Daily Astrology

ದಿನ ಭವಿಷ್ಯ: ಈ ರಾಶಿಯವರ ಆರ್ಥಿಕ ಸಂಕಷ್ಟ ದೂರಾಗುವ ಸಾಧ್ಯತೆ

Astrology; ಗುರುವಾರ, ಜೂನ್ 26, 2025, ದೈನಂದಿನ ರಾಶಿ ಭವಿಷ್ಯ /

ಮೇಷ ರಾಶಿ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.(ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.(ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸ ದಲ್ಲಿ ನಿರಾಸಕ್ತಿ ಕಂಡುಬರು ವುದು.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು.ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗ ಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ.ಶತ್ರುಬಾಧೆ ಕಂಡುಬರು ವುದು. ಆರೋಗ್ಯದ ಮೇಲೆ ನಿಗಾ ಇರಲಿ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮ್ಮ ಇಷ್ಟಾರ್ಥಗಳು ಈಡೇರಬಹುದು.ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹುದು. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿ ಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆ ಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಬ್ರಮಗಳ ವಾತಾವರಣ ಮೂಡಲಿದೆ. ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಾಸ: ಆಷಾಡ ಮಾಸ
ಪಕ್ಷ: ಶುಕ್ಲ ಪಕ್ಷ
ತಿಥಿ: ಪಾಡ್ಯಮಿ
ನಕ್ಷತ್ರ: ಆರಿದ್ರ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. D.K.Shivakumar

[ccc_my_favorite_select_button post_id="109990"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]