Shortage of 132 teachers, last position in SSLC results.. This is the plight of Nava Doddaballapura - Sharath Patel

132 ಮಂದಿ ಶಿಕ್ಷಕರ ಕೊರತೆ, SSLC ಫಲಿತಾಂಶದಲ್ಲಿ ಕೊನೆ ಸ್ಥಾನ.. ಇದು “ನವ ದೊಡ್ಡಬಳ್ಳಾಪುರ”ದ ದುಸ್ಥಿತಿ – ಶರತ್ ಪಟೇಲ್ ಗಂಭೀರ ಆರೋಪ

ದೊಡ್ಡಬಳ್ಳಾಪುರ: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teachers) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ ಎದುರಾಗಿದೆ‌.

ಇದರ ಬೆನ್ನಲ್ಲೇ ನಿನ್ನೆ ದೊಡ್ಡಬೆಳವಂಗಲ ಹೋಬಳಿಯ ಐಯನಹಳ್ಳಿಯಲ್ಲಿ ಶಿಕ್ಷಕರ ಕೊರತೆ, ಸಮಯಕ್ಕೆ ಸರಿಯಾಗಿ ಶಿಕ್ಷಕರು ಬರುತ್ತಿಲ್ಲವೆಂದು ಆರೋಪಿಸಿ ಎಸ್‌ಡಿಎಂ‌ಸಿ ಆಡಳಿತ ಮಂಡಳಿ ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ಈ ಬೆಳವಣಿಗೆ ರಾಜಕೀಯ ಆರೋಪ- ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಶಿಕ್ಷಕರ ಕೊರತೆ ಎಂದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಕಾರಣ ಎಂದಿರುವ ಬಿಜೆಪಿ ಕಾರ್ಯದರ್ಶಿ ಮಧು ಬೇಗಲಿ ಆರೋಪಕ್ಕೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, SSLC ಫಲಿತಾಂಶದಲ್ಲಿ ಕೊನೆಯ ಸ್ಥಾನ, ಶಿಕ್ಷಕರ ಕೊರತೆ ಇದು ನವ ದೊಡ್ಡಬಳ್ಳಾಪುರದ ದುಸ್ಥಿಗೆ ಸಾಕ್ಷಿ ಎಂದು ತಿರುಗೇಟು ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ವಿರೋಧ ಪಕ್ಷದವರಿಗೆ ಕೆಲಸ ಮಾಡಲು ಸಾಧ್ಯವಾಗದಿದ್ದರೆ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವುದು ವಾಡಿಕೆಯಾಗಿಬಿಟ್ಟಿದೆ.

ದೊಡ್ಡಬಳ್ಳಾಪುರದಲ್ಲಿ ರಸ್ತೆ ಸರಿ ಇಲ್ಲ ಎಂದರೆ ಸರ್ಕಾರ ಕಾರಣ ಎನ್ನುತ್ತಾರೆ, ಚರಂಡಿ ಕ್ಲೀನ್ ಮಾಡಿಲ್ಲ ಎಂದರೆ ರಾಜ್ಯ ಸರ್ಕಾರ ಕಾರಣ ಎನ್ನುತ್ತಾರೆ, ದೊಡ್ಡಬಳ್ಳಾಪುರದ ರಸ್ತೆಗಳು ಕೆರೆಯಂತಾಗುತ್ತಿವೆ ಎಂದರೆ ರಾಜ್ಯ ಸರ್ಕಾರ ಕಾರಣ ಎನ್ನುತ್ತಾರೆ, ಶಾಲೆಗಳಲ್ಲಿ ಶಿಕ್ಷಕರಿಲ್ಲ ಎಂದರೆ ರಾಜ್ಯ ಸರ್ಕಾರ ಕಾರಣ ಎನ್ನುತ್ತಾರೆ. ಮತ್ತೆ ಇಲ್ಲಿನ ನಗರಸಭೆ ಆಡಳಿತ ಮಂಡಳಿ, ದೊಡ್ಡಬಳ್ಳಾಪುರದ ಶಾಸಕರು ಆಯ್ಕೆಯಾಗಿರುವುದು ಏತಕ್ಕಾಗಿ..? ರಾಜೀನಾಮೆ ಕೊಟ್ಟು ಮನೆ ಹೋಗಲಿ. ಸರ್ಕಾರ ನೋಡಿಕೊಳ್ಳುತ್ತೆ ಅಲ್ಲವೇ ಎಂದು ಶರತ್ ಪಟೇಲ್ ಕೇಳಿದ್ದಾರೆ.

ಶಿಕ್ಷಕರ ಕೊರತೆ ಈ ಸರ್ಕಾರದ ಸಮಸ್ಯೆಯಲ್ಲ‌, ಹಿಂದಿನ ಬಿಜೆಪಿ ಸರ್ಕಾರದ ಸಮಸ್ಯೆ ಎಂಬುದನ್ನ ಆರೋಪ ಮಾಡುವ ಮುನ್ನ ತಿಳಿದುಕೊಳ್ಳಬೇಕು. ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು 15 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ ನೀಡಿದ್ದಾರೆ, ಪ್ರಕ್ರಿಯೆ ನಡೆಯುತ್ತಿದೆ‌.

ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಫೇಸ್ಬುಕ್ ಪೋಸ್ಟ್ಗೆ ಸೀಮಿತವಾಗಿದ್ದರು ಎಂಬ ಆರೋಪಕ್ಕೆ ಒಳಗಾಗಿದ್ದ ಎಸ್.ಸುರೇಶ್ ಕುಮಾರ್ ಹಾಗೂ ನಾಗೇಶ್ ಎಷ್ಟು ಶಿಕ್ಷಕರ ನೇಮಕ ಮಾಡಿದ್ದರು ಎಂಬುದು ರಾಜ್ಯದ ಜನತೆಗೆ ಗೊತ್ತಿದೆ.

ಆಗಿದ್ದಾಗಿಯೂ ನಮ್ಮ ನಾಯಕರಾದ ಟಿ.ವೆಂಕಟರಮಣಯ್ಯ ಅವರು ಶಿಕ್ಷಣ ಸಚಿವರ ಕಾಡಿಬೇಡಿ, ಶಿಕ್ಷಕರ ವರ್ಗಾವಣೆ ಮಾಡಿಸಿಕೊಂಡು, ಶಿಕ್ಷಕರ ಸಮಸ್ಯೆ ಸರಿ ದೂಗಿಸಿದ್ದರು.

ಆದರೆ ಈಗಿನ ಶಾಸಕರಿಗೆ ದೊಡ್ಡಬಳ್ಳಾಪುರ ತಾಲೂಕಿನ ಬಗ್ಗೆ ಕಾಳಜಿಯೇ ಇಲ್ಲ.. ವಿಧಾನಸಭೆ ಅಧಿವೇಶನದಲ್ಲಿ ಬೇಕಾಬಿಟ್ಟಿ ಮಾತನಾಡುವುದು, ಪೇಪರ್ ಅರಿದು ಸಭಾಧ್ಯಕ್ಷರ ಮೇಲೆ ಎಸೆದು ಅಮಾನತ್ತಾಗುವುದೇ ಆಗಿದೆ. ಇವರ ತಾಲೂಕಿನ ಬಗೆಗಿನ ಕಾಳಜಿ ಚುನಾವಣೆ ಸಂದರ್ಭದಲ್ಲಿ ಮಾತ್ರ ನೆನಪಾಗುತ್ತೆ ಅಷ್ಟೇ.

ಈಗಾಗಲೇ ಹಾಲಿ ಶಾಸಕರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ನಾ ಬಿಜೆಪಿ ಶಾಸಕ ಆದರೂ ನಮ್ಮ ದೊಡ್ಡಬಳ್ಳಾಪುರ ತಾಲೂಕಿಗೆ ಅನ್ಯಾಯ ಮಾಡಿಲ್ಲ ಎಂದು. ಮತ್ತೆ ಶಿಕ್ಷಕರ ಕೊರತೆ, ರಸ್ತೆ ಅದ್ವಾನ ಆಗಿರುವುದು, ಅಭಿವೃದ್ಧಿ ಕಾರ್ಯ ನಡೆಯದೇ ಇರುವುದನ್ನು ಸರ್ಕಾರದ ಗಮನಕ್ಕೆ ಶಾಸಕರು ತರುತ್ತಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.

ಈ ಹಿಂದೆ ಹಾಲಿ ಶಾಸಕರು ನಮ್ಮ ನಾಯಕರ ವಿರುದ್ಧ ಸರ್ಕಾರಕ್ಕೆ ಮನವಿ ಪತ್ರ ಸಮರ್ಪಕವಾಗಿ ಸಲ್ಲಿಸಲು ಬರಲ್ಲ ಎಂದು ಆರೋಪಿಸಿದ್ದರು. ಮತ್ತೆ ಹಾಲಿ ಶಾಸಕರು ಸಮರ್ಪಕವಾಗಿ ಮನವಿ ಸಲ್ಲಿಸಿ ದೊಡ್ಡಬಳ್ಳಾಪುರ ಉದ್ದಾರ ಮಾಡಿರೋದು ಏನು..?

ಇದೇನಾ ನವ ದೊಡ್ಡಬಳ್ಳಾಪುರ..? ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫಲಿತಾಂಶದಲ್ಲಿ ಎಂದಿಗೂ ಹಿಂದೆ ಬೀಳದ ದೊಡ್ಡಬಳ್ಳಾಪುರ ತಾಲೂಕು ಈ ವರ್ಷ ಜಿಲ್ಲೆಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.. ಇದು ನವದೊಡ್ಡಬಳ್ಳಾಪುರದ ಕೊಡುಗೆಯಾ‌‌? ಇದರ ಹೊಣೆ ಶಾಸಕರು ಏಕೆ ಹೊರಲ್ಲ‌‌..?

ದೊಡ್ಡಬಳ್ಳಾಪುರ ಶಾಸಕರು ಶಿಕ್ಷಣ ಕ್ಷೇತ್ರದ ಎಷ್ಟು ಸಭೆ ನಡೆಸಿದ್ದಾರೆ.? SSLC, PUC ಫಲಿತಾಂಶ ಹೆಚ್ಚಳಕ್ಕೆ ದೊಡ್ಡಬಳ್ಳಾಪುರ ಶಾಸಕರ ಕೊಡುಗೆಯೇನು..? ದೊಡ್ಡಬಳ್ಳಾಪುರದ ಶಿಕ್ಷಕರ ಕೊರತೆ ಕುರಿತು ಶಿಕ್ಷಣ ಸಚಿವರ ಗಮನಕ್ಕೆ ಎಷ್ಟು ಸರಿ ತಂದಿದ್ದಾರೆ.? ಎಂದು ಸರಣಿ ಪ್ರಶ್ನೆ ಮಾಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಶಿಕ್ಷಕರ ಕೊರತೆ ಕುರಿತು ರಾಜ್ಯ ಸರ್ಕಾರದ ಗಮನಕ್ಕೆ ತರಲು ಶಾಸಕ ಧೀರಜ್ ಮುನಿರಾಜು ವಿಫಲವಾಗಿರುವುದೇ ಮುಖ್ಯ ಕಾರಣ ಎಂದು ಈ ಮೂಲಕ ಶರತ್ ಪಟೇಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ.. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಕಾರಣವೆಂದ ಮಧು ಬೇಗಲಿ

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!