Praise for the state government's "Ghati Isha" tour: Doddaballapura a tourist destination

ರಾಜ್ಯ ಸರ್ಕಾರದ “ಘಾಟಿ ಇಶಾ” ಪ್ರವಾಸಕ್ಕೆ ಪ್ರಶಂಸೆ: ಪ್ರವಾಸಿ ತಾಣವಾದ ದೊಡ್ಡಬಳ್ಳಾಪುರದ ನೆಲದಾಂಜನೇಯ ಸ್ವಾಮಿ ದೇವಾಲಯ..!

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಇತ್ತೀಚೆಗೆ ಚಾಲನೆ ನೀಡಿದ ಘಾಟಿ ಇಶಾ ಫೌಂಡೇಶನ್ ಪ್ಯಾಕೇಜ್ (Ghati Isha Foundation Package) ಪ್ರವಾಸ-2ದಲ್ಲಿ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯಕ್ಕೆ ಯಾತ್ರಾತ್ರಿಗಳು ಭೇಟಿ ನೀಡಿ, ಸ್ವಾಮಿಯ ದರ್ಶನ ಪಡೆದು ಪ್ರವಾಸದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಘಾಟಿ ಇಶಾ ಫೌಂಡೇಶನ್ ಪ್ಯಾಕೇಜ್ ಪ್ರವಾಸ-2ದಲ್ಲಿ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯ, ಘಾಟಿ ಸುಬ್ರಹ್ಮಣ್ಯ ದೇವಾಲಯ, ಮುದ್ದೇನಹಳ್ಳಿಯ ಜ್ಞಾನ ತೀರ್ಥ, ಪಂಚನದಿ ಕ್ಷೇತ್ರ ಪಾಪಾಗ್ನಿ ಮಠ, ಕಲ್ಯಾಣಿ ಕಾರಂಜಿ ಮತ್ತು ಚಿಕ್ಕಬಳ್ಳಾಪುರ ಇಶಾ ಫೌಂಡೇಷನ್ ಕ್ಷೇತ್ರಗಳು ಸೇರಿದೆ.

ಬೆಳಿಗ್ಗೆ 9 ಗಂಟೆಯಿಂದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಟು ಸಂಜೆ 7 ಗಂಟೆಗೆ ವಾಪಾಸಾಗಲಿದೆ. ಪ್ರಯಾಣದದ 600 ರೂಗಳಗಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಕ್ಷೇತ್ರವು ಪ್ರಖ್ಯಾತಿಯಾಗಿದ್ದು, ಹೆಚ್ಚಿನ ಯಾತ್ರಿಕರು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸುತ್ತಾರೆ. ಆದರೆ ದೊಡ್ಡಬಳ್ಳಾಪುರದ ಪುರಾತನ ದೇವಾಲಯವಾದ ನಗರದ ಬಸ್ ನಿಲ್ದಾಣದ ಸಮೀಪದ ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯವು ಪ್ರವಾಸದ ಪಟ್ಟಿಯಲ್ಲಿ ಇದೇ ಮೊದಲ ಬಾರಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ಈ ದೇವಾಲಯಕ್ಕೆ 600 ವರ್ಷಗಳ ಇತಿಹಾಸವಿದ್ದು, ಇದನ್ನು ಕೃಷ್ಣದೇವರಾಯನ ಕಾಲದಲ್ಲಿ ಕಟ್ಟಿರುವ ಬಗ್ಗೆ ದೇವಾಲಯದಲ್ಲಿ ಕುರುಹುಗಳಿವೆ. ಮಣ್ಣಿನಲ್ಲಿ ಮುಚ್ಚಿ ಹೋಗಿದ್ದ ಈ ದೇವಾಲಯ ನೆಲದಡಿಯಲ್ಲಿ ಸಿಕ್ಕಿದ್ದರಿಂದ ಇದು ನೆಲದಾಂಜನೇಯಸ್ವಾಮಿ ಎಂದು ಹೆಸರಾಗಿದೆ. ದೇವಾಲಯದ ದ್ವಾರದಲ್ಲಿ ಆಲಿಂಗನ ರಾಮಾಂಜಿನೇಯ ವಿಗ್ರಹವಿದೆ.

ಆವರಣದಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ಪ್ರತಿಷ್ಟಾಪಿಸಿರುವ 15 ಅಡಿ ಎತ್ತರದ ಕಲ್ಲಿನ ಗದೆ, ಅಶ್ವತ್ಥ ಕಟ್ಟೆ ಹಾಗೂ ಅರಳಿ, ಅತ್ತಿ, ಬಿಲ್ವ,ಬನ್ನಿ ಹಾಗೂ ಬೇವು ಪಂಚ ವೃಕ್ಷಗಳಿವೆ.

ಆಂಜನೇಯಸ್ವಾಮಿಗೆ ನೇರವಾಗಿ ಭಕ್ತರೇ ಗರ್ಭಗುಡಿಗೆ ಹೋಗಿ ನಮಸ್ಕರಿಸಿ ಪೂಜಿಸುವ ಆಚರಣೆ ಹಿಂದಿನಿಂದಲೂ ಬಂದಿದ್ದು, ಭಕ್ತರ ಸಂಕಷ್ಟಗಳನ್ನು ಈಡೇರಿಸುವ ಶಕ್ತಿ ಆಂಜನೇಯಸ್ವಾಮಿಯದ್ದಾಗಿದೆ ಎಂದು ನೆಲದಾಂಜನೇಯಸ್ವಾಮಿ ಸೇವಾ ಟ್ರಸ್ಟ್‌ನ ಪ್ರಮುಖರು ಯಾತ್ರಾತ್ರಿಗಳಿಗೆ ದೇವಾಲಯದ ಪರಿಚಯ ಮಾಡಿಕೊಟ್ಟರು.

ಬೆಂಗಳೂರಿನ ಸಮೀಪದಲ್ಲಿಯೇ ಇಂತಹ ಪುರಾತನ ದೇವಾಲಯಗಳಿದ್ದು, ಇವುಗಳ ಬಗ್ಗೆ ನಮಗೆ ಹೆಚ್ಚಿನ ಅರಿವು ಮೂಡಬೇಕಿದೆ. ದೇವಾಲಯದ ಇತಿಹಾಸ ಹಾಗೂ ಮಹಿಮೆ ತಿಳಿದು ಸಂತಸವಾಗಿದ್ದು, ಘಾಟಿ ಇಶಾ ಫೌಂಡೇಶನ್ ಪ್ಯಾಕೇಜ್ ಪ್ರವಾಸ ಒಳ್ಳೆಯ ಅನುಭವ ನೀಡಿದೆ ಎಂದು ಯಾತ್ರಿಕರಾದ ಜಗದೀಶ್, ಸುಕನ್ಯ ರಾಜ್ಯ ಸರ್ಕಾರದ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!