Appointment of 20,000 teachers soon: Madhu Bangarappa

20 ಸಾವಿರ ಶಿಕ್ಷಕರ ನೇಮಕ ಶೀಘ್ರ; ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಸಚಿವ ಮಧು ಬಂಗಾರಪ್ಪ ಸೂಚನೆ

ಬೆಳಗಾವಿ; ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ (Madhu Bangarappa) ಅವರು ತಿಳಿಸಿದರು.

ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಮಂಗಳವಾರ (ಜು.08) ನಡೆದ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಒಳಮೀಸಲಾತಿ ಸಮೀಕ್ಷೆ ನಡೆಯುತ್ತಿದ್ದು ಈ ಸರ್ವೇ ಪೂರ್ಣಗೊಳ್ಳುತ್ತಿದ್ದಂತೆ, ರಾಜ್ಯದ ಸರ್ಕಾರಿ ಶಾಲೆಗಳು, ಅನುದಾನೂತ ಶಾಲೆಗಳು ಮತ್ತು ಕಾಲೇಜುಗಳಿಗೆ ಖಾಲಿಯಿರುವ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಕಳೆದ ಬಾರಿಗಿಂತ ಹಾಜರಾತಿ ಕಡಿಮೆ ಇದ್ದ ಶಾಲೆಗಳ ಬಗ್ಗೆ ಗಮನ ವಹಿಸಿ ಮಕ್ಕಳನ್ನು ಶಾಲೆಗೆ ಕರೆತಂದು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು.‌ಈ ಕಾರ್ಯಕ್ಕೆ ಇಲಾಖೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿ “ಶಾಲೆಗೆ ಬಾ” ಎಂಬ ಅಭಿಯಾನ ಹಮ್ಮಿಕೊಳ್ಳಬೇಕು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ, ಊಟ, ಪುಸ್ತಕ ಸೇರಿದಂತೆ ಅಗತ್ಯ ಸೌಕರ್ಯ ನೀಡಲಾಗುತ್ತಿದೆ. ಇನ್ನು ಜುಲೈ 30 ರವರೆಗೆ ಶಾಲಾ ಪ್ರವೇಶಕ್ಕೆ ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸರ್ಕಾರಿ ಶಾಲೆಗೆ ಪ್ರವೇಶ ಪಡೆಯುವಂತೆ ಕ್ರಮ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಗೋಕಾಕ ಹಾಗೂ ರಾಯಬಾಗ ತಾಲೂಕಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ ಬಹಳ ಕಡಿಮೆಯಿದೆ. ಪ್ರತಿ ವರ್ಷ ಮಕ್ಕಳ ದಾಖಲಾತಿಯ ಅಂಕಿ ಅಂಶಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ನಿರಂತರ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಕಳೆದ ವರ್ಷಕ್ಕಿಂದ ಹೆಚ್ಚು ಮಕ್ಕಳು ಈ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಮಕ್ಕಳು ಉತ್ತೀರ್ಣರಾಗಿದ್ದಾರೆ. ಇದೇ ರೀತಿಯಲ್ಲಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕು ಎಂದರು.

ಜಿಲ್ಲೆಯಲ್ಲಿ ಕಲಿಕೆಯಿಂದ ಹಿಂದುಳಿದ ಮಕ್ಕಳನ್ನು ಗುರುತಿಸಿ, ಅಂತಹ ಮಕ್ಕಳನ್ನು ಕಲಿಕೆಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಉತ್ತಮ‌ ಶಿಕ್ಷಕರಿದ್ದು ಅಂತಹ ಶಿಕ್ಷಕರನ್ನು ಗುರುತಿಸಿ ಅವರಿಗೆ ಹೆಚ್ವಿನ‌ ಜವಾಬ್ದಾರಿ ನೀಡಬೇಕು. ಪ್ರತಿ ಜಿಲ್ಲೆಯಲ್ಲಿ “ಓದು ಕರ್ನಾಟಕ” ಎಂಬ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರದಿಂದ ಈಗಾಗಲೇ ನಿರ್ದೇಶನ ನೀಡಲಾಗಿದೆ.

ಪ್ರತಿ ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಗತ್ಯ. ಅದೇ ರೀತಿಯಲ್ಲಿ ಶಾಲೆಗಳಲ್ಲಿ ಶಿಕ್ಷಕರ ಹಾಜರಾತಿ ಕೂಡ ಕಡ್ಡಾಯವಾಗಿದೆ ಎಂದು ಸೂಚಿಸಿದರು.

ಇಲಾಖೆಯಿಂದ ಬಿಡುಗಡೆ ಆಗುವಂತಹ ಅನುದಾನವನ್ನು ಸಮರ್ಪಕವಾಗಿ ಬಳಕೆ‌ ಆಗಬೇಕು. ಶಾಲೆಗಳಲ್ಲಿ ಮಕ್ಕಳಿಗೆ ವಿತರಿಸಲಾಗುವ ಶೂ ಹಾಗೂ ಸಾಕ್ಸ್ ಗುಣಮಟ್ಟದಿಂದ ಕೂಡಿರಬೇಕು. ಜುಲೈ ಅಂತ್ಯದೊಳಗಾಗಿ ಎಲ್ಲ‌ ಮಕ್ಕಳಿಗೆ ಶಾಲಾ‌ ಸಮವಸ್ತ್ರ ಹಾಗೂ ಪಠ್ಯಪುಸಕ್ತಗಳು ವಿತರಿಸಬೇಕು. ಶಿಕ್ಷಣ ಇಲಾಖೆಯಿಂದ ಜಾರಿಯಾಗುವಂತಹ ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.

ಮಳೆಗಾಲ ಇರುವುದರಿಂದ ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ಗುರುಸಿ ಇಲಾಖೆಯ ಗಮನಕ್ಕೆ ತರಬೇಕು. ಒಂದು ವೇಳೆ ಅಂತಹ ಶಾಲೆಗಳು ಕಂಡು ಬಂದಲ್ಲಿ ಅಂತಹ ಶಾಲೆಗಳಲ್ಲಿ, ಕೊಠಡಿಗಳಲ್ಲಿ ಕಲಿಕಾ ಪ್ರಕ್ರಿಯೆ ಮುಂದುವರೆಸಬಾರದು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ಅತಿಥಿ ಶಿಕ್ಷರನ್ನು ನಿಯಮಾನುಸಾರ ನೇಮಕ ಮಾಡಿಕೊಳ್ಳಲಾಗಿದೆ. ಸದ್ಯದಲ್ಲಿ ಬೋಧನಾ ಸಿಬ್ಬಂದಿಗಳ ಕೊರತೆ ಇಲ್ಲ ಎಂದು ಶಾಲಾ ಸಾಕ್ಷರತಾ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ ಅವರು ವಿವರಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಅವರ ನಿರ್ದೇಶನದಂತೆ
ಪ್ರತಿ ಶಾಲೆ ಭೇಟಿ ನೀಡಿ ಶಾಲಾ ಕಟ್ಟಡದ ಮಾಹಿತಿ ಪಡೆಯಲಾಗುತ್ತಿದೆ ಅಂತಹ ಕಟ್ಟಡಗಳು ಕಂಡು ಬಂದಲ್ಲಿ ಜಿಲ್ಲಾ ಪಂಚಾಯತ್ ಅನುದಾನದಡಿ ಕಟ್ಟಡ, ದುರಸ್ತಿಗೆ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಡಿಡಿಪಿಐ ಹೇಳಿದರು.

ಬೈಲಹೊಂಗಲ ವಿಧಾನಸಭಾ ಶಾಸಕರಾದ ಮಹಾಂತೇಶ ಕೌಜಲಗಿ, ರಾಯಬಾಗ ಶಾಸಕರಾದ ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಬೆಳಗಾವಿ ಶೈಕ್ಷಣಿಕ ವಿಭಾಗದ ಅಪರ ಆಯುಕ್ತರಾದ ಜಯಶ್ರೀ ಶಿಂತ್ರೆ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!