Donation done with Arrogance

ಹರಿತಲೇಖನಿ ದಿನಕ್ಕೊಂದು ಕಥೆ: ಅಹಂಕಾರದಿಂದ ಮಾಡುವ ದಾನ

Harithalekhani; ದಾನವನ್ನು ಅಹಂಕಾರ ಅರ್ಥಾತ್ ‘ನನ್ನ’ ತನದಿಂದ ನೀಡಬಾರದು. ಅಹಂಕಾರದಿಂದ ಮಾಡಿರುವ ದಾನಕ್ಕೆ ಯಾವುದೇ ಲಾಭವಿರುವುದಿಲ್ಲ. ಇದರ ಮಹತ್ವವನ್ನು ಒಂದು ಕಥೆಯಿಂದ ತಿಳಿದುಕೊಳ್ಳೋಣ.

ಮಹಾಭಾರತ ಕಾಲದ ಕಥೆಯಾಗಿದೆ. ಒಬ್ಬ ಬ್ರಾಹ್ಮಣನು ಭಿಕ್ಷೆಯನ್ನು ಬೇಡಿ ತನ್ನ ಕುಟುಂಬದವರ ಹೊಟ್ಟೆಯನ್ನು ತುಂಬಿಸುತ್ತಿದ್ದನು. ಒಮ್ಮೆ ಆ ಬ್ರಾಹ್ಮಣ ಹಾಗೂ ಅವನ ಕುಟುಂಬದವರು ಊಟವನ್ನು ತಯಾರಿಸುತ್ತಿದ್ದರು.

ಅದೇ ಸಮಯದಲ್ಲಿ ಒಬ್ಬ ವೃದ್ಧ ವ್ಯಕ್ತಿ ಅವರ ಮನೆಯ ಬಾಗಿಲಿಗೆ ಬಂದನು. ಅವನು ಹಸಿದಿದ್ದನು ಮತ್ತು ಅವನು ಭಿಕ್ಷೆಯಲ್ಲಿ ಏನಾದರೂ ತಿನ್ನಲು ಕೊಡುವಂತೆ ಕೇಳಿದನು. ಬ್ರಾಹ್ಮಣ ಕುಟುಂಬದವರು ತಮ್ಮ ಸಂಪೂರ್ಣ ಊಟವನ್ನು ಆ ವೃದ್ಧ ಅತಿಥಿಗೆ ಅರ್ಪಿಸಿದರು. ಆ ವೃದ್ಧ ಅತಿಥಿ ಅನ್ನವನ್ನು ಗ್ರಹಣ ಮಾಡಿ ತೃಪ್ತನಾದನು. ತದನಂತರ ಅತಿಥಿಯು ತನ್ನ ಕೈಗಳನ್ನು ತೊಳೆದನು.

ಅದೇ ಸಮಯದಲ್ಲಿ ಅಲ್ಲಿಗೆ ಒಂದು ಮುಂಗುಸಿ ಬಂದಿತು ಮತ್ತು ಎಲ್ಲಿ ಆ ಅತಿಥಿಯು ಕೈತೊಳೆದಿದ್ದನೋ, ಆ ಸ್ಥಾನದಲ್ಲಿ ಬಿದ್ದ ನೀರಿನಲ್ಲಿ ಆ ಮುಂಗುಸಿ ಹೊರಳಾಡತೊಡಗಿತು. ಮುಂಗುಸಿಯ ಅರ್ಧಶರೀರ ಬಂಗಾರದ ಬಣ್ಣದ್ದಾಯಿತು. ಈ ವಿಷಯವು ಅರಣ್ಯದಲ್ಲಿ ಹರಡುವ ಬೆಂಕಿಯಂತೆ ಎಲ್ಲೆಡೆಯೂ ಹಬ್ಬಿತು.

ಧರ್ಮರಾಜ ಯುಧಿಷ್ಠಿರನಿಗೂ ಈ ವಿಷಯ ತಲುಪಿತು. ಆಗ ಅವನ ಮನಸ್ಸಿನಲ್ಲಿ ‘ನಾನಂತೂ ಲಕ್ಷಾಂತರ ಜನರಿಗೆ ಪ್ರತಿದಿನ ಊಟವನ್ನು ಹಾಕುತ್ತೇನೆ. ಒಂದು ವೇಳೆ ಇಲ್ಲಿಗೆ ಬಂದು ಆ ಮುಂಗುಸಿ ಹೊರಳಾಡಿದರೆ ಅದರ ಉಳಿದರ್ಧ ಭಾಗವೂ ಬಂಗಾರದ ಬಣ್ಣವಾಗುವುದು’ ಎಂದು ವಿಚಾರ ಮಾಡಿದರು.

ಯುಧಿಷ್ಠಿರನು ಒಂದು ಅನ್ನ ಛತ್ರವನ್ನು ಆಯೋಜಿಸಿದನು. ಅಲ್ಲಿಯೂ ಅದೇ ಮುಂಗುಸಿ ಬಂದಿತು ಮತ್ತು ಅದು ಅದೇ ರೀತಿ ಮಾಡಿತು; ಆದರೆ ಅದರ ಉಳಿದರ್ಧ ಶರೀರ ಮೂಲ ಬಣ್ಣದ್ದಾಗಿಯೇ ಉಳಿಯಿತು. ಧರ್ಮರಾಜನು ಇದರ ಕಾರಣವನ್ನು ಕೇಳಿದಾಗ, ಭಗವಾನ ಶ್ರೀಕೃಷ್ಣನು ‘ಹೇ ರಾಜಾ! ನೀನು ಎಷ್ಟು ಜನರಿಗೆ ಭೋಜನವನ್ನು ಬಡಿಸಬಲ್ಲೆ, ಅನ್ನದಾನ ಮಾಡಬಲ್ಲೆ ಎನ್ನುವ ಅಹಂಕಾರ ನಿನಗೆ ಇದೆ.

ಈ ಅಹಂಕಾರದ ಕಾರಣವೇ ಈ ಮುಂಗುಸಿಯ ಶರೀರ ಬಂಗಾರದ ಬಣ್ಣಕ್ಕೆ ತಿರುಗಲಿಲ್ಲ. ಆ ಬಡ ಬ್ರಾಹ್ಮಣನ ಕುಟುಂಬದವರು ಮಾತ್ರ ಮನೆಗೆ ಬಂದ ಅತಿಥಿ ಬರಿಹೊಟ್ಟೆಯಲ್ಲಿ ಹಿಂದಿರುಗಿ ಹೋಗಬಾರದು ಎಂದು ತಾವು ಬರಿಹೊಟ್ಟೆಯಲ್ಲಿದ್ದರೂ ಅತಿಥಿಗೆ ಊಟವನ್ನು ಬಡಿಸಿದರು. ಅದರ ಹಿಂದೆ ಯಾವುದೇ ಸ್ವಾರ್ಥ ಅಥವಾ ಅಹಂಕಾರವಿರಲಿಲ್ಲ’ ಎಂದು ಹೇಳಿದನು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!