Shortage of 132 teachers in Doddaballapura: Karave Rajaghatta Ravi warns of locking down BEO office

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರ: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ ಎದುರಾಗಿದೆ.

ಈ ನಿಟ್ಟಿನಲ್ಲಿ ಹರಿತಲೇಖನಿ (Harithalekhani) ವರದಿಗೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ (Rajaghatta Ravi) ಪ್ರತಿಕ್ರಿಯೆ ನೀಡಿದ್ದು, ಶಿಕ್ಷಣ ಇಲಾಖೆ ಹಾಗೂ ದೊಡ್ಡಬಳ್ಳಾಪುರ ಚುನಾಯಿತ ಜನಪ್ರತಿನಿದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರಿಗೆ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ಇವೆರಡು ನೀಡಬೇಕಾದ್ದು, ಸರ್ಕಾರಗಳ ಕರ್ತವ್ಯ. ಆದರೆ ಇವೆರಡನ್ನು ಬಿಟ್ಟು ಉಳಿದಲ್ಲವನ್ನು ಮಾಡಲಾಗುತ್ತಿದೆ.

ಸರ್ಕಾರಗಳು ಶಿಕ್ಷಕರ ಮೇಲೆ ಮಾಡಿದ ಪ್ರಯೋಗ ಮತ್ಯಾವುದೇ ಇಲಾಖೆ ಮೇಲೆ ಮಾಡುತ್ತಿಲ್ಲ. ಬಿಸಿ ಊಟ, ಬಾಳೆಹಣ್ಣು, ಮೊಟ್ಟೆ, ಜನ ಗಣತಿ, ಜಾತಿ ಗಣತಿ, ಮತದಾರರ ಸರ್ವೆ ಎಂಬತೆ ಪಾಠ ಮಾಡಿಸುವುದೊಂದು ಬಿಟ್ಟು ಮಿಕ್ಕಿದೆಲ್ಲದಕ್ಕೂ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ.

ದೊಡ್ಡಬಳ್ಳಾಪುರದಲ್ಲಿ ಮಿತಿಮೀರಿದ ಶಿಕ್ಷಕರ ಕೊರತೆ ಇದ್ದಾಗಿಯೂ ಶಿಕ್ಷಣ ಇಲಾಖೆ, ಚುನಾಯಿತ ಜನಪ್ರತಿನಿದಿಗಳು ಕ್ರಮಕೈಗೊಳ್ಳದೆ ಇರುವುದು ನಾಚಿಕೆ ಗೇಡಿನ ಸಂಗತಿ. SSLC ಫಲಿತಾಂಶದಲ್ಲಿ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೊನೆಯ ಸ್ಥಾನ ಎಂದರೆ ಇವರಿಗೆ ನಾಚಿಗೆ ಆಗಬೇಕು.

ಈ ರೀತಿ ಕ್ರಮಕೈಗೊಳ್ಳದೆ ಉಳಿಯುವುದಾದರೆ ಶಿಕ್ಷಣ ಇಲಾಖೆ ಅಗತ್ಯವೇ ಇಲ್ಲ. ಶಿಕ್ಷಣ ಇಲಾಖೆ ಕರ್ತವ್ಯ ಅಗತ್ಯ ಶಿಕ್ಷಕರನ್ನು ನೇಮಿಸುವುದು. ಆದರೆ ಆ ಕೆಲಸ ಆಗುತ್ತಿಲ್ಲ. ಅನೇಕ ಅನುದಾನಿತ ಶಾಲೆಗಳು ಈಗಾಗಲೇ ಮುಚ್ಚುವ ಹಂತಕ್ಕೆ ಬಂದಿದ್ದು ಖಾಸಗಿ ಶಾಲೆಗಳಾಗಿ ಮಾರ್ಪಾಡು ಬಡ ಜನರಿಂದ ಸುಲಿಗೆ ಮಾಡು ಹಂತಕ್ಕೆ ಬಂದಿದೆ.

ಇನ್ನೂ ಕರವೇ ತಾಳ್ಮೆಯಿಂದ ಇರಲು ಸಾಧ್ಯವಿಲ್ಲ. ಏನ್ ದೊಡ್ಡಬಳ್ಳಾಪುರದಲ್ಲಿ ಹೇಳುವವರು ಇಲ್ಲ ಎಂಬ ನಿಲವೇ..? ಕೂಡಲೇ ಅತಿಥಿ ಶಿಕ್ಷಕರಿಗೆ ಮಾತ್ರ ಸೀಮಿತವಾಗದೇ, ಅಗತ್ಯ ಶಿಕ್ಷಕರ ನೇಮಕಕ್ಕೆ‌ ಮುಂದಾಗಿ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಬಿಇಒ ಕಚೇರಿಗೆ ಬೀಗ ಜಡಿದು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜಘಟ್ಟರವಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರದ ಸರ್ಕಾರಿ ಶಾಲೆಗಳಲ್ಲಿ 132 ಶಿಕ್ಷಕರ ಕೊರತೆ.. ಪೋಷಕರಲ್ಲಿ ಹೆಚ್ಚಾದ ಆತಂಕ

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!