Congress party has been deceiving the exploited by making them vote banks: B.Y. Vijayendra

ಕಮಿಷನ್ ಮಾಫಿಯ ಏಜೆಂಟರ ಮೂಲಕನಡೆಯುತ್ತಿದೆ ಸರಕಾರ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್‍ಗಳನ್ನು ತೆರೆಯಲಾಗಿದೆ. ಸಚಿವಾಲಯದಿಂದ ಗ್ರಾಮ ಪಂಚಾಯಿತಿ ಕಚೇರಿ ವರೆಗೂ ಲಂಚ ಇಲ್ಲದೆ ಕೆಲಸ ಕಾರ್ಯಗಳು ನಡೆಯುವುದಕ್ಕೆ ಸಾಧ್ಯವಿಲ್ಲ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಆಕ್ಷೇಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರಕಾರ ಕಮಿಷನ್ ಮಾಫಿಯಗೆ ಬೆಂಬಲ ಕೊಡುತ್ತಿದೆ. ಕಮಿಷನ್ ಮಾಫಿಯ ಏಜೆಂಟರ ಮೂಲಕ ರಾಜ್ಯದಲ್ಲಿ ಇವರು ಸರಕಾರದ ಆಡಳಿತ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಏಕೈಕ ಕಾರಣಕ್ಕೆ ಸಿದ್ದರಾಮಯ್ಯನವರು ಇದೆಲ್ಲವನ್ನೂ ನೋಡಿ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿದರು.

ಸಚಿವ ಕೃಷ್ಣಬೈರೇಗೌಡರು ಅಧಿಕಾರಿಗಳ ಸಭೆ ಮುಗಿಸಿ, ‘ಯಾಕ್ರೀ ಹೊಟ್ಟೆ ಉರಿಸ್ತೀರಿ. ನಿಮ್ಮ ರೇಟ್ ಲಿಸ್ಟನ್ನೇ ಹಾಕಿ’ ಎಂದು ಹೇಳಿಕೆ ಕೊಟ್ಟಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರು ಬಾದಾಮಿಯಲ್ಲಿ ಈಗಷ್ಟೇ ಹೇಳಿಕೆ ನೀಡಿ, ‘ಸಿದ್ರಾಮಣ್ಣ ಅವರ ಹತ್ರ ಕಾಸಿಲ್ಲ; ದಯವಿಟ್ಟು ಹಣ ಕೇಳಲು ಬರಬೇಡಿ’ ಎಂದಿದ್ದಾಗಿ ತಿಳಿಸಿದರು.

ಬೊಕ್ಕಸದಲ್ಲಿ ಹಣ ಇಲ್ಲ ಎಂಬ ಸಂದೇಶವನ್ನು ರಾಜ್ಯದ ಮುಖ್ಯಮಂತ್ರಿಗಳು ಗೃಹ ಸಚಿವರ ಮೂಲಕ ಕಾಂಗ್ರೆಸ್ ಶಾಸಕರಿಗೆ ತಿಳಿಸಿದಂತಿದೆ; ಶಾಸಕರು ಅನುದಾನ ಕೇಳಬೇಡಿ ಎಂದಿರುವಂತಿದೆ ಎಂದು ಹೇಳಿದರು.

ಆಡಳಿತದಲ್ಲಿ ಹಿಡಿತ ಕಳಕೊಂಡ ಮುಖ್ಯಮಂತ್ರಿ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ದಾಖಲೆ ಮುರಿಯಬೇಕು. ಇವರು ದೇವರಾಜ ಅರಸು ಅವರ ದಾಖಲೆ ಮುರಿಯುವುದಕ್ಕೋಸ್ಕರ ರಾಜ್ಯವನ್ನು ಲೂಟಿ ಮಾಡಿ, ಯಾವುದೇ ಅಭಿವೃದ್ಧಿ ಕಾರ್ಯಗಳು ಇಲ್ಲದೇ, ಲಂಚ ಇಲ್ಲದೇ ಯಾವುದೇ ಕೆಲಸ ಕಾರ್ಯ ಆಗುತ್ತಿಲ್ಲವೆಂದಾದರೆ ಈ ರಾಜ್ಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಸಂಪೂರ್ಣ ಹಿಡಿತವನ್ನು ಕಳೆದುಕೊಂಡಿದ್ದಾರೆ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಲಂಚ ಸಂಗ್ರಹಕ್ಕೆ ಮುಖ್ಯಮಂತ್ರಿಗಳೇ ಔಟ್‍ಸೋರ್ಸ್ ನೀಡಿದ್ದಾರೆ.

ಬಿ.ಆರ್.ಪಾಟೀಲರ ಆರೋಪದ ಬಳಿಕವೂ ಮುಖ್ಯಮಂತ್ರಿಗಳು ಜಮೀರ್ ಅಹ್ಮದ್ ಅವರ ರಾಜೀನಾಮೆ ಪಡೆದಿಲ್ಲ. ಆದರೆ, ಅದೇನೂ ದೊಡ್ಡ ವಿಚಾರವಲ್ಲ, ಭ್ರಷ್ಟಾಚಾರದ ಬಗ್ಗೆ ಸರಕಾರವನ್ನು ದೂಷಿಸುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇದು ಜವಾಬ್ದಾರಿಯುತ ಗೃಹ ಸಚಿವರ ಹೇಳಿಕೆಯೇ ಎಂದು ಕೇಳಿದರು.

ಎಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬೆಂಗಳೂರಿನಲ್ಲಿ ಹೊಸ ಮನೆ ನಿರ್ಮಾಣ ಮುಗಿದರೂ ಎನ್‍ಒಸಿ ಸಿಗುತ್ತಿಲ್ಲ. ಜನರೇಟರ್ ಇಟ್ಟುಕೊಂಡು ಗೃಹಪ್ರವೇಶ ಮಾಡುತ್ತಿದ್ದಾರೆ. ಇದು ರಾಜ್ಯದ ಪರಿಸ್ಥಿತಿ ಎಂದು ಬೇಸರ ಸೂಚಿಸಿದರು.

ರಾಜ್ಯದ ಆಡಳಿತ ಪಕ್ಷದ ಶಾಸಕರಲ್ಲೇ ಬಹುದೊಡ್ಡ ಹತಾಶೆ ಕಾಣುತ್ತಿದೆ. ಮುಖ್ಯಮಂತ್ರಿಗಳ ಆತ್ಮೀಯರಾದ ಹಿರಿಯ ಶಾಸಕ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯ ಹಗರಣ, ಬಡವರಿಗೆ ಮನೆ ಕೊಡಲು ಲಂಚ ಇಲ್ಲದೇ ಮನೆ ಮಂಜೂರಾಗದ ಕುರಿತು ತಿಳಿಸಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಮನೆ ಹಂಚಿಕೆಯಲ್ಲಿ ಆಗಿರುವ ಅಕ್ರಮದ ಆರೋಪದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಗೋಲ್ಮಾಲ್‍ಗಳ ಕುರಿತು ಸದ್ಯವೇ ಇನ್ನಷ್ಟು ಶಾಸಕರು ಮಾತನಾಡಲಿದ್ದಾರೆ ಎಂದು ಬಿ.ಆರ್.ಪಾಟೀಲ್ ಹೇಳಿದ್ದಾಗಿ ವಿವರಿಸಿದರು.

ಹಗರಣ- ಅಧಿಕಾರಿಗಳು ಬಲಿಪಶು

ಸ್ವತಃ ನಾಗೇಂದ್ರ ಅವರ ರಾಜೀನಾಮೆಗೆ ಕಾರಣವಾದ 150-160 ಕೋಟಿಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮಾಡಿತ್ತು. ತೆಲಂಗಾಣಕ್ಕೆ ಹಣ ಕಳಿಸಲಾಗಿತ್ತು. ಇವರು ಲೂಟಿ ಮಾಡಲು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು; ಅವರು ಬಲಿಪಶು ಆಗಿದ್ದರು ಎಂದು ವಿಜಯೇಂದ್ರ ಅವರು ವಿವರಿಸಿದರು.

ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳೇ ಆರೋಪಿ ಸ್ಥಾನದಲ್ಲಿದ್ದರು. ಹಗರಣ ಆಗಿಲ್ಲವೆಂದು ಹೇಳಿದ್ದ ಸಿದ್ದರಾಮಯ್ಯನವರು 14 ನಿವೇಶನ ಹಿಂದಿರುಗಿಸಿದ್ದರು ಎಂದು ತಿಳಿಸಿದರು. ಬಿಜೆಪಿ ಹೋರಾಟ, ಜನಾಕ್ರೋಶ ಯಾತ್ರೆ ಮಾಡಿದಾಗ ಸಿದ್ದರಾಮಯ್ಯ ಮತ್ತು ಅವರ ಮಂತ್ರಿಮಂಡಲದ ಸದಸ್ಯರು ಬಹಳ ಹಗುರವಾಗಿ ಮಾತನಾಡಿದ್ದರು.

ಬಿಜೆಪಿಯವರಿಗೆ ಕೆಲಸ ಇಲ್ಲ

ಗ್ಯಾರಂಟಿಗಳ ಜನಪ್ರಿಯತೆ ಸಹಿಸಲಾಗದೆ ಬೀದಿಗಿಳಿದು ಹೋರಾಟ ಎಂದು ಟೀಕಿಸಿದ್ದರು. ಸಿದ್ದರಾಮಯ್ಯನವರೇ ಬಿ.ಆರ್.ಪಾಟೀಲ್, ರಾಜು ಕಾಗೆ, ಗೋಪಾಲಕೃಷ್ಣ ಅವರ ಹೇಳಿಕೆಗೆ ನಿಮ್ಮ ಉತ್ತರ ಏನು ಎಂದು ಪ್ರಶ್ನಿಸಿದರು. ರಾಜ್ಯದ ಜನರಿಗೆ ಸಿದ್ದರಾಮಯ್ಯನವರು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಮತ್ತೊಬ್ಬ ಹಿರಿಯ ಶಾಸಕ ರಾಜು ಕಾಗೆ ಅವರು ಕಾಮಗಾರಿಗೆ ಕಾಸು ಕೊಟ್ಟು ವರ್ಕ್ ಆರ್ಡರ್ ಪಡೆಯಬೇಕಿದೆ. ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಅವರಿಗೆ ಆದ ಸ್ಥಿತಿ ನನಗೂ ಆಗಿದೆ. ಎರಡು ವರ್ಷಗಳ ಹಿಂದೆ ಶಂಕುಸ್ಥಾಪನೆ ಮಾಡಿದ ಕಾಮಗಾರಿಗೆ ಕೂಡ ಕಮಿಷನ್- ಲಂಚ ಕೊಡದೆ ವರ್ಕ್ ಆರ್ಡರ್ ಸಿಗುತ್ತಿಲ್ಲ ಎಂದಿರುವುದಾಗಿ ಗಮನಕ್ಕೆ ತಂದರು. ಇದು ಮೊದಲ ಬಾರಿ ಅಲ್ಲ; ಹಿಂದೆಯೂ ಮುಖ್ಯಮಂತ್ರಿಗಳ ವಿರುದ್ಧ ತಮ್ಮ ಅಸಂತೋಷ ತೋಡಿಕೊಂಡಿದ್ದರು ಎಂದು ತಿಳಿಸಿದರು.

ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು, ನಾನು ಶಾಸಕನಾಗಿದ್ದುಕೊಂಡು ಒಂದು ಚರಂಡಿ, ಒಂದು ಶಾಲೆ ಕೆಲಸ ಆಗುತ್ತಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿಗಳ ಆತ್ಮೀಯರಾದ ಆಡಳಿತ ಪಕ್ಷದ ಶಾಸಕರೇ ಈ ಹೇಳಿಕೆ ನೀಡುತ್ತಿದ್ದಾರೆ ಎಂದ ಅವರು, ಈ ರಾಜ್ಯದಲ್ಲಿ ಆಡಳಿತ ನಡೆಯುತ್ತಿದೆಯೇ? ಸರಕಾರ ಬದುಕಿದೆಯೇ? ಎಂದು ಜನರು ಪ್ರಶ್ನಿಸುತ್ತಿದ್ದಾರೆ. ರಾಜ್ಯವನ್ನು ಲೂಟಿ ಮಾಡಲು ಸರಕಾರಿ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಆಪ್ತ ಸಚಿವರಿಗೆ ಟಾರ್ಗೆಟ್

ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ತಮ್ಮ ಆಪ್ತ ಸಚಿವರಿಗೆ ಟಾರ್ಗೆಟ್ ನೀಡಿದ್ದಾರೆ ಎಂದು ವಿಜಯೇಂದ್ರ ಅವರು ತಿಳಿಸಿದರು. ಹಾಗಾಗಿಯೇ ನಾಗೇಂದ್ರ ಅವರು ಹಳ್ಳಕ್ಕೆ ಬಿದ್ದಿದ್ದರು ಎಂದು ನುಡಿದರು.

ಪೀಣ್ಯ ಕೈಗಾರಿಕಾ ಬಡಾವಣೆಯಲ್ಲಿ ಅಭಿವೃದ್ಧಿ ಕೆಲಸ ಆಗದೇ, ಪಕ್ಕದ ತಮಿಳುನಾಡಿಗೆ ಹೋಗುವುದಾಗಿ ಅಲ್ಲಿನ ಕೈಗಾರಿಕೆದಾರರ ಸಂಘದ ಅಧ್ಯಕ್ಷರು ಹೇಳಿಕೆ ಕೊಟ್ಟಿದ್ದಾರೆ. ಇದು ರಾಜ್ಯ ಸರಕಾರ ರಾಜ್ಯವನ್ನು ನಡೆಸುವ ರೀತಿ ಆಕ್ಷೇಪಿಸಿದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!