Create an e-account and avoid being scammed by land thieves: DCM D.K. Shivakumar

ಇ-ಖಾತೆ ಮಾಡಿಸಿಕೊಳ್ಳಿ, ಭೂಗಳ್ಳರ ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ

ಬೆಂಗಳೂರು: “ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು.

“ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುತ್ತಿದೆ. ಇಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದೇವೆ. ನಾವು ಕೇವಲ ಮತಕ್ಕೆ ರಾಜಕಾರಣ ಮಾಡಿದವರಲ್ಲ. ನಿಮ್ಮ ಹಿತಕ್ಕೆ, ನಿಮ್ಮ ಬದುಕು ಹಾಗೂ ನಿಮ್ಮ ಆಸ್ತಿ ರಕ್ಷಣೆಗೆ ನಾವು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ” ಎಂದು ಹೇಳಿದರು.

“ಉಳುವವನಿಗೆ ಭೂಮಿ ಕೊಟ್ಟಿದ್ದು, ಎ ಖಾತಾ ಇಲ್ಲದವರಿಗೆ ಬಿ ಖಾತಾ ಕೊಟ್ಟಿದ್ದೇವೆ, ಬಗರ್ ಹುಕುಂ ಸಾಗುವಳಿ ರೈತರಿಗೆ ಭೂಮಿ ನೀಡಿದ್ದೇವೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಅಕ್ರಮ ಸಕ್ರಮ ಯೋಜನೆ ಮಾಡಿದ್ದೆವು. ಭೂಮಿ ಯೋಜನೆ ಮೂಲಕ ರೈತರಿಗೆ ಕೇವಲ 5 ರೂ.ಗೆ ಖಾತಾ ದಾಖಲೆ ನೀಡಿದ್ದೇವೆ” ಎಂದರು.

“ನಿಮ್ಮ ಆಸ್ತಿಗಳ ದಾಖಲೆ ಸರಿಪಡಿಸಲು ಪಾಲಿಕೆ ವ್ಯಾಪ್ತಿಯಲ್ಲಿ ನಿಮ್ಮ ಆಸ್ತಿ ದಾಖಲೆ ಸ್ಕ್ಯಾನ್ ಮಾಡಿಸಲಾಗಿದೆ. ನಿಮ್ಮ ಕ್ಷೇತ್ರದಲ್ಲಿ ಇಂದು ಯಾರೂ ಲಂಚ ನೀಡದೇ, ನಿಮ್ಮ ಆಸ್ತಿ ಖಾತಾ ದಾಖಲೆ ನೀಡಬೇಕು ಎಂಬುದು ನನ್ನ ಆಲೋಚನೆ. ನನ್ನ ಈ ಕನಸಿನ ಯೋಜನೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಬಲವಾಗಿ ನಿಂತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ವಿಜಯನಗರ ಜಿಲ್ಲೆಯಲ್ಲಿ ತಾಂಡಾ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಿ 1,11,111 ಜನರಿಗೆ ಉಚಿತವಾಗಿ ದಾಖಲೆ ಪತ್ರ ನೀಡಿದ್ದೇವೆ. ಆಮೂಲಕ ನಮ್ಮ ಸರ್ಕಾರ ಆರನೇ ಗ್ಯಾರಂಟಿ ಯೋಜನೆ ಭೂ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ” ಎಂದರು.

“ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿದ್ದು, ಈ ಎಲ್ಲಾ ಆಸ್ತಿಗಳ ಡಿಜಿಟಲಿಕರಣಗೊಳಿಸಿ ನಿಮ್ಮ ಮನೆ ಬಾಗಿಲಿಗೆ ನೀಡುವಂತೆ ಕ್ರಾಂತಿಕಾರಿ ಬದಲಾವಣೆ ತರಲು ತೀರ್ಮಾನಿಸಿದ್ದೇನೆ. ನೀವು ನಿಮ್ಮ ಆಸ್ತಿ ದಾಖಲೆಗಳನ್ನು ಅಪ್ ಲೋಡ್ ಮಾಡಿ ಈ ಖಾತಾ ಮಾಡಿಕೊಳ್ಳಿ. ಒಂದು ವೇಳೆ ನಿಮಗೆ ಇದು ಸಾಧ್ಯವಾಗದೆ ಇದ್ದರೆ ನಿಮಗೆ ನೀಡಲಾಗಿರುವ ದೂರವಾಣಿಗೆ ಕರೆ ಮಾಡಿ. ಅವರೇ ಬಂದು ನಿಮ್ಮ ದಾಖಲೆ ಅಪ್ ಲೋಡ್ ಮಾಡಿ ಇ ಖಾತಾ ಮಾಡುತ್ತಾರೆ” ಎಂದು ವಿವರಿಸಿದರು.

“ಪಾಲಿಕೆ ವ್ಯಾಪ್ತಿಯ 25 ಲಕ್ಷ ಆಸ್ತಿಗಳ ಪೈಕಿ 5 ಲಕ್ಷ ಆಸ್ತಿ ದಾಖಲೆಗಳನ್ನು ಈ ರೀತಿ ವಿತರಣೆ ಮಾಡಲಾಗಿದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ 50 ಸಾವಿರ ಮನೆಗಳಿಗೆ ಈ ದಾಖಲೆ ವಿತರಣೆ ಮಾಡಲಾಗಿದೆ. ನಿಮ್ಮ ಗುರುತಿನ ಚೀಟಿಗೆ ಹೇಗೆ ಪ್ರತ್ಯೇಕ ಸಂಖ್ಯೆ ನೀಡಲಾಗಿದೆಯೋ ಅದೇ ರೀತಿ ನಿಮ್ಮ ಆಸ್ತಿಗಳಿಗೂ ಪ್ರತ್ಯೇಕ ಸಂಖ್ಯೆ ನೀಡಲು ನಿಮ್ಮ ಸರ್ಕಾರ ಬದ್ಧವಾಗಿದೆ” ಎಂದರು.

“ಜುಲೈ 1ರಿಂದ ಒಂದು ತಿಂಗಳ ಕಾಲ ಇ ಖಾತಾ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ ನೀವುಗಳು ಭಾಗವಹಿಸಿ ನಿಮ್ಮ ಆಸ್ತಿ ಇ ಖಾತೆ ಮಾಡಿಸಿಕೊಳ್ಳಿ ವಂಚನೆಯಿಂದ ತಪ್ಪಿಸಿಕೊಳ್ಳಿ. ನಂತರ ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ಇಂತಹ ಕಾರ್ಯಕ್ರಮ ಮಾಡುತ್ತೇವೆ. ನಿಮಗೆ ನಮ್ಮ ಅಧಿಕಾರಿಗಳು, ಕಾರ್ಯಕರ್ತರು ಸಹಕಾರ ನೀಡಲಿದ್ದಾರೆ” ಎಂದು ಹೇಳಿದರು.

“ಈ ಸರ್ಕಾರ ಬೆಂಗಳೂರಿನಲ್ಲಿ ದೊಡ್ಡ ಬದಲಾವಣೆ ತರಲು ಮುಂದಾಗಿದೆ. ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಹಾಗೂ ಸಮಗ್ರ ಅಭಿವೃದ್ಧಿಗೆ 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ. ಈ ಪೈಕಿ ಪಿಆರ್ ಆರ್ ರಸ್ತೆ ನಿಮ್ಮ ಕ್ಷೇತ್ರದಲ್ಲಿ ಹಾದು ಹೋಗಲಿದೆ” ಎಂದು ಹೇಳಿದರು.

“ಇನ್ನು ಮುಂದೆ ನೀವು ಮನೆ ಕಟ್ಟುವಾಗ ಕಟ್ಟಡ ನಕ್ಷೆ ಅನುಮತಿ ಕಚೇರಿ ಅಲೆಯುವಂತಿಲ್ಲ. ನಂಬಿಕೆ ನಕ್ಷೆ ಯೋಜನೆ ಮೂಲಕ 50×80 ವಿಸ್ತೀರ್ಣವರೆಗಿನ ನಿವೇಶನವರೆಗೂ ಕಟ್ಟಡ ನಕ್ಷೆಯನ್ನು ನೋಂದಾಯಿತ ಇಂಜಿನಿಯರ್ ಗಳ ಮೂಲಕ ಒಂದೇ ದಿನದಲ್ಲಿ ಅನುಮತಿ ಪಡೆಯಬಹುದು. ಈ ಯೋಜನೆ ಮೂಲಕ ನಾವು ಈವರೆಗೂ 9 ಸಾವಿರ ಕಟ್ಟಡ ನಕ್ಷೆಗಳಿಗೆ ಮಂಜೂರಾತಿ ನೀಡಿದ್ದೇವೆ. ಇನ್ನು ನಗರದಲ್ಲಿ ಆಸ್ತಿ ತೆರಿಗೆ ಕಟ್ಟದವರಿಗೆ ಒನ್ ಟೈಮ್ ಸೆಟ್ಟಲ್ಮೆಂಟ್ ಯೋಜನೆ ಮೂಲಕ ಒಂದು ಅವಕಾಶ ನೀಡಲಾಗಿತ್ತು” ಎಂದು ಹೇಳಿದರು.

“ಈ ಕ್ಷೇತ್ರದಲ್ಲಿ ಅಗತ್ಯ ಮೇಲ್ಸೇತುವೆ, ರಸ್ತೆ ಅಭಿವೃದ್ಧಿಗೆ ನೂರಾರು ಕೋಟಿ ಮೊತ್ತದ ಯೋಜನೆ ಹಮ್ಮಿಕೊಳ್ಳಲಾಗಿದೆ. ಕೃಷ್ಣ ಭೈರೇಗೌಡ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರಿನ ಕೊಳಚೆ ನೀರು ಕಾಲುವೆಗಳ ತಡೆಗೋಡೆ ಎತ್ತರಿಸಲು 2 ಸಾವಿರ ಕೋಟಿ ಅನುದಾನ ತಂದಿದ್ದಾರೆ” 3ಎಂದರು.

“ಇತ್ತೀಚೆಗೆ ಸುಪ್ರೀಂಕೋರ್ಟ್ ಒಂದು ತೀರ್ಪು ನೀಡಿದ್ದು, ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಿದರೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಆದೇಶ ಹೊರಡಿಸಿದೆ. ಈಗಾಗಲೇ ಮನೆ ಕಟ್ಟಿರುವ ಸಾರ್ವಜನಿಕರಿಗೆ ನಾವು ಹೇಗೆ ಸಹಾಯ ಮಾಡಬಹುದು ಎಂದು ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗುತ್ತಿದೆ” ಎಂದು ಭರವಸೆ ನೀಡಿದರು.

“ನಾವು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆ ಎಂಬುದಕ್ಕಿಂತ, ಅಧಿಕಾರ ಇದ್ದಾಗ ನಾವು ಏನು ಸಾಕ್ಷಿಗುಡ್ಡೆ ಬಿಟ್ಟು ಹೋಗುತ್ತೇವೆ ಎಂಬುದು ಮುಖ್ಯ. ಬೆಂಗಳೂರು ಕಟ್ಟಿದ ಕೆಂಪೇಗೌಡರನ್ನು, ವಿಧಾನ ಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಹಾಗೂ ಬೆಂಗಳೂರನ್ನು ಅಭಿವೃದ್ಧಿ ಮಾಡಿದ ಎಸ್.ಎಂ ಕೃಷ್ಣ ಅವರನ್ನು ನಾವು ಸ್ಮರಿಸುತ್ತೇವೆ. ಅದೇ ರೀತಿ ನೀವು ನಿಮ್ಮ ಆಸ್ತಿ ದಾಖಲೆ ನೀಡಿ, ನಿಮ್ಮ ಆಸ್ತಿ ಕಾಪಾಡಿದ ಕೃಷ್ಣ ಭೈರೇಗೌಡ ಅವರನ್ನು ಸದಾ ಸ್ಮರಿಸಬೇಕು. ಮುಂದಿನ ಚುನಾವಣೆಯಲ್ಲಿ ನೀವು ಕೃಷ್ಣ ಭೈರೇಗೌಡ ಅವರನ್ನು 1 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110310"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರಸಿದ್ಧ ಟಿವಿ ಸುದ್ದಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್ ಅನುಮಾನಾಸ್ಪದ ಸಾವು..!

ಪ್ರಸಿದ್ಧ ಟಿವಿ ಸುದ್ದಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್ ಅನುಮಾನಾಸ್ಪದ ಸಾವು..!

ಶ್ವೇಚ್ಛಾ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವು ಗಂಟೆಗಳ ಮೊದಲು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ರು, Swetcha Votarkar

[ccc_my_favorite_select_button post_id="110170"]
ದೊಡ್ಡಬಳ್ಳಾಪುರ: ಟ್ರಂಚ್ಗೆ ಬಿದ್ದು ಬೈಕ್ ಸವಾರ ದುರ್ಮರಣ..!

ದೊಡ್ಡಬಳ್ಳಾಪುರ: ಟ್ರಂಚ್ಗೆ ಬಿದ್ದು ಬೈಕ್ ಸವಾರ ದುರ್ಮರಣ..!

ಕಾಮಗಾರಿಗೆಂದು ತೋಡಲಾಗಿದ್ದ ಟ್ರಂಚ್‌ಗೆ ನಿಯಂತ್ರಣ ತಪ್ಪಿ ಬಿದ್ದು (Accident) ಬೈಕ್ ಸವಾರ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ

[ccc_my_favorite_select_button post_id="110283"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]