ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು (Tiger family) ಅಸಹಜವಾಗಿ ಮೃತಪಟ್ಟಿದ್ದು, ವಿಷ ಪ್ರಾಶನ ಶಂಕೆ ವ್ಯಕ್ತವಾಗಿದೆ.
ಬುಧವಾರ ಹುಲಿಗಳ ಮೃತದೇಹಗಳು ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅರಣ್ಯ ಬೇಟಿ ನೀಡಿದ್ದಾರೆ.
ತನಿಖೆಗೆ ಆದೇಶ
ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವು ಅತ್ಯಂತ ದುಃಖದ ಮತ್ತು ನೋವಿನ ಸಂಗತಿಯಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಹೇಳಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವು ಅತ್ಯಂತ ದುಃಖದ ಮತ್ತು ನೋವಿನ ಸಂಗತಿಯಾಗಿದೆ. ವಿಷಯ ತಿಳಿದ ಕೂಡಲೇ PCCF ನೇತೃತ್ವದ ತನಿಖಾ ತಂಡ ರಚಿಸಿ, 3 ದಿನಗಳಲ್ಲಿ ವರದಿ ಕೋರಲಾಗಿದೆ. ನಿರ್ಲಕ್ಷ್ಯವಿದ್ದರೆ ಅಥವಾ ಯಾವುದೇ ಕಾರಣಕ್ಕಾಗಿಯೂ ಹುಲಿಗಳು ಸಾವಿಗೀಡಾಗಿದ್ದರೆ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಆದೇಶ ನೀಡಿದ್ದೇನೆ. pic.twitter.com/2HwFeBY4eD
— Eshwar Khandre (@eshwar_khandre) June 26, 2025
ಈ ಕುರಿತು ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶದಲ್ಲಿ ಮಾತನಾಡಿರುವ ಅವರು 3 ದಿನಗಳಲ್ಲಿ ವರದಿ ಕೋರಲಾಗಿದೆ. ವಿಷಯ ತಿಳಿದ ಕೂಡಲೇ PCCF ನೇತೃತ್ವದ ತನಿಖಾ ತಂಡ ರಚಿಸಿ ನಿರ್ಲಕ್ಷ್ಯವಿದ್ದರೆ ಅಥವಾ ಯಾವುದೇ ಕಾರಣಕ್ಕಾಗಿಯೂ ಹುಲಿಗಳು ಸಾವಿಗೀಡಾಗಿದ್ದರೆ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಆದೇಶ ನೀಡಿದ್ದೇನೆ ಎಂದಿದ್ದಾರೆ.
ಅಧಿಕಾರಿಗಳ ವಿರುದ್ಧ ಆಕ್ರೋಶ, ಆರೋಪ
ಇನ್ನೂ ಹುಲಿಗಳ ಅಕಾಲಿಕ ಸಾವಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ ದುಷ್ಕರ್ಮಿಗಳ ವಿಷ ಪ್ರಾಶನಕ್ಕೆ 5 ಹುಲಿಗಳು ಮೃತಪಟ್ಟಿವೆ. ಇದು ರಾಜ್ಯದ ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ನಡೆದಿರುವ ಅತಿ ದೊಡ್ಡ ದುರಂತ. ಸ್ಥಳೀಯ ಅಧಿಕಾರಿಗಳ ಬೇಜವಾಬ್ದಾರಿ, ಕಾಡಂಚಿನ ಗ್ರಾಮಗಳ ಜನರ ದ್ವೇಷಕ್ಕೆ ಅತಿ ಅಪರೂಪದ ಹುಲಿ ಕುಟುಂಬವೇ ಸರ್ವನಾಶವಾಗಿದೆ.
ಮಲೈ ಮಹದೇಶ್ವರ ಕಾಡು ಹುಲಿ ಸಂತತಿ ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಇಲ್ಲಿ ತಾಯಿ ಮತ್ತು 4 ಹುಲಿಗಳು ಮೃತಪಟ್ಟಿರುವುದು, ಇಡಿ ವನ್ಯಜೀವಿ ಸಂರಕ್ಷಣಾ ಯೋಜನೆಗೇ ದೊಡ್ಡ ಹೊಡೆತ ಕೊಟ್ಟಂತಾಗಿದೆ.
ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳು ಗುತ್ತಿಗೆದಾರರಾಗಿಬಿಟ್ಟಿದ್ದಾರೆ. ಕಾಡು ಕಾಯುವ ಕೆಲಸ ಬಿಟ್ಟು ಉಳಿದೆಲ್ಲವನ್ನೂ ಮಾಡುತ್ತಿದ್ದಾರೆ. ಭ್ರಷ್ಟರು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ವರ್ಗ ಮಾಡಿಸಿಕೊಂಡು ಹೋಗಿ ಕಾಡನ್ನು ಹಾಳು ಮಾಡುತ್ತಿದ್ದಾರೆ.
ಸರ್ಕಾರ ಅರಣ್ಯ ಇಲಾಖೆಯಲ್ಲಿ ಬಿಗಿ ಆಡಳಿತ ತರದಿದ್ದರೆ ಇಡಿ ಅರಣ್ಯವನ್ನೇ ಭ್ರಷ್ಟರು ನುಂಗಿ ನೀರು ಕುಡಿಯುವ ಅಪಾಯವಿದೆ ಎಂಬ ಆಕ್ರೋಶದ ಮಾತುಗಳು ಕೇಳಿಬಂದಿದೆ.