No more land acquisition in Channarayapatna hobli: M.B.Patil

ಇನ್ನು ಮುಂದೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಮಾಡಲ್ಲ: ಎಂ.ಬಿ.ಪಾಟೀಲ

ಬೆಂಗಳೂರು: ಉದ್ದೇಶಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸೇರಿದ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ 495 ಎಕರೆ ಜಮೀನನ್ನು ಸ್ವಾಧೀನ ಮಾಡದಿರಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ (M.B.Patila) ಹೇಳಿದ್ದಾರೆ.

ಮಂಗಳವಾರ ಈ ಸಂಬಂಧ ಅವರು ವಿಧಾನಸೌದದ ತಮ್ಮ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ದೇವನಹಳ್ಳಿ ಶಾಸಕರೂ ಆಗಿರುವ ಕೆ ಎಚ್ ಮುನಿಯಪ್ಪ ಅವರ ಜತೆ ಸುದೀರ್ಘ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದರು.

ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಇಬ್ಬರೂ ಸಚಿವರು, ಉದ್ದೇಶಿತ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ 2 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರ ಆ.27ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು.

ಇದಾದ ಮೇಲೆ 2022ರ ಫೆ.15ರಂದು ಈ ಸಂಬಂಧ ಆದೇಶ ಹೊರಡಿಸಲಾಗಿತ್ತು. ಆದರೆ ಹೋಬಳಿಯ ರೈತರು ಈಗಾಗಲೇ ಎರಡು ಬಾರಿ ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡಿದ್ದಾರೆ. ಜತೆಗೆ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ ಭೂಸ್ವಾಧೀನದಿಂದ ಈ ಹಳ್ಳಿಗಳ 231.23 ಎಕರೆ, 185.18 ಎಕರೆ ಮತ್ತು 78.21 ಎಕರೆಗೆ ಸ್ವಾಧೀನ ಪ್ರಕ್ರಿಯೆಯಿಂದ ವಿನಾಯಿತಿ ಕೊಡಲಾಗಿದೆ ಎಂದಿದ್ದಾರೆ.

ಜತೆಗೆ ಈ ಹೋಬಳಿಯಲ್ಲಿ ಇನ್ನು ಮುಂದೆ ಕೈಗಾರಿಕಾ ಉದ್ದೇಶಗಳಿಗೆ ಸರಕಾರ ಯಾವುದೇ ಜಮೀನನ್ನು ವಶಪಡಿಸಿಕೊಳ್ಳದೆ ಇರಲು ನಿರ್ಧರಿಸಿದೆ. ಆದ್ದರಿಂದ ಭೂಸ್ವಾಧೀನ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು.

ಈಗ ಮಿಕ್ಕಂತೆ ಉಳಿದ ಹತ್ತು ಗ್ರಾಮಗಳಾದ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆ ಬಚ್ಚೇನಹಳ್ಳಿ, ನಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮುದ್ದೇನಹಳ್ಳಿ ಮತ್ತು ಹಾಡ್ಯಾಳ ವ್ಯಾಪ್ತಿಯಲ್ಲಿನ 1,232 ಎಕರೆ ಭೂಸ್ವಾಧೀನ ನಡೆಯಲಿದೆ. ಅದರಲ್ಲೇನೂ ಬದಲಾವಣೆ ಇಲ್ಲ.

ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಜಿಲ್ಲಾಧಿಕಾರಿ ಸೂಕ್ತ ಪರಿಹಾರ ಮೊತ್ತ ನಿಗದಿ ಪಡಿಸಲಿದ್ದಾರೆ. ಅಥವಾ ಸಂತ್ರಸ್ತ ರೈತರು ಆಸಕ್ತಿ ವ್ಯಕ್ತಪಡಿಸಿದರೆ 1 ಎಕರೆ ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ 10,771 ಚದರ ಅಡಿ ಜಮೀನನ್ನು ಬೇಕಾದರೂ ಕೊಡಲು ಅವಕಾಶವಿದೆ. ಈ ಜಾಗವನ್ನು ರೈತರು ವಾಣಿಜ್ಯೋದ್ದೇಶಗಳಿಗಾಗಿ ಬಳಸಿಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದವರು ನಿರ್ದಿಷ್ಟವಾಗಿ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ಜಮೀನಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ಸಂಬಂಧ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವಿಸ್ತೃತ ಸಭೆ ನಡೆಸಲಾಗಿತ್ತು.

ರೈತರ ಕೋರಿಕೆಗೆ ಸರಕಾರ ಈಗ ಸ್ಪಂದಿಸಿದಂತಾಗಿದೆ. ಆದ್ದರಿಂದ ಇನ್ನು ಹೋರಾಟ ಬೇಡ. ನಮ್ಮಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಜೊತೆಜೊತೆಯಲ್ಲೇ ತೆಗೆದುಕೊಂಡು ಹೋಗಬೇಕಾಗಿದೆ. ನಾನು ಮತ್ತು ಮುನಿಯಪ್ಪ ಕೂಡ ರೈತ ಕುಟುಂಬಗಳಿಂದಲೇ ಬಂದವರು. ರೈತರ ನೋವು ನಮಗೆ ಅರ್ಥವಾಗುತ್ತದೆ.

ಹಿಂದೆ ನಾವು ವಿರೋಧ ಪಕ್ಷದಲ್ಲಿದ್ದಾಗ ರೈತರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯನವರು ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಭೂಸ್ವಾಧೀನ ಕುರಿತ ತೀರ್ಮಾನವನ್ನು ಪರಿಶೀಲಿಸುತ್ತೇವೆ ಎಂದಿದ್ದರು. ಈಗ ಆ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದೇವೆ ಎಂದು ಪಾಟೀಲ ನುಡಿದಿದ್ದಾರೆ.

ಸಚಿವ ಮುನಿಯಪ್ಪ ಮಾತನಾಡಿ, ರೈತರು ಸರ್ಕಾರದ ತೀರ್ಮಾನವನ್ನು ಗೌರವಿಸಿ, ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.

ಈ ರೀತಿ ರಾಜ್ಯದಲ್ಲಿ ಎಲ್ಲಿಯೂ ಜಮೀನನ್ನು ಸ್ವಾಧೀನದಿಂದ ಕೈಬಿಟ್ಟ ನಿರ್ದಶನ ಇಲ್ಲ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ ಅವರು ರೈತರ ಪರವಾದ ತೀರ್ಮಾನ ತೆಗೆದುಕೊಂಡಿದ್ದು ಅದನ್ನು ಮನ್ನಿಸಿ ಪ್ರತಿಭಟನೆ ಕೈಬಿಡಬೇಕು‌ ಎಂದು ಮುನಿಯಪ್ಪ ಹೇಳಿದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಕೆಐಎಡಿಬಿ ಸಿಇಒ ಡಾ.ಮಹೇಶ್, ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಅನುರಾಧ, ಸೇರಿದಂತೆ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ರಾಜಕೀಯ

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. D.K.Shivakumar

[ccc_my_favorite_select_button post_id="109990"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]