ಗದಗ: ಈಗ ಅಕ್ರಮ ಗಣಿಗಾರಿಕೆ ಕುರಿತು ಬರೆದ ಪತ್ರದ ಮಾತಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ (H.K.Patil) ತಿರುಗೇಟು ನೀಡಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಸಿಎಂಗೆ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಟೀಲರು ವ್ಯಂಗ್ಯವಾಡಿದ್ದಾರೆ
ನಾನು ಯಾರಿಗೆ ಪತ್ರ ಬರೆದಿದ್ದೀನೋ ಅವರು ಆ ಪತ್ರವನ್ನು ಕಸದ ಬುಟ್ಟಿಗೆ ಎಸೆಯುತ್ತಾರೋ ಇಲ್ಲವೇ ಕ್ರಮಕೈಗೊಳ್ಳುತ್ತಾರೋ ಎಂಬುವುದು ಕುಮಾರಸ್ವಾಮಿ ಹೇಳಬೇಕಿಲ್ಲ.
ನಾನು ಯಾರಿಗೆ ಪತ್ರ ಕೊಟ್ಟಿದ್ದೀನೋ ಅವರ ಅದನ್ನು ನಿರ್ಧರಿಸುತ್ತಾರೆ. ಅಷ್ಟಕ್ಕೂ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಅವರ ಅವಧಿಯಲ್ಲಿ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ ಎಂದು .
ಹೆಚ್.ಕೆ.ಪಾಟೀಲ್ ಅವರು 10 ವರ್ಷಗಳ ನಂತರ ಪತ್ರ ಬರೆದಿದ್ದಾರೆ. ಹಾಗಾದ್ರೆ ಏನು ಮಾಡಿದ್ರಿ ಎಂದೂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದು ಅದಕ್ಕೂ ಟಾಂಗ್ ನೀಡಿರುವ ಪಾಟೀಲರು, ನೀವು ಸಿಎಂ ಆಗಿದ್ದಾಗ ಎಲ್ಲಾ ವರದಿಗಳು ನಿಮ್ಮ ಕೈಯಲ್ಲಿದ್ದವು ತಾನೆ? ಆಗ ತಾವೇನು ಮಾಡ್ತಾ ಇದ್ರಿ ಎಂದು ಮರು ಪ್ರಶ್ನೆ ಹಾಕಿದ್ದಾರೆ.