Drink & Drive: Driver fined Rs. 12,500!

ಕಳಪೆ ಗುಣಮಟ್ಟದ ಸ್ಕೂಟರ್ ಮಾರಿದ Ola Electric ಕಂಪನಿಗೆ ದಂಡ.. ಗ್ರಾಹಕನಿಗೆ ಪರಿಹಾರ ನೀಡಲು ಆದೇಶ..!

ಧಾರವಾಡ: ಗ್ರಾಹಕನಿಗೆ ಕಳಪೆ ಗುಣಮಟ್ಟದ ಸ್ಕೂಟರ್ ಮಾರಿದ Ola Electric ಕಂಪನಿಗೆ ದಂಡ ಮತ್ತು ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ಧಾರವಾಡದ ವಿದ್ಯಾಗಿರಿಯ ನಿವಾಸಿಯಾದ ಮಂಜುನಾಥ ಕೋಟುರ ಅನ್ನುವರು ತಮ್ಮ ಉಪಯೋಗಕ್ಕಾಗಿ 2023 ರಲ್ಲಿ ರೂ.1,31,719 ಹಣ ವಿನಿಯೋಗಿಸಿ ಧಾರವಾಡದಲ್ಲಿ ಎದುರುದಾರರ ಓಲಾ ಎಲೆಕ್ಟ್ರಿಕ್ ಕಂಪನಿಯವರ ಸ್ಕೂಟರ್‍ನ್ನು ಖರೀದಿಸಿದ್ದರು.

ಖರೀದಿಸಿದ ಕೆಲವೇ ದಿನಗಳಲ್ಲಿ ಅವರ ಸ್ಕೂಟರ್ ರಸ್ತೆಯಲ್ಲಿ ಹೋಗುವಾಗ ನಿಲ್ಲುವುದು ಹಾಗೂ ಬ್ಯಾಟರಿ ಸಮಸ್ಯೆ ನೀಡುತ್ತಿತ್ತು. ಈ ಬಗ್ಗೆ ಎದುರುದಾರರ ಸರ್ವಿಸ್ ಸ್ಟೇಷನ್‍ಗೆ ಹಾಗೂ ಗ್ರಾಹಕರ ಸಹಾಯವಾಣಿಗೆ ವಿಷಯ ತಿಳಿಸಿದರೂ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ.

ದೂರುದಾರರು ವಾಹನವನ್ನು ತಮ್ಮ ಉಪಯೋಗಕ್ಕೆ ಬಳಸದೇ ಅದನ್ನು ತಮ್ಮ ಮನೆಯಲ್ಲಿ ಇಟ್ಟಿರುತ್ತಾರೆ. ಸಾಕಷ್ಟು ಹಣ ವ್ಯಯ ಮಾಡಿ ವಾಹನ ಖರೀದಿಸಿದರು ಅದನ್ನು ದೂರುದಾರರಿಗೆ ಉಪಯೋಗಿಸಲು ಸಾಧ್ಯವಾಗದೇ ಇದ್ದು ಎದುರುದಾರರ ಅಂತಹ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ಜೂನ್ 28, 2024 ದೂರನ್ನು ಸಲ್ಲಿಸಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ.ಅ.ಬೋಳಶೆಟ್ಟಿ ಸದಸ್ಯರು, ದೂರುದಾರರು ರೂ.1,31,719 ಹಣ ವಿನಿಯೋಗಿಸಿ ತಮ್ಮ ಕೆಲಸಕ್ಕೆ ಅನುಕೂಲವಾಗಲಿ ಅಂತಾ ಎದುರುದಾರ ಓಲಾ ಕಂಪನಿಯಿಂದ ಸ್ಕೂಟರ್ ಖರೀದಿಸಿದ್ದರು. ಆದರೆ ವಾಹನ ಖರೀದಿಸಿದ ಕೆಲವೇ ದಿನಗಳಲ್ಲಿ ಅವು ರಸ್ತೆಯಲ್ಲಿ ಹೋಗುವಾಗ ಸಡನ್ನಾಗಿ ನಿಲ್ಲುವುದು ಮತ್ತು ಬ್ಯಾಟರಿ ಸಮಸ್ಯೆತಂದೊಡ್ಡಿದವು.

ಹೊಸ ವಾಹನ ಆ ರೀತಿಆಗುವುದು ಸರಿಯಾದ ಕ್ರಮಅಲ್ಲ. ಎದುರುದಾರ ಓಲಾ ಎಲೆಕ್ಟ್ರಿಕ್ ಕಂಪನಿ ಮತ್ತುಅವರ ಸರ್ವಿಸ್ ಸ್ಟೇಷನಗೆ ಹಾಗೂ ಅವರ ಗ್ರಾಹಕರ ಸಹಾಯವಾಣಿಗೆ ದೂರುಕೊಟ್ಟರೂ ವಾಹನಗಳ ದುರಸ್ತಿಗೆ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ.

ಇಂತಹ ಎದುರುದಾರ ನಡಾವಳಿಕೆ ಗ್ರಾಹಕರಾದ ದೂರುದಾರರಿಗೆ ಸೇವಾ ನ್ಯೂನ್ಯತೆ ಎಸಗುವುದರೊಂದಿಗೆ ಅನುಚಿತ ವ್ಯಾಪಾರ ಪದ್ಧತಿ ಮಾಡಿದ್ದಾರೆಂದು ಆಯೋಗ ಎದುರುದಾರ ವಿರುದ್ಧ ಅಭಿಪ್ರಾಯ ಪಟ್ಟು ತೀರ್ಪು ನೀಡಿದೆ.

ಎಲೆಕ್ಟ್ರಿಕ್ ಓಲಾ ಕಂಪನಿಯ ಉತ್ಪಾದನೆಯ ಸ್ಕೂಟರಗಳು ಇಂತಹದೇ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆಆದ ಬಗ್ಗೆ ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣಗಳು, ದೂರುಗಳು ದಾಖಲಾಗಿ ಎಲೆಕ್ಟ್ರಿಕ್ ಓಲಾ ಕಂಪನಿಯ ಉತ್ಪಾದನಾ ಗುಣಮಟ್ಟದ ಬಗ್ಗೆ ಗ್ರಾಹಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ನಿರ್ದೇಶನ ಕೊಟ್ಟಿದ್ದರು.

ಈ ಎಲ್ಲ ಸಂಗತಿಗಳನ್ನು ಆಧರಿಸಿ ಎದುರುದಾರ ಎಲೆಕ್ಟ್ರಿಕ್ ಓಲಾ ಕಂಪನಿ ಆಯಾದೂರುದಾರರಿಗೆ ಅವರು ಸಂದಾಯ ಮಾಡಿದ ವಾಹನಗಳ ಮೌಲ್ಯಗಳನ್ನು, ಹಣವನ್ನು ಶೇ 10% ರಂತೆ ಬಡ್ಡಿ ಸಮೇತ ಹಿಂದಿರುಗಿಸುವಂತೆ ಆದೇಶಿಸಿದೆ.

ದೂರುದಾರರಿಗೆ ಆಗಿರುವ ಅನಾನುಕೂಲ, ತೊಂದರೆ ಹಾಗೂ ಮಾನಸಿಕ ಹಿಂಸೆಗಾಗಿ ರೂ.50,000 ಪರಿಹಾರ ಮತ್ತು ರೂ.10,000 ಪ್ರಕರಣದ ಖರ್ಚು ವೆಚ್ಚ ನೀಡುವಂತೆ ಆಯೋಗ ಎಲೆಕ್ಟ್ರಿಕ್ ಓಲಾ ಕಂಪನಿಗೆ ನಿರ್ದೇಶಿಸಿದೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!