ಬೆಂ.ಗ್ರಾಂ.ಜಿಲ್ಲೆ: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ನಿರ್ಮಿಸಿರುವ ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ ಮತ್ತು ವಸ್ತು ಪ್ರದರ್ಶನ ಕೇಂದ್ರದ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ನೆಲಮಂಗಲ ತಾಲ್ಲೂಕಿನ ಅವ್ವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಜೂನ್ 28 ರಂದು ಬೆಳಿಗ್ಗೆ 10:30 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸಿಯಾ ಅಧ್ಯಕ್ಷರಾದ ಎಂ.ಜಿ ರಾಜಗೋಪಾಲ್ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ, ಸಣ್ಣ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ, ಕೆ.ಎಸ್.ಎಸ್.ಐ.ಡಿ.ಸಿ ಯ ಅಧ್ಯಕ್ಷರು ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಶ್ರೀನಿವಾಸ್ ಅವರು ಭಾಗವಹಿಸಲಿದ್ದಾರೆ.
ಕೆ.ಎಸ್.ಎಸ್.ಐ.ಡಿ.ಸಿ ಯ ವ್ಯವಸ್ಥಾಪಕ ನಿರ್ದೇಶಕರು ಕ್ಯಾಪ್ಟನ್ ಡಾ. ರಾಜೇಂದ್ರ, ಎಂ.ಎಸ್.ಎಂ.ಇ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ನಿತೀಶ್ ಪಾಟೀಲ್ ಅವರು ಗೌರವಾನ್ವಿತ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾಸಿಯಾ ಪೂರ್ವಾಧ್ಯಕ್ಷರು ಹಾಗೂ
ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ ಅಧ್ಯಕ್ಷರಾದ ಆರ್. ಪೃಥ್ವಿ ರಾಜ್ ಮತ್ತು ಎ. ಪದ್ಮನಾಭ, ಉಪಾಧ್ಯಕ್ಷರಾದ ಗಣೇಶ್ ರಾವ್ ಬಿ.ಆರ್, ಗೌರವ ಪ್ರಧಾನ ಕಾರ್ಯದರ್ಶಿಗಳು ಸುರೇಶ್ ಎನ್. ಸಾಗರ್, ಜಂಟಿ ಕಾರ್ಯದರ್ಶಿಗಳು-ನಗರ ಜೆ.ಎಸ್. ಬಾಬು, ಜಂಟಿ ಕಾರ್ಯದರ್ಶಿಗಳು-ಗ್ರಾಮೀಣ ಸತೀಶ್ ಎನ್, ಖಜಾಂಚಿಗಳಾದ ಮಂಜುನಾಥ್ ಹೆಚ್ ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.