Madhu Begali alleges that there is a shortage of 132 teachers in Doddaballapur due to the negligence of the Congress government.

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ.. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಕಾರಣವೆಂದ ಮಧು ಬೇಗಲಿ

ದೊಡ್ಡಬಳ್ಳಾಪುರ: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teachers) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ ಎದುರಾಗಿದೆ‌.

ಇದರ ಬೆನ್ನಲ್ಲೇ ನಿನ್ನೆ ದೊಡ್ಡಬೆಳವಂಗಲ ಹೋಬಳಿಯ ಐಯನಹಳ್ಳಿಯಲ್ಲಿ ಶಿಕ್ಷಕರ ಕೊರತೆ, ಸಮಯಕ್ಕೆ ಸರಿಯಾಗಿ ಶಿಕ್ಷಕರು ಬರುತ್ತಿಲ್ಲವೆಂದು ಆರೋಪಿಸಿ ಎಸ್‌ಡಿಎಂ‌ಸಿ ಆಡಳಿತ ಮಂಡಳಿ ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ಈ ಕುರಿತಂತೆ ಬಿಜೆಪಿ ಕಾರ್ಯದರ್ಶಿ ಮಧು ಬೇಗಲಿ ರಾಜ್ಯ ಸರ್ಕಾರ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆ ಮೂಲಕ ಮತವನ್ನು ಪಡೆಯಲು ಜನರನ್ನು ಮರಳು ಮಾಡುತ್ತಿದೆಯೇ ಹೊರತು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಮುಂದಾಗಿಲ್ಲ.

ಶಿಕ್ಷಕರ ಕೊರತೆ ಎಂಬುದು ಕೇವಲ ದೊಡ್ಡಬಳ್ಳಾಪುರಕ್ಕೆ ಮಾತ್ರ ಸೀಮಿತವಾಗಿಲ್ಲ. ರಾಜ್ಯಾದ್ಯಂತ ಸುಮಾರು 15 ಸಾವಿರಕ್ಕೂ ಹೆಚ್ಚಿನ ಶಿಕ್ಷಕರ ಕೊರತೆ ಇದ್ದು, ಈ ನಿಟ್ಟಿನಲ್ಲಿ ನೇಮಕ ಎಂಬುದಾಗಿ ಶಿಕ್ಷಣ ಸಚಿವರ ಭರವಸೆ ಮಾಧ್ಯಮಗಳ ಹೇಳಿಕೆ ಮಾತ್ರ ಸೀಮಿತವಾಗಿದೆ ಎಂದು ಆರೋಪಿಸಿದರು.

ಮುಂದುವರೆದು ದೊಡ್ಡಬಳ್ಳಾಪುರದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅಗತ್ಯ ಶಿಕ್ಷಕರ ನೇಮಕ ಮಾಡುವಂತೆ ಈಗಾಗಲೇ ಶಾಸಕರಾದ ಧೀರಜ್ ಮುನಿರಾಜು ಅವರು ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ‌. ಆದಾಗ್ಯೂ ಶಿಕ್ಷಕರ ನೇಮಕಕ್ಕೆ ಸರ್ಕಾರ ಮುಂದಾಗಿಲ್ಲ.

ಇನ್ನು ನೂತನವಾಗಿ ದೊಡ್ಡಬಳ್ಳಾಪುರ ಬಿಇಒ ಆಗಿ ಬಂದಿರುವ ಶಂಕರಯ್ಯ ಅವರ ಮೇಲೆ ಭರವಸೆ ಹೆಚ್ಚಾಗಿದ್ದು, ಶಾಸಕರು ಸರ್ಕಾರಕ್ಕೆ ಮನವಿ ಮಾಡಿರುವ ಕುರಿತಂತೆ ಇಲಾಖೆಗೆ ಹೆಚ್ಚಿನ ಒತ್ತಡ ಹೇರಿ ಅಗತ್ಯ ಶಿಕ್ಷಕರನ್ನು ನೇಮಿಸುವುದು, ಈಗಿರುವ ಶಿಕ್ಷಕರನ್ನು ಸಮರ್ಪಕವಾಗಿ ಪಾಠಪ್ರವಚನಗಳಿಗೆ ಮುಂದಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಬೇಕೆಂದು ಮಧು ಬೇಗಲಿ ಒತ್ತಾಯಿಸಿದ್ದಾರೆ‌.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!