Sleeping position

ಹರಿತಲೇಖನಿ ದಿನಕ್ಕೊಂದು ಕಥೆ: ಮಲಗುವ ವಿಧಾನ

Harithalekhani: ದಿನವಿಡೀ ಕಾರ್ಯನಿರತವಾಗಿರುವ ಶರೀರಕ್ಕೆ ವಿಶ್ರಾಂತಿ ಸಿಗಲೆಂದು ನಾವು ಮಲಗುತ್ತೇವೆ. ಆದುದರಿಂದ ‘ಯಾವ ರೀತಿಯಲ್ಲಿ ಅಥವಾ ಭಂಗಿಯಲ್ಲಿ ಮಲಗುವುದರಿಂದ ಶರೀರಕ್ಕೆ ಹೆಚ್ಚಿನ ವಿಶ್ರಾಂತಿ ಸಿಗುತ್ತದೆಯೋ, ಆ ಭಂಗಿಯು ಒಳ್ಳೆಯದು’ ಎಂಬುವುದು ಒಂದು ಸಾಮಾನ್ಯ ನಿಯಮ.

ಪ್ರತಿಯೊಬ್ಬರ ಪ್ರಕೃತಿ ಮತ್ತು ಆ ಸಮಯದ ಸ್ಥಿತಿಗನುಗುಣವಾಗಿ ವಿಶ್ರಾಂತಿ ಸಿಗುವ ಭಂಗಿಯು ಬೇರೆ ಬೇರೆ ಆಗಿರಬಹುದು. ನಾವು ಯಾವ ಭಂಗಿಯಲ್ಲಿ ಮಲಗಬೇಕು ಎಂಬುವುದು ನಮಗೆ ನಿದ್ದೆ ಬರುವ ತನಕ ಮಾತ್ರ ನಾವು ನಿರ್ಧರಿಸಬಹುದು, ಏಕೆಂದರೆ ನಿದ್ದೆ ಬಂದ ನಂತರ ನಮ್ಮ ಶರೀರದ ಸ್ಥಿತಿಯು ನಮ್ಮ ನಿಯಂತ್ರಣದಲ್ಲಿರುವುದಿಲ್ಲ.

ಅ. ಮಗುಚಿ (ಕೆಳಮುಖವಾಗಿ) ಮಲಗುವುದು

ನವಜಾತ ಶಿಶುಗಳನ್ನು ಮತ್ತು ಚಿಕ್ಕ ಮಕ್ಕಳನ್ನು ಈ ರೀತಿ ಮಲಗಿಸಿದರೆ ಅವರಿಗೆ ಶ್ವಾಸ ತೆಗೆದುಕೊಳ್ಳಲು ಅಡಚಣೆಯಾಗಬಹುದು. ಆದುದರಿಂದ ಮಕ್ಕಳನ್ನು ಈ ರೀತಿ ಮಲಗಿಸಬಾರದು. ಹಾಗೆಯೇ ಮಗುಚಿ ಮಲಗುವುದರಿಂದ ಇತರ ವಿಧಾನಗಳ ತುಲನೆಯಲ್ಲಿ ಬೆನ್ನೆಲುಬಿನ ಮೇಲೆ ಹೆಚ್ಚಿನ ಒತ್ತಡ ಬರುತ್ತದೆ.

ಆ. ಅಂಗಾತ (ಬೆನ್ನಿನ ಮೇಲೆ) ಮಲಗುವುದು

ನಾವು ನಿಂತುಕೊಂಡಾಗ ನಮ್ಮ ಬೆನ್ನೆಲುಬಿನ ಮೇಲೆ ಶೇ.100 ರಷ್ಟು ಒತ್ತಡವಿರುತ್ತದೆ ಎಂದುಕೊಳ್ಳೋಣ, ನಾವು ಅಂಗಾತ ಮಲಗಿದಾಗ ಈ ಒತ್ತಡವು ಶೇ. 75 ರಷ್ಟು ಕಡಿಮೆಯಾಗಿ ಕೇವಲ ಶೇ.35 ರಷ್ಟೇ ಉಳಿಯುತ್ತದೆ.

ಈ ರೀತಿ ಮಲಗಿದಾಗ ಬೆನ್ನಿನ ಎಲುಬುಗಳ ಮೇಲಿನ ಒತ್ತಡವು ಇತರ ಭಂಗಿಗಳ ತುಲನೆಯಲ್ಲಿ ಅತ್ಯಂತ ಕಡಿಮೆಯಾಗಿರುತ್ತದೆ. ಆದುದರಿಂದ ಬೆನ್ನೆಲುಬಿನ ತೊಂದರೆಗಳಿರುವವರು ಈ ರೀತಿ ಮಲಗಿದರೆ ಅವರಿಗೆ ಸುಖಕರ ನಿದ್ದೆ ಸಿಗುತ್ತದೆ. ಅಂಗಾತ ಮಲಗುವಾಗ ಮಂಡಿಗಳ ಕೆಳಗೆ ಒಂದು ಚಿಕ್ಕ ದಿಂಬನ್ನು ಇಟ್ಟುಕೊಂಡರೆ ಬೆನ್ನೆಲುಬಿನ ಒತ್ತಡ ಇನ್ನಷ್ಟು ಕಡಿಮೆಯಾಗುತ್ತದೆ.

ಅಂಗಾತ (ಬೆನ್ನಿನ ಮೇಲೆ) ಮಲಗುವುದು ಮತ್ತು ಗೊರಕೆ ಹೊಡೆಯುವುದರ ಸಂಬಂಧವೇನು?

ಯಾರಿಗಾದರೂ ಗೊರಕೆ ಹೊಡೆಯುವ ಅಭ್ಯಾಸವಿದ್ದರೆ, ಅವರು ಅಂಗಾತ ಮಲಗಿದರೆ ಅದು ಹೆಚ್ಚಾಗುತ್ತದೆ. ನಿದ್ದೆಯಲ್ಲಿದ್ದಾಗ ಅನೇಕ ಕಾರಣಗಳಿಂದ ಉಸಿರಾಟಕ್ಕೆ ತೊಂದರೆಯಾದಾಗ ಜನರು ಗೊರಕೆ ಹೊಡೆಯುತ್ತಾರೆ.

ಅಂಗಾತ ಮಲಗಿದಾಗ ಶ್ವಾಸನಳಿಕೆಯಲ್ಲಿ ಅಡಚಣೆಗಳು ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಯಾವುದಾದರೊಂದು ಮಗ್ಗುಲಿನಲ್ಲಿ ಮಲಗುವುದರಿಂದ ಶ್ವಾಸನಳಿಕೆಯಲ್ಲಿ ಅಡಚಣೆಯು (ಉದಾಹರಣೆಗೆ ಶಿಥಿಲವಾದ ಸ್ನಾಯುಗಳಿಂದಾಗಿ ಶ್ವಾಸ ನಳಿಕೆಯಲ್ಲಿ ಅಡ್ಡಿ ಬಂದು ಶ್ವಾಸೋಚ್ಛ್ವಾಸಕ್ಕೆ ಆಗುವ ತೊಂದರೆ) ದೂರವಾಗಿ ಗೊರಕೆ ಹೊಡೆಯುವುದನ್ನು ತಡೆಯಬಹುದು. ಈ ರೀತಿ ಮಗ್ಗುಲಿನಲ್ಲಿ ಮಲಗುವ ಅನೇಕರಿಗೆ ಶಾಂತ ನಿದ್ರೆಯ ಅನುಭವವು ಸಿಕ್ಕಿದೆ.

ಇ. ಒಂದು ಮಗ್ಗುಲಿನಲ್ಲಿ ಮಲಗುವುದು

ಮಗ್ಗುಲಿನಲ್ಲಿ ಮಲಗುವುದರಿಂದ ಬೆನ್ನೆಲುಬಿನ ಮೇಲೆ ನಿಂತಿಕೊಂಡಿರುವ ಸ್ಥಿತಿಯ ಶೇ.75 ರಷ್ಟು ಒತ್ತಡವಿರುತ್ತದೆ. ಬಲ ಮಗ್ಗುಲಿನಲ್ಲಿ ಮಲಗುವುದರಿಂದ ಚಂದ್ರನಾಡಿಯು, ಎಡ ಮಗ್ಗುಲಿನಲ್ಲಿ ಮಲಗುವುದರಿಂದ ಸೂರ್ಯನಾಡಿಯು ಸಕ್ರಿಯವಾಗಲು ಸಹಾಯವಾಗುತ್ತದೆ.

ಮಲಗುವಾಗ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಮಾಡಿ, ಒಂದು ಮಗ್ಗುಲಿನಲ್ಲಿ ಮಲಗಬೇಕು.

ಧರ್ಮಶಾಸ್ತ್ರಗಳಲ್ಲಿ ‘ಮಗ್ಗುಲಿನಲ್ಲಿ ಮಲಗಬೇಕು’ ಎಂದು ಹೇಳಿರುವುದರಿಂದ, ಬೇರೆ ಭಂಗಿಯಲ್ಲಿ ಮಲಗಲು ಯಾವುದೇ ವೈದ್ಯಕೀಯ ಕಾರಣವಿಲ್ಲದಿದ್ದರೆ, ಅಂತಹವರು ಮಗ್ಗುಲಿನಲ್ಲೇ ಮಲಗಲು ಪ್ರಯತ್ನಿಸಬೇಕು.

ನಾವು ಯಾವುದಾದರೊಂದು ಮಗ್ಗುಲಿನಲ್ಲಿ ಮಲಗುವುದರಿಂದ ಕೆಳಗಿನ ದಿಕ್ಕಿನಲ್ಲಿ ಇರುವ ಮೂಗಿನ ಹೊಳ್ಳೆಯು ನಿಧಾನವಾಗಿ ಮುಚ್ಚಿಕೊಳ್ಳುತ್ತದೆ. ಅದು ಸಾಧ್ಯವಾದಷ್ಟು ಮುಚ್ಚಿಕೊಂಡ ಮೇಲೆ ನಾವು ನಿದ್ದೆಯಲ್ಲಿಯೇ ಮಗ್ಗುಲನ್ನು ಬದಲಿಸುತ್ತೇವೆ. ಆಗ ಮೂಗಿನ ಆ ಹೊಳ್ಳೆಯು ನಿಧಾನವಾಗಿ ತೆರೆದು ಇನ್ನೊಂದು ಹೊಳ್ಳೆಯು ಮುಚ್ಚಿಕೊಳ್ಳುತ್ತದೆ.

ಈ ರೀತಿ ಅದಲು-ಬದಲಾಗಿ ಮೂಗಿನ ಹೊಳ್ಳೆಗಳು ಮುಚ್ಚಿಕೊಳ್ಳುವುದರಿಂದ ನಾವು ನಿದ್ದೆಯಲ್ಲಿಯೇ ಸ್ವಲ್ಪ-ಸ್ವಲ್ಪ ಸಮಯದ ನಂತರ ಮಗ್ಗುಲು ಬದಲಿಸುತ್ತೇವೆ.

ನಾವು ದಿನದ ಕಾಲು ಭಾಗದಷ್ಟು ಸಮಯ ನಿದ್ದೆಗೆಂದು ನೀಡುತ್ತೇವೆ. ಪ್ರತಿ ದಿವಸ ಇಷ್ಟು ಕಾಲಾವಧಿಯನ್ನು ಒಂದೇ ಸ್ಥಿತಿಯಲ್ಲಿ ಕಳೆದರೆ ಚರ್ಮದ ಮೇಲೆ ಸತತವಾಗಿ ಒತ್ತಡ ಬೀಳುವುದರಿಂದ ಹಾಸಿಗೆ ಹುಣ್ಣುಗಳು (ಬೆಡ್-ಸೋರ್) ಆಗುವ ಸಾಧ್ಯತೆ ಇದೆ. ನಿದ್ದೆಯಲ್ಲಿ ನಮ್ಮ ಸ್ಥಿತಿಯನ್ನು ಮಧ್ಯ-ಮಧ್ಯದಲ್ಲಿ ಬಸಲಾಯಿಸಿದರೆ ಯಾವುದೇ ಒಂದು ಅವಯವದ ಮೇಲೆ ಹೆಚ್ಚಿನ ಒತ್ತಡ ಬರುವುದಿಲ್ಲ.

ಕೃಪೆ: ವೈದ್ಯ ಮೇಘರಾಜ್ ಪರಾಡ್ಕರ್, ಸನಾತನ ಆಶ್ರಮ.

AI ಚಿತ್ರ ಬಳಸಲಾಗಿದೆ.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!