವರು ಯೋಜನೆ ರೂಪಿಸಿದ್ದರು ಎಂದು ವರದಿಯಾಗಿದೆ.

ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಬ್ಯಾಂಕ್ ಸಿಬ್ಬಂದಿ ತೇಜೇಶ್ವರ್ ಅವರನ್ನು ಕೊಲ್ಲಲು ಕೆಲವರಿಗೆ ಸುಪಾರಿ ನೀಡಿದ್ದಲ್ಲದೆ, ಅವರ ಚಾಲಕನನ್ನು ಅವರೊಂದಿಗೆ ಕಳುಹಿಸಿದ್ದರಂತೆ.

ಪೂರ್ವ ಯೋಜನೆಯಂತೆ, ಜೂನ್ 17 ರಂದು ಕೆಲವರು ತೇಜೇಶ್ವರ್ ಅವರನ್ನು ಭೇಟಿಯಾಗಿ, 10 ಎಕರೆ ಜಮೀನು ಖರೀದಿಸುತ್ತಿರುವುದಾಗಿ ಹೇಳಿ ಜಮೀನು ನೋಡಲು ಕಾರಿನಲ್ಲಿ ಗದ್ವಾಲ್‌ಗೆ ಕರೆದೊಯ್ದಿದ್ದಾರೆ.

ಈ ವೇಳೆ ಕಾರಿನಲ್ಲಿಯೇ ತೇಜೇಶ್ವರ್ ಮೇಲೆ ಚಾಕುಗಳಿಂದ ಹಲ್ಲೆ ನಡೆಸಿ, ಅವರ ಕತ್ತು ಸೀಳಿ, ಅವರ ಶವವನ್ನು ಪಣ್ಯಂ ಬಳಿಯ ಸುಗಳಿಮೆಟ್ಟುವಿನಲ್ಲಿ ಎಸೆದು ಕಿರಾತಕರು ಪರಾರಿಯಾಗಿದ್ದಾರೆ.

ಇನ್ನೂ ಈ ಹತ್ಯೆಯ ಪ್ರಮುಖ ಆರೋಪಿ ಬ್ಯಾಂಕ್ ಉದ್ಯೋಗಿ ಪ್ರಸ್ತುತ ಪರಾರಿಯಾಗಿದ್ದಾನೆ. ಈ ಮಧ್ಯೆ, ಪೊಲೀಸರು ಈಗಾಗಲೇ ಐಶ್ವರ್ಯ ಮತ್ತು ಸುಜಾತಾ ಅವರನ್ನು ಬಂಧಿಸಿದ್ದಾರೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!