ದೊಡ್ಡಬಳ್ಳಾಪುರ: ಎಂಎಸ್‌ವಿ ಪಬ್ಲಿಕ್ ಶಾಲಾ ಸಂಸತ್ ಚುನಾವಣೆ ಫಲಿತಾಂಶ ಪ್ರಕಟ..!

Doddaballapur: MSV Public School Parliament election results announced..!

ದೊಡ್ಡಬಳ್ಳಾಪುರ; ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಶಾಲಾ ಸಂಸತ್ ಚುನಾವಣೆ ನಡೆಸಲಾಗಿದ್ದು, ಇದೀಗ ಫಲಿತಾಂಶ ಪ್ರಕಟವಾಗಿದೆ.

ಸಂಸ್ಥೆಯ ಅಧ್ಯಕ್ಷರಾದ ಎ.ಸುಬ್ರಮಣ್ಯ ಅವರು ಮೊಹರು ಮಾಡಿದ ನಾಮ ಮತಪತ್ರಗಳನ್ನು ಚುನಾವಣಾಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಪ್ರಕ್ರಿಯೆಗೆ ಅಧಿಕೃತ ಚಾಲನೆಯನ್ನು ನೀಡಿದರು. ಅಲ್ಲದೆ ಪ್ರಥಮ ಮತವನ್ನು ಚಲಾಯಿಸಿದರು.

ಬಳಿಕ ಮಾತನಾಡಿದ ಅವರು, ಭಾರತ ಒಂದು ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿ ಪ್ರಜೆಯೂ ಸಂವಿಧಾನಬದ್ಧವಾಗಿ ಹಾಗೂ ಅದು ನೀಡಿರುವ ಹಕ್ಕುಗಳ ಅನ್ವಯ ಜೀವಿಸಬೇಕಾಗುತ್ತದೆ.

ಇಂತಹ ವ್ಯವಸ್ಥೆಯಲ್ಲಿ ಪ್ರತಿ ಪ್ರಜೆಯೂ ತಾನು ಚುನಾವಣೆ ನಿಲ್ಲುವ ಅವಕಾಶವನ್ನು ಪಡೆದಿರುತ್ತಾನೆ. ಇಂತಹ ವ್ಯವಸ್ಥೆಯಲ್ಲಿ ಚುನಾವಣೆ ಎಂದರೇನು? ಚುನಾವಣಾ ಚಿಹ್ನೆ ಎಂದರೇನು? ನಾಮ ಪತ್ರ ಸಲ್ಲಿಸುವ, ಹಿಂಪಡೆಯುವ, ಮತದಾನ ಮಾಡುವ ಹಾಗೂ ಮತ ಎಣಿಕೆ ಹೇಗೆ ಎನ್ನುವ ಹಲವು ಪ್ರಶ್ನೆಗಳಿವೆ.

ಈ ಹಿನ್ನೆಲೆಯಲ್ಲಿ ಶಾಲಾ ಹಂತದಲ್ಲಿ ಚುನವಣೆಯ ಮೂಲಕ ವಿದ್ಯಾರ್ಥಿ ಸಂಘದ ನಾಯಕ/ನಾಯಕಿಯನ್ನು, ವಿವಿಧ ಗುಂಪಿನ ನಾಯಕರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಿದಾಗ ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಒಂದು ನಾಯಕತ್ವ ಗುಣ, ಹಾಗೂ ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಜೀವನದಲ್ಲಿ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಗುಣಗಳನ್ನು ಬೆಳೆಸಿಕೊಳ್ಳುತ್ತಾನೆ. ಅಂತಹ ವಿದ್ಯಾರ್ಥಿ ಚುನಾವಣೆಯನ್ನು ಇಂದು ಶಾಲೆಯಲ್ಲಿ ನಡೆಸಲಾಗಿದೆ ಎಂದರು.

ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ, ವಿದ್ಯಾರ್ಥಿಗಳು ಮತ ಚಲಾಯಿಸಿ 2025-26 ನೇ ಸಾಲಿನ ವಿವಿಧ ಗುಂಪಿನ ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿದರು.

ಶಾಲೆಯ ಶಿಕ್ಷಕ ಬಳಗ ಚುನವಣಾ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿ, ವಿದ್ಯಾರ್ಥಿ ಚುನಾವಣೆಯನ್ನು ಯಶಸ್ವಿಗೊಳಿಸಿದರು.

ಆಯ್ಕೆಯಾದ ಮಕ್ಕಳು ವಿವಿಧ ಜವಾಬ್ದಾರಿಗಳನ್ನು ಹೊಂದುವುದರಿಂದ ವರ್ಷವಿಡೀ ಶಾಲೆಯ ನಿರ್ವಹಣೆಯಲ್ಲಿ ಶಿಕ್ಷಕರಿಗೆ ಸಹಾಯ ಹಸ್ತ ನೀಡುತ್ತಾರೆ.

ಈ ವೇಳೆ ಶಾಲೆಯ ಉಪಾಧ್ಯಕ್ಷ ಸ್ವರೂಪ್ ಎಸ್., ಪ್ರಾಂಶುಪಾಲರಾದ ರೆಮ್ಯ ಬಿ. ವಿ. ಒಳಗೊಂಡಂತೆ ಎಲ್ಲಾ ಶಿಕ್ಷಕ ಸಿಬ್ಬಂದಿ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಮತ ಚಲಾಯಿಸಿದರು.

ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ನಾಯಕರ ವಿವರ

ಶಾಲಾ ನಾಯಕ: ಭುವನ್.ಇ.. (Class 9)
ಶಾಲಾ ನಾಯಕಿ: ಎಸ್. ರೋಶಿನಿ. (Class 9)
ಶಾಲಾ ಉಪನಾಯಕ: ಎಂ.ಆರ್.ಚಿರಂತ್ ನಾಗ್ ಗೌಡ (Class 8)
ಶಾಲಾ ಉಪನಾಯಕಿ: ಹಂಸಿಕಾ .ಸಿ.ಎಮ್. (Class 9)
ಸಾಂಸ್ಕೃತಿಕ ಕಾರ್ಯದರ್ಶಿ; ಬಾಲಕ – ಗೌರವ್ (Class 8)
ಸಾಂಸ್ಕೃತಿಕ ಕಾರ್ಯದರ್ಶಿ: ಬಾಲಕಿ – ದೇವಾನಂದ. ಆರ್. (Class 8)
ಕ್ರೀಡಾ ಕಾರ್ಯದರ್ಶಿ: ಬಾಲಕ – ಚಂದನ್ ಆರ್.. (Class 8)
ಕ್ರೀಡಾ ಕಾರ್ಯದರ್ಶಿ: ಬಾಲಕಿ – ಹರ್ಷಿತಾ.ಎಂ. (Class 9)

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]