BJP is talking about changing the Prime Minister; Santosh Lad explodes bomb

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಹುಬ್ಬಳ್ಳಿ: ಮೋದಿ (Modi) ನೇತೃತ್ವದ ಕೇಂದ್ರ ಸರ್ಕಾರದ ಫಾರಿನ್ ಪಾಲಿಸಿ ಫೇಲ್ ಆಗಿರುವ ಕಾರಣ ಬಿಜೆಪಿಗರು ಒಳಗೊಳಗೆ ಪ್ರಧಾನಮಂತ್ರಿ ಬದಲಾಗಬೇಕೆಂದು ಮಾತಾಡುತ್ತಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ (Santhosh Lad)ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುವ ಬಗ್ಗೆ ಕಾಂಗ್ರೆಸ್ ಶಾಸಕರು ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳುವ ಬಿಜೆಪಿಯವರು, ಪ್ರಧಾನಿ ಮೋದಿ ಅವರನ್ನ ಬದಲಾಯಿಸುವ ಬಗ್ಗೆ ಬಿಜೆಪಿ ಸಂಸದರು ಆಗ್ರಹಿಸುತ್ತಿರುವ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಖರ್ಗೆ ಅವರು ಹೇಳಿರುವುದನ್ನ ಬಿಜೆಪಿ ಟೀಕೆ ಮಾಡುತ್ತಿದೆ, ಅವರು ಸೋನಿಯಾ ಗಾಂಧಿ ಅವರ ಮೇಲಿನ ಗೌರವಕ್ಕೆ ಹಾಗೆ ಹೇಳಿದ್ದಾರೆ. ಆದರೆ ಬಿಜೆಪಿ ಅವರು ದೇಶದಲ್ಲಿ ಸಂಭವಿಸಿದ ಉಗ್ರರ ದಾಳಿ ಬಗ್ಗೆ ಬಿಜೆಪಿ ಅವರನ್ನ ಕೇಳಿ, ಅದರ ಬಗ್ಗೆ ಚರ್ಚೆ ಮಾಡುವ ಬದಲು ಸಣ್ಣ ವಿಚಾರದ ಬಗ್ಗೆ ಟೀಕೆ ಮಾಡುತ್ತಾ, ಅಜೆಂಡಾ ಸೃಷ್ಟಿಸಿ ಜನರನ್ನು ದಿಕ್ಕು ತಪ್ಪಿಸುತ್ತಾ ಸಮಯ ಕಳೆಯುತ್ತಾರೆ‌.

ದೇಶದಲ್ಲಿ ಅನೇಕ ಸಮಸ್ಯೆಗಳು ಇದೆ ರೈತರಿಗೆ ಡಿಎಪಿ ಸಿಗುತ್ತಿಲ್ಲ, ಕಾಂಪ್ಲಿಕ್ಟ್ ಸಿಗುತ್ತಿಲ್ಲ… ಇದರ ಬಗ್ಗೆ ಚರ್ಚೆ ಆಗಬೇಕಲ್ವಾ.. ಆದರೆ ಅದರೆ ಬಿಜೆಪಿಯವರು ಇದರ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ.

ಚೈನಾ ವಸ್ತುಗಳನ್ನು ಬಹುಷ್ಕರಿಸಲು ಪ್ರಧಾನಿಗಳು ಕರೆ ನೀಡುತ್ತಾರೆ. ಮತ್ತೆ ಇಂಪೋರ್ಟ್ ಮಾಡ್ತಾ ಇರೋದ್ ಯಾರು..? ಇದರ ಬಗ್ಗೆ ಕೇಳಬೇಕಲ್ವಾ..? ಇಂಪೋರ್ಟ್ ಮಾಡೋರ್ ಇವರೇ, ಮತ್ ಇವರೇ ಬಂದು ಚೈನಾ ಪ್ರಾಡಕ್ಟ್ ಬಳಸಬೇಡಿ ಅಂತ ಹೇಳ್ತಾರೆ. ಈಗ ಯಾಕ್ ಹೇಳ್ತೀರಿ..? 11 ವರ್ಷ ಏನ್ ಮಾಡ್ತಾ ಇದ್ರೀ..? ಚೈನಾ ಅಧ್ಯಕ್ಷರ ಕರೆತಂದು ತೊಟ್ಟಲಲ್ಲಿ ತೂಗಿದ್ ಯಾರು‌‌..? ಇವತ್ ಹೇಳ್ತಾರೆ ಚೈನಾ ವಸ್ತು ತಗೋಬೇಡಿ ಅಂತ ಹೇಳ್ತಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 2g ಹಗರಣ ಕಲ್ಲಿದ್ದಲು ಹಗರಣದ ಬಗ್ಗೆ ಕಳೆದ 11 ವರ್ಷದ ಅವರೇ (ಬಿಜೆಪಿ) ಅಧಿಕಾರದಲ್ಲಿ ಇದ್ದರು. ಈಗ ಅವರೇ ವರದಿ ಕೊಟ್ಟಿದ್ದಾರೆ, ಏನ್ ವರದಿ ಕೊಟ್ಟಿದ್ದಾರೆ..? ಯಾವ ರೀತಿಯ ಹಗರಣ ನಡೆದಿಲ್ಲ ಎಂದು ವರದಿ ಕೊಟ್ಟಿದ್ದಾರೆ.

ಮತ್ತೆ ದೇಶಕಂಡ ಮಹಾನ್ ಆರ್ಥಿಕ ತಜ್ಞರನ್ನ ಭಯೋತ್ಪಾದಕ ಎಂದು ಬಿಜೆಪಿ ಅವರು ಅವಹೇಳನ ಮಾಡಿದ್ದರು, ಅದರ ಬಗ್ಗೆ ಕ್ಷಮೆನೂ ಕೇಳಿಲ್ಲ. ಹಾಲಿ ಪ್ರಧಾನ ಮಂತ್ರಿ ಸಾಹೇಬರು ಕೂಡ ಮನಮೋಹನ್ ಸಿಂಗ್ ಅವರನ್ನ ಟೆರರಿಸ್ಟ್ ಎಂದಿದ್ದರು. ದಾಖಲೆ ತೆಗೆಸು ನೋಡಲಿ.

ಈಗ 11 ವರ್ಷದ ಅವಧಿಯಲ್ಲಿ ಯಾರ್ ಯಾರಿಗೆ ಎಷ್ಟು ಎಷ್ಟು ಮೈನಿಂಗ್ ಕೊಟ್ಟಿದ್ದಾರೆ, ಯಾವುದು ಎಷ್ಟು ಇಂಪೋರ್ಟ್ ಆಗಿದೆ, ಕಲ್ಲಿದ್ದಲು ಎಷ್ಟು ಇಂಪೋರ್ಟ್ ಆಗಿದೆ ಇದರ ಬಗ್ಗೆ ವರದಿ ಕೊಡ್ತಾರಾ ಕೇಳಿ ಎಂದು ಬಿಜೆಪಿ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!