Drink & Drive: Driver fined Rs. 12,500!

ಮಾತು ತಪ್ಪಿದ ಗೋಲ್ಡನ್ ಹೋಮ್ಸ್ ಬಿಲ್ಡರ್ಸ್‍ಗೆ ಕ್ರಯ ಪತ್ರ ಬರೆದು ಕೊಡಲು ಆಯೋಗದ ಆದೇಶ

ಧಾರವಾಡ: ಪ್ಲಾಟ್ ನೀಡದೆ ಮಾತು ತಪ್ಪಿದ ಗೋಲ್ಡನ್ ಹೋಮ್ಸ್ ಬಿಲ್ಡರ್ಸ್‍ಗೆ (Golden Homes Builders) ಕ್ರಯ ಪತ್ರ ಬರೆದು ಕೊಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ವಿವರ: ಹುಬ್ಬಳ್ಳಿಯ ಗೋಕುಲ ರಸ್ತೆಯ ನಿವಾಸಿ ಮಲ್ಲಿಕಾರ್ಜುನ ಕ್ಯಾದಿ ಎನ್ನುವವರು ಗೋಲ್ಡನ್ ಹೋಮ್ಸ ಕಾರ್ಪೋರೆಷನ್‍ರವರು ಹುಬ್ಬಳ್ಳಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಿರ್ಮಿಸುತ್ತಿದ್ದ ಬಡಾವಣೆಯ ಪ್ಲಾಟ್ ನಂ.495 ನ್ನು ರೂ.2,40,000 ಗೆ ಖರೀದಿಸಿದ್ದರು.

ಈ ಬಗ್ಗೆ ಗೋಲ್ಡನ್ ಹೋಮ್ಸನ ಮಾಲಿಕ ಮಿಲನ್ ಪಾರಿಕ ದೂರುದಾರರಿಗೆ ದಿ:20/03/2007 ರಂದು ಖರೀದಿ ಕರಾರು ಪತ್ರ ಬರೆದುಕೊಟ್ಟಿದ್ದರು. ದೂರುದಾರರು ಕಂತಿನ ರೂಪದಲ್ಲಿ ಪೂರ್ತಿ ಹಣ ಸಂದಾಯ ಮಾಡಿದ್ದರು. ನಂತರ ಹಲವು ಬಾರಿ ಮೌಖಿಕವಾಗಿ ಮತ್ತು ಪತ್ರದ ಮೂಲಕ ವಿನಂತಿಸಿದರು ಎದುರುದಾರ ಗೋಲ್ಡನ್ ಹೋಮ್ಸರವರು ದೂರುದಾರರಿಗೆ ಖರೀದಿ ಪತ್ರ ನೊಂದಣಿ ಮಾಡಿಕೊಟ್ಟಿರಲಿಲ್ಲ.

ತಮ್ಮ ಹಣವನ್ನು ಎದುರುದಾರರು ವಾಪಸ್ಸುಕೊಟ್ಟಿರಲಿಲ್ಲ. ಅಂತಹ ಎದುರುದಾರರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯಿದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಎದುರುದಾರ ಗೋಲ್ಡನ್ ಹೋಮ್ಸರವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ. ಅ. ಬೋಳಶೆಟ್ಟಿ ಸದಸ್ಯರು, ದೂರುದಾರ ಮತ್ತು ಎದುರುದಾರ ಗೋಲ್ಡನ್ ಹೋಮ್ಸರವರ ಮದ್ಯ 2007 ರಲ್ಲಿ ಪ್ಲಾಟ್ ಖರೀದಿಯ ಬಗ್ಗೆ ಖರೀದಿ ಕರಾರು ಪತ್ರ ಆಗಿದೆ. ಆ ಪತ್ರದಂತೆ ದೂರುದಾರರು ಎದುರುದಾರರಿಗೆ ಖರೀದಿಯ ಪೂರ್ತಿ ಹಣ ರೂ.2,40,000 ಸಂದಾಯ ಮಾಡಿದ್ದಾರೆ. ಖರೀದಿ ಕರಾರು ಪತ್ರದ ಷರತ್ತಿನಂತೆ ದೂರುದಾರರಿಗೆ ಖರೀದಿ ಪತ್ರ ನೋಂದಣಿ ಮಾಡಿಕೊಡುವುದು ಎದುರುದಾರರ ಹೊಣೆ ಮತ್ತು ಕರ್ತವ್ಯವಾಗಿದೆ.

ಈವರೆಗೆ ದೂರುದಾರರು ಹಲವಾರು ಬಾರಿ ವಿನಂತಿಸಿದರೂ ಎದುರುದಾರರು ದೂರುದಾರರಿಗೆ ಖರೀದಿ ಪತ್ರ ನೋಂದಣಿ ಮಾಡಿಕೊಟ್ಟಿಲ್ಲ. ಅಥವಾ ದೂರುದಾರರಿಗೆ ಖರೀದಿ ಮುಂಗಡ ಹಣ ವಾಪಸ್ಸುಕೊಟ್ಟಿಲ್ಲ. ಅಂತಹ ಎದುರುದಾರ ಗೋಲ್ಡನ್ ಹೋಮ್ಸರವರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯಿದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ದೂರುದಾರರಿಗೆ ಅವರು ಖರೀದಿಸಿದ ಪ್ಲಾಟ್ ನಂ.495 ನ್ನು ಹುಬ್ಬಳ್ಳಿಯ ಸಬ್‍ರಿಜಿಸ್ಟ್ರಾರ ಕಛೇರಿಯಲ್ಲಿ ನೊಂದಣಿ ಮಾಡಿಕೊಡುವಂತೆ ಆಯೋಗ ಎದುರುದಾರ ಗೋಲ್ಡನ್ ಹೋಮ್ಸ ಮಾಲೀಕರಿಗೆ ನಿರ್ಧೇಶಿಸಿದೆ.

ಒಂದು ತಿಂಗಳೊಳಗಾಗಿ ಎದುರುದಾರರು ಖರೀದಿ ಪತ್ರ ನೋಂದಣಿ ಮಾಡಿಕೊಡದ್ದಿದ್ದರೆ ದೂರುದಾರರು ಆಯೋಗದ ಮೂಲಕ ಕೋರ್ಟ ಕಮಿಶ್ನರ ನೇಮಿಸಿಕೊಂಡು ಆ ಖರೀದಿ ಪತ್ರ ಮಾಡಿಕೊಳ್ಳಲು ಅರ್ಹರಿದ್ದಾರೆಂದು ಆದೇಶಿಸಿದೆ.

ಅಲ್ಲದೆ ನೋಂದಣಿ ಖರ್ಚು ವೆಚ್ಚವನ್ನು ದೂರುದಾರರೆ ನಿಬಾಯಿಸುವಂತೆ ಸೂಚಿಸಿದೆ.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!