Ghost Town Dhanushkodi

ಹರಿತಲೇಖನಿ ದಿನಕ್ಕೊಂದು ಕಥೆ: ಘೋಸ್ಟ್ ಟೌನ್ ಧನುಷ್ಕೋಡಿ

Harithalekhani; ಭಾರತದ ದಕ್ಷಿಣ-ಪೂರ್ವ ದಿಕ್ಕಿನ ತುದಿಯಲ್ಲಿರುವ ಹಿಂದೂಗಳ ಒಂದು ಪವಿತ್ರ ತೀರ್ಥಕ್ಷೇತ್ರವೆಂದರೆ ಧನುಷ್ಕೋಡಿ (Dhanushkodi) ! ಈ ಸ್ಥಾನವು ಪವಿತ್ರ ರಾಮಸೇತುವಿನ ಉಗಮಸ್ಥಾನವಾಗಿದೆ.

ಕಳೆದ 50 ವರ್ಷಗಳಿಂದ ಹಿಂದೂಗಳ ಈ ಪವಿತ್ರ ತೀರ್ಥಕ್ಷೇತ್ರದ ಸ್ಥಿತಿ ಧ್ವಂಸಗೊಂಡ ಒಂದು ನಗರದಂತಾಗಿದೆ. 22 ಡಿಸೆಂಬರ್ 1964 ರಂದು ಈ ನಗರವು ಒಂದು ಚಂಡಮಾರುತಕ್ಕೆ ತುತ್ತಾಗಿ ಧ್ವಂಸವಾಯಿತು.

ಅನಂತರ ಕಳೆದ 50 ವರ್ಷಗಳಲ್ಲಿ ಈ ತೀರ್ಥಕ್ಷೇತ್ರವನ್ನು ಪುನರುಜ್ಜೀವನ ಮಾಡುವುದಿರಲಿ, ಸರಕಾರ ಈ ನಗರವನ್ನು ‘ಭೂತಗಳ ನಗರ’ (ghost town) ಎಂದು ಘೋಷಿಸಿ ಹೀಯಾಳಿಸಿತು.

ಅದು ಭಾರತದ ಭಯಾನಕ ಸ್ಥಳ..ಅದನ್ನ ಘೋಸ್ಟ್ ಟೌನ್ ಅಂತಲೇ ಕರೀತಾರೆ.. ಪ್ರಕೃತಿಯ ಸೊಬಗಿನಿಂದ ಕೂಡಿರುವ ಸ್ಥಳ ಇವತ್ತಿಗೆ ಹಾಳು ಕೊಂಪೆಯಾಗಿದೆ..ಅದು ಧನುಷ್ಕೋಡಿ.. ರಾಮೇಶ್ವರಂ ದ್ವೀಪದ ದಕ್ಷಿಣದ ತುತ್ತತುದಿಯಲ್ಲಿರುವ ಒಂದು ಗ್ರಾಮವಾಗಿದ್ದು, ಭಾರತದ ತಮಿಳುನಾಡು ರಾಜ್ಯದ ಪೂರ್ವ ತೀರದಲ್ಲಿದೆ ..ನಮ್ಮ ಸರ್ಕಾರಕ್ಕೆ ಈ ಜಾಗವನ್ನು ಪುನರ್ ನಿರ್ಮಿಸುವ ಈರ್ಷೆ ಇಲ್ಲ..ಇಲ್ಲಿಗೆ ಪ್ರವಾಸಿಗರು ಬರುತ್ತಾರಾದರೂ ರಾತ್ರಿ ಹೊತ್ತು ಉಳಿದುಕೊಳ್ಳುವ ಧೈರ್ಯ ಮಾಡಲ್ಲ.. !

ರಾಮಸೇತು ಸೇತುವೆ ಗೊತ್ತಲ್ಲ ? ಅದು ಶುರುವಾಗೋದು ಧನುಷ್ಕೋಡಿಯಿಂದಲೆ.. ಧನುಷ್ಕೋಡಿಯು ಶ್ರೀಲಂಕಾದ ತಲೈಮನ್ನಾರ್ ನ ಪಶ್ಚಿಮದಿಂದ ಸುಮಾರು 18 ಮೈಲಿಗಳ ಅಂತರದಲ್ಲಿದೆ..

ಈ ಊರು ಭಾರತ ಮತ್ತು ಶ್ರೀಲಂಕಾಕ್ಕೆ ಕೊಂಡಿಯಂತಿದೆ..ಅವತ್ತು ರಾಮ ಲಂಕೆಗೆ ಹೋಗೋವಾಗ ಈ ಸೇತುವೆ ದಾಟಿ ಹೋಗಿದ್ದನಂತೆ.. ಈ ಧನುಷ್ಕೋಡಿ ರಾಮೇಶ್ವರಂನ ಕಟ್ಟ ಕಡೆಯ ಊರು ಎಂದು ಗುರುತಿಸಿಕೊಂಡಿದೆ

ಈ ಘಟನೆಗೆ 50 ವರ್ಷಗಳು ಪೂರ್ಣಗೊಂಡ ನಿಮಿತ್ತ ಬಂಗಾಲ, ಅಸ್ಸಾಂ, ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡು ಇತ್ಯಾದಿ ರಾಜ್ಯಗಳ ಹಿಂದುತ್ವವಾದಿ ಸಂಘಟನೆಗಳ ಮುಖಂಡರ ಒಂದು ಸಮೂಹವು ಧನುಷ್ಕೋಡಿಗೆ ಭೇಟಿ ನೀಡಿತು.

ಅದರಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಪ್ರತಿನಿಧಿ ಸಹ ಭಾಗವಹಿಸಿದ್ದರು. ಈ ಭೇಟಿಯಲ್ಲಿ ಗಮನಕ್ಕೆ ಬಂದಿರುವ ಧನುಷ್ಕೋಡಿಯ ಭೀಕರ ವಾಸ್ತವವನ್ನು ಈ ಲೇಖನದ ಮೂಲಕ ಮಂಡಿಸುತ್ತಿದ್ದೇನೆ.

ತಮಿಳುನಾಡು ರಾಜ್ಯದ ಪೂರ್ವದಡದಲ್ಲಿ ರಾಮೇಶ್ವರಮ್ ಈ ತೀರ್ಥಕ್ಷೇತ್ರವಿದೆ. ರಾಮೇಶ್ವರಮ್‌ನ ದಕ್ಷಿಣದಲ್ಲಿ 11 ಕಿ. ಮೀ. ದೂರದಲ್ಲಿ ಧನುಷ್ಕೋಡಿ ನಗರವಿದೆ. ಇಲ್ಲಿಂದ ಶ್ರೀಲಂಕಾ ಕೇವಲ 18 ಮೈಲು (ಸುಮಾರು 20 ಕಿ.ಮೀ.) ದೂರದಲ್ಲಿದೆ !

ಬಂಗಾಲ ಕೊಲ್ಲಿ (ಮಹೋದಧಿ) ಮತ್ತು ಹಿಂದೂ ಮಹಾಸಾಗರ (ರತ್ನಾಕರ) ಇವುಗಳ ಪವಿತ್ರ ಸಂಗಮದಲ್ಲಿ ನೆಲೆಸಿದ ಕೇವಲ 50 ಗಜ (ಸುಮಾರು 150 ಅಡಿ) ಅಗಲವಿರುವ ಧನುಷ್ಕೋಡಿಯು ಮರಳಿನಿಂದ ತುಂಬಿದ ಸ್ಥಾನವಾಗಿದೆ.

ಉತ್ತರಭಾರತದಲ್ಲಿ ಕಾಶಿಗೆ ಎಷ್ಟು ಧಾರ್ಮಿಕ ಮಹತ್ವ ಇದೆಯೋ, ದಕ್ಷಿಣ ಭಾರತದಲ್ಲಿ ರಾಮೇಶ್ವರಮ್‌ಗೆ ಅಷ್ಟೇ ಮಹತ್ವ ಇದೆ. ಹಿಂದೂಗಳ ನಾಲ್ಕು ಪವಿತ್ರ ಧಾಮಗಳಲ್ಲಿ ರಾಮೇಶ್ವರಮ್ ಸಹ ಒಂದು ಧಾಮವಾಗಿದೆ.

ಪುರಾಣ ಇತ್ಯಾದಿ ಧಾರ್ಮಿಕ ಗ್ರಂಥಗಳಿಗನುಸಾರ ಕಾಶಿಯ ಶ್ರೀ ವಿಶ್ವೇಶ್ವರನ ಯಾತ್ರೆಯು ಶ್ರೀ ರಾಮೇಶ್ವರಮ್‌ನ ದರ್ಶನವಾಗದೆ ಪೂರ್ಣಗೊಳ್ಳುವುದಿಲ್ಲ.

ಬಂಗಾಲ ಕೊಲ್ಲಿ (ಮಹೋದಧಿ) ಮತ್ತು ಹಿಂದೂ ಮಹಾಸಾಗರ (ರತ್ನಾಕರ) ಇವುಗಳ ಸಂಗಮದಲ್ಲಿರುವ ಧನುಷ್ಕೋಡಿಯಲ್ಲಿ ಸ್ನಾನ ಮಾಡಿ ಕಾಶಿಯ ಗಂಗಾಜಲದಿಂದ ರಾಮೇಶ್ವರನಿಗೆ ಅಭಿಷೇಕ ಮಾಡಿದ ನಂತರವೇ ಕಾಶಿಯ ತೀರ್ಥಯಾತ್ರೆಯು ಪೂರ್ಣಗೊಳ್ಳುತ್ತದೆ.

ರಾಮೇಶ್ವರಮ್ ಮತ್ತು ಧನುಷ್ಕೋಡಿ ಇವುಗಳ ಧಾರ್ಮಿಕ ಮಹಾತ್ಮೆ!

ಉತ್ತರಭಾರತದಲ್ಲಿ ಕಾಶಿಗೆ ಎಷ್ಟು ಧಾರ್ಮಿಕ ಮಹತ್ವ ಇದೆಯೋ, ದಕ್ಷಿಣ ಭಾರತದಲ್ಲಿ ರಾಮೇಶ್ವರಮ್‌ಗೆ ಅಷ್ಟೇ ಮಹತ್ವ ಇದೆ. ಹಿಂದೂಗಳ ನಾಲ್ಕು ಪವಿತ್ರ ಧಾಮಗಳಲ್ಲಿ ರಾಮೇಶ್ವರಮ್ ಸಹ ಒಂದು ಧಾಮವಾಗಿದೆ.

ಪುರಾಣ ಇತ್ಯಾದಿ ಧಾರ್ಮಿಕ ಗ್ರಂಥಗಳಿಗನುಸಾರ ಕಾಶಿಯ ಶ್ರೀ ವಿಶ್ವೇಶ್ವರನ ಯಾತ್ರೆಯು ಶ್ರೀ ರಾಮೇಶ್ವರಮ್‌ನ ದರ್ಶನವಾಗದೆ ಪೂರ್ಣಗೊಳ್ಳುವುದಿಲ್ಲ.

ಬಂಗಾಲ ಕೊಲ್ಲಿ (ಮಹೋದಧಿ) ಮತ್ತು ಹಿಂದೂ ಮಹಾಸಾಗರ (ರತ್ನಾಕರ) ಇವುಗಳ ಸಂಗಮದಲ್ಲಿರುವ ಧನುಷ್ಕೋಡಿಯಲ್ಲಿ ಸ್ನಾನ ಮಾಡಿ ಕಾಶಿಯ ಗಂಗಾಜಲದಿಂದ ರಾಮೇಶ್ವರನಿಗೆ ಅಭಿಷೇಕ ಮಾಡಿದ ನಂತರವೇ ಕಾಶಿಯ ತೀರ್ಥಯಾತ್ರೆಯು ಪೂರ್ಣಗೊಳ್ಳುತ್ತದೆ.

ಧನುಷ್ಕೋಡಿಯ ಇತಿಹಾಸ ಮತ್ತು ರಾಮಸೇತುವೆಯ ಪ್ರಾಚೀನತೆ !

ರಾಮಸೇತುವಿನ ಈಚೆಗಿನ ಭಾಗಕ್ಕೆ ಧನುಷ್ಕೋಡಿ (‘ಕೋಡಿ’ ಅಂದರೆ ಧನುಷ್ಯದ ತುದಿ) ಎಂದು ಹೇಳುತ್ತಾರೆ; ಏಕೆಂದರೆ ಹದಿನೇಳುವರೆ ಲಕ್ಷ ವರ್ಷಗಳ ಹಿಂದೆ ರಾವಣನ ಲಂಕೆಗೆ (ಶ್ರೀಲಂಕಾಗೆ) ಪ್ರವೇಶ ಮಾಡಲು ಶ್ರೀರಾಮನು ತನ್ನ ‘ಕೋದಂಡ’ ಧನುಷ್ಯದ ತುದಿಯಿಂದ ಸೇತುವೆಯನ್ನು ನಿರ್ಮಿಸಲು ಈ ಸ್ಥಾನವನ್ನು ಆಯ್ದುಕೊಂಡನು.

ಅಲ್ಲಿ ರಾಮಸೇತುವಿನ ಭಗ್ನಾವಶೇಷದ ರೂಪದಲ್ಲಿ ದೊಡ್ಡ ದೊಡ್ಡ ಬಂಡೆಕಲ್ಲುಗಳು ದ್ವೀಪಗಳಂತೆ ಇಂದಿಗೂ ಕಾಣಲು ಸಿಗುತ್ತವೆ. ರಾಮಸೇತುವೆ ನಳ ಮತ್ತು ನೀಲ ಇವರ ವಾಸ್ತುಶಾಸ್ತ್ರದ ಒಂದು ಅದ್ಭುತ ಮಾದರಿಯಾಗಿದೆ.

ಈ ರಾಮಸೇತುವಿನ ಅಗಲ ಮತ್ತು ಉದ್ದ ಇವುಗಳ ಪ್ರಮಾಣ ಒಂದಕ್ಕೆ ಹತ್ತರಷ್ಟಿದೆ, ಎಂಬ ಸವಿಸ್ತಾರ ವರ್ಣನೆ ವಾಲ್ಮೀಕಿ ರಾಮಾಯಣದಲ್ಲಿದೆ. ಪ್ರತ್ಯಕ್ಷ ಅಳೆದಾಗಲೂ ಅವುಗಳ ಅಗಲ 3.5 ಕಿ. ಮೀ. ಇದ್ದು ಮತ್ತು ಉದ್ದ 35 ಕಿ.ಮೀ.ನಷ್ಟಿದೆ.

ಶ್ರೀರಾಮ-ರಾವಣರ ಮಹಾಯುದ್ಧದ ಮೊದಲು ಧನುಷ್ಕೋಡಿ ನಗರದಲ್ಲಿಯೇ ರಾವಣನ ತಮ್ಮನಾದ ವಿಭೀಷಣನು ಪ್ರಭು ರಾಮಚಂದ್ರನಿಗೆ ಶರಣಾಗಿದ್ದನು. ಶ್ರೀಲಂಕಾದ ಯುದ್ಧ ಸಮಾಪ್ತಿಯಾದ ನಂತರ ಇದೇ ನಗರದಲ್ಲಿ ಪ್ರಭು ರಾಮಚಂದ್ರನು ವಿಭೀಷಣನನ್ನು ಶ್ರೀಲಂಕಾದ ಸಾಮ್ರಾಟನೆಂದು ರಾಜ್ಯಾಭಿಷೇಕ ಮಾಡಿದ್ದನು.

ಇದೇ ಸಮಯದಲ್ಲಿ ಲಂಕಾಧಿಪತಿ ವಿಭೀಷಣನು ಪ್ರಭು ರಾಮಚಂದ್ರನಿಗೆ ‘ಭಾರತದ ಶೂರ-ಪರಾಕ್ರಮಿ ರಾಜರು ರಾಮಸೇತುವಿನ ಮೂಲಕ ಪದೇ ಪದೇ ಶ್ರೀಲಂಕಾದ ಮೇಲೆ ಆಕ್ರಮಣ ಮಾಡಿ ಶ್ರೀಲಂಕಾದ ಸ್ವಾತಂತ್ರ್ಯವನ್ನು ನಾಶ ಮಾಡುವರು. ಆದ್ದರಿಂದ ತಾವು ಈ ಸೇತುವೆಯನ್ನು ನಾಶಗೊಳಿಸಿರಿ’, ಎಂದು ಹೇಳಿದನು.

ಆಗ ತನ್ನ ಭಕ್ತನ ಪ್ರಾರ್ಥನೆಯನ್ನು ಕೇಳಿ ಕೋದಂಡಧಾರಿ ಪ್ರಭು ರಾಮಚಂದ್ರ ರಾಮಸೇತುವಿನ ಮೇಲೆ ಬಾಣ ಹೊಡೆದು ಅದನ್ನು ನೀರಿನಲ್ಲಿ ಮುಳುಗಿಸಿದನು. ಆದ್ದರಿಂದ ಈ ಸೇತುವೆ 2 – 3 ಅಡಿ ನೀರಿನ ಕೆಳಗೆ ಹೋಯಿತು. ಇಂದು ಕೂಡ ಯಾರಾದರೂ ರಾಮಸೇತುವಿನ ಮೇಲೆ ನಿಂತರೆ ಅವರ ಸೊಂಟದ ವರೆಗೆ ನೀರು ಇರುತ್ತದೆ.

ಬ್ರಿಟೀಷರ ಕಾಲದಲ್ಲಿ ಧನುಷ್ಕೋಡಿ ಒಂದು ದೊಡ್ಡ ಪಟ್ಟಣವಾಗಿತ್ತು ಹಾಗೂ ರಾಮೇಶ್ವರಮ್ ಒಂದು ಸಣ್ಣ ಗ್ರಾಮವಾಗಿತ್ತು. ಅಲ್ಲಿಂದ ಶ್ರೀಲಂಕಾಗೆ ಹೋಗಿ ಬರಲು ದೋಣಿಯ ವ್ಯವಸ್ಥೆ ಇತ್ತು.

ಆ ಕಾಲದಲ್ಲಿ ಶ್ರೀಲಂಕಾಗೆ ಹೋಗಲು ಪಾಸ್‌ಪೋರ್ಟ್ ಬೇಕಾಗಿರಲಿಲ್ಲ. ಧನುಷ್ಕೋಡಿಯಿಂದ ಥಲಾಯಿಮನ್ನಾರ (ಶ್ರೀಲಂಕಾ) ಹೀಗೆ ನೌಕೆಯ ಪ್ರವಾಸದ ಟಿಕೇಟ್ ಕೇವಲ 17 ರೂಪಾಯಿಗಳಿದ್ದವು. ಈ ನೌಕೆಗಳ ಮೂಲಕ ವ್ಯಾಪಾರಿ ವಸ್ತುಗಳ ಕೊಡುಕೊಳ್ಳುವಿಕೆಯೂ ನಡೆಯುತ್ತಿತ್ತು.

‘1793 ರಲ್ಲಿ ಅಮೇರಿಕಾದ ಧರ್ಮಸಂಸತ್ತಿಗಾಗಿ ಹೋಗಿದ್ದ ಸ್ವಾಮಿ ವಿವೇಕಾನಂದರು ಶ್ರೀಲಂಕಾದ ಮಾರ್ಗದಿಂದ ಭಾರತಕ್ಕೆ ಹಿಂತಿರುಗಿದರು. ಅವರು ಈ ಧನುಷ್ಕೋಡಿಯ ಭೂಮಿಯಲ್ಲಿಯೇ ಇಳಿದಿದ್ದರು.

1964 ರ ವರೆಗೆ ಧನುಷ್ಕೋಡಿ ಒಂದು ಪ್ರಖ್ಯಾತ ಪ್ರವಾಸೀ ಸ್ಥಳ ಹಾಗೂ ತೀರ್ಥಕ್ಷೇತ್ರವಾಗಿತ್ತು. ಭಕ್ತರಿಗಾಗಿ ಅಲ್ಲಿ ಹೊಟೇಲ್‌ಗಳು, ಬಟ್ಟೆಯ ಅಂಗಡಿಗಳು ಹಾಗೂ ಧರ್ಮಶಾಲೆಗಳಿದ್ದವು. ಆ ಸಮಯದಲ್ಲಿ ಅಲ್ಲಿ ಹಡಗು ನಿರ್ಮಾಣ ಕೇಂದ್ರ, ರೈಲು ನಿಲ್ದಾಣ, ರೈಲ್ವೆಯ ಸಣ್ಣ ಆಸ್ಪತ್ರೆ, ಅಂಚೆ ಕಚೇರಿ ಮತ್ತು ಮೀನು ಸಾಕಣೆಯಂತಹ ಕೆಲವು ಸರಕಾರೀ ಕಚೇರಿಗಳಿದ್ದವು.

1964ರ ಚಂಡಮಾರುತದ ಮೊದಲು ಚೆನೈ ಮತ್ತು ಧನುಷ್ಕೋಡಿಯ ನಡುವೆ ಮದ್ರಾಸ್ ಎಗ್ಮೋರದಿಂದ ಬೋಟ್ ಮೇಲ್ ಹೆಸರಿನ ರೈಲು ಸೇವೆ ಇತ್ತು. ಅಲ್ಲಿಂದ ದೋಣಿ ಮೂಲಕ ಶ್ರೀಲಂಕಾಗೆ ಹೋಗುವ ಪ್ರವಾಸಿಗಳಿಗೆ ಅದು ಉಪಯುಕ್ತವಾಗುತ್ತಿತ್ತು.

1964 ರಲ್ಲಿ ಭೀಕರ ಚಂಡಮಾರುತದಿಂದಾಗಿ ಧನುಷ್ಕೋಡಿ ಧ್ವಂಸವಾಯಿತು. 17 ಡಿಸೆಂಬರ್ 1964 ರಂದು ದಕ್ಷಿಣ ಅಂಡಮಾನ ಸಮುದ್ರದಲ್ಲಿ 5 ಡಿಗ್ರಿ ಪೂರ್ವದಲ್ಲಿ ಅದರ ಕೇಂದ್ರವಿತ್ತು. ಡಿಸೆಂಬರ್ 19ರಂದು ಅದು ಚಂಡಮಾರುತದ ರೂಪ ಧಾರಣೆ ಮಾಡಿ ಪ್ರಚಂಡ ವೇಗದಲ್ಲಿ ಡಿಸೆಂಬರ್ 22 ರಂದು ರಾತ್ರಿ ಗಂಟೆಗೆ 270 ಕಿ. ಮೀ. ವೇಗದಲ್ಲಿ ಶ್ರೀಲಂಕಾವನ್ನು ದಾಟಿಕೊಂಡು ಅದು ಧನುಷ್ಕೋಡಿಯ ತೀರದಲ್ಲಿ ಬಂದು ಅಪ್ಪಳಿಸಿತು.

ಈ ಚಂಡಮಾರುತದ ಜೊತೆಗೆ 20 ಅಡಿಗಳಷ್ಟು ಎತ್ತರದ ತೆರೆ ಧನುಷ್ಕೋಡಿ ನಗರದ ಪೂರ್ವದಿಕ್ಕಿನಲ್ಲಿರುವ ಪವಿತ್ರ ಸಂಗಮದ ಮೇಲಿಂದ ನಗರದ ಮೇಲೆ ಆಕ್ರಮಣ ಮಾಡಿ ಸಂಪೂರ್ಣ ಧನುಷ್ಕೋಡಿ ನಗರವನ್ನು ನಾಶಗೊಳಿಸಿತು.

ಕೃಪೆ: ಶ್ರೀ ಚೇತನ ರಾಜಹಂಸ, ಹಿಂದೂ ಜನಜಾಗೃತಿ ಸಮಿತಿ

ಆಧಾರ: ಸಾಪ್ತಾಹಿಕ ಸನಾತನ ಪ್ರಭಾತ

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!