Awareness workshop on biodiversity

ಜೀವ ವೈವಿದ್ಯತೆ ಕುರಿತು ಜಾಗೃತಿ ಕಾರ್ಯಾಗಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ಜೀವವೈವಿದ್ಯ ಮಂಡಳಿ, ಬೆಂಗಳೂರು ರವರಿಂದ ಗ್ರಾಮಪಂಚಾಯಿತಿ ಮಟ್ಟದ ಜೀವ ವೈವಿದ್ಯ (Biodiversity) ನಿರ್ವಹಣಾ ಸಮಿತಿಗಳ ಕಾರ್ಯಚಟುವಟಿಕೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ದೇವನಹಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಕರ್ನಾಟಕ ಜೀವವೈವಿದ್ಯ ಮಂಡಳಿಯ ತೋಟಗಾರಿಕಾ ಉಪನಿರ್ದೇಶಕಿ ಪವಿತ್ರ.ಕೆ., ಗ್ರಾಮಪಂಚಾಯಿತಿಗಳ ಹಂತದಲ್ಲಿ ಹಾಗೂ ತಾಲ್ಲೂಕು ಹಂತದಲ್ಲಿರುವ ಜೀವ ವೈವಿದ್ಯ ನಿರ್ವಹಣಾ ಸಮಿತಿಗಳು ಸಕ್ರಿಯವಾಗುವ ಮೂಲಕ, ಜೀವವೈವಿದ್ಯತೆ ಸಂರಕ್ಷಣೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ, ಜೀವವೈವಿದ್ಯತೆ ಕುರಿತು ಇರುವ ಕಾನೂನುಗಳು ಹಾಗೂ ಗ್ರಾಮಪಂಚಾಯಿತಿ ಮಟ್ಟದ ಸಮತಿಗಳ ಅಧಿಕಾರಿಗಳ ಕುರಿತು ಅರಿವು ಮೂಡಿಸಲು ಕರ್ನಾಟಕ ಜೀವವೈವಿದ್ಯ ಮಂಡಳಿಯಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸನ್ನ.ಕೆ.ಆರ್ ಮಾತನಾಡಿ, ಪ್ರತಿಯೊಂದು ಗ್ರಾಮಪಂಚಾಯಿತಿಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರೇ ಅಧ್ಯಕ್ಷರಾಗಿರುವ ಗ್ರಾಮಪಂಚಾಯಿತಿ ಮಟ್ಟದ ಜೀವ ವೈವಿದ್ಯ ನಿರ್ವಹಣಾ ಸಮಿತಿ ಕಡ್ಡಾಯವಾಗಿ ರಚಿಸಬೇಕಾಗಿದ್ದು, ಈ ಸಮಿತಿಯಲ್ಲಿ ಕನಿಷ್ಟ 07 ಜನ ಮತ್ತು ಗರಿಷ್ಠ 11 ಜನ ಸದಸ್ಯರು ಇರಲು ಅವಕಾಶವಿದೆ‌.

ಈ ಸಮಿತಿಗೆ ಗ್ರಾಮಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳೇ ಸದಸ್ಯ ಕಾರ್ಯದರ್ಶಿಗಳಾಗಿದ್ದು, ವರ್ಷದಲ್ಲಿ ಕನಿಷ್ಠ 04 ಸಭೆಗಳನ್ನು ನಡೆಸುವ ಮೂಲಕ ಗ್ರಾಮಪಂಚಾಯಿತಿ ಮಟ್ಟದಲ್ಲಿರುವ ಪ್ರಾಣಿ-ಪಕ್ಷಿಗಳು, ಗಿಡ-ಮರ ಒಳಗೊಂಡು ಒಟ್ಟಾರೆ ಪರಿಸರದ ಸಂರಕ್ಷಣೆಗೆ ನಿರ್ದಿಷ್ಟ ಕ್ರಿಯಾಯೋಜನೆಗಳನ್ನು ರೂಪಿಸಿಕೊಂಡು ಜೀವ ವೈವಿದ್ಯತೆ ಶ್ರಮಿಸಬೇಕೆಂದರು.

ಕಳೆ ನಾಶಕಗಳ ಬಳಕೆ ಕಡಿಮೆ ಮಾಡಿ, ಸಾವಯವ ಕೃಷಿಯತ್ತ ಮುಂದಿನ ಜಗತ್ತು ಸಾಗಬೇಕಾದ ಅಗತ್ಯತೆ ಇದೆ ಎಂದು ತಿಳಿಸಿದರು. ಮಾವನ ಸಂಕುಲದ ಉಳಿವಿಗಾಗಿ ಜೀವ ವೈವಿದ್ಯತೆ ರಕ್ಷಣೆ ಅಗತ್ಯತೆ ಕುರಿತು ವಿವರವಾದ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಸ್.ಶ್ರೀನಾಥಗೌಡ ಮಾತನಾಡಿ, ದೇವನಹಳ್ಳಿ ತಾಲ್ಲೂಕಿನಲ್ಲಿ ನಲ್ಲೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ 13ನೇ ಶತಮಾನದಲ್ಲಿ ಚೋಳರ ಅಳ್ವಿಕೆ ಕಾಲದಲ್ಲಿ ನೆಡಲಾಗಿದ್ದ ಹುಣಸೇತೋಪನ್ನು ಕರ್ನಾಟಕ ಜೀವವೈವಿದ್ಯ ಮಂಡಳಿಯವರು 2007 ರಲ್ಲಿ ಜೀವ ವೈವಿದ್ಯ ಪಾರಂಪರಿಕ ತಾಣ ಎಂಬುದಾಗಿ ಘೋಷಿಸಿದ್ದು, ಈ ರೀತಿ ಘೋಷಿಸಿದ ದೇಶದ ಪ್ರಥಮಸ್ಥಳ ಎಂಬುದು ತಮ್ಮಲ್ಲೇರ ಹೆಮ್ಮೆಯಾಗಿದೆ.

ಈ ಕಾರ್ಯದ ಮುಂದುವರೆದ ಭಾಗವಾಗಿ ದೇವನಹಳ್ಳಿ ಚಕ್ಕೊತಾ ತಳಿಯ ಸರಂಕ್ಷಣೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕ್ರಿಯಾಯೋಜನೆ ಅನುಮೋದನೆಯನ್ನು ಪಡೆದುಕೊಂಡಿದ್ದು, ಚಕ್ಕೊತಾ ಸಸಿಗಳನ್ನು ಉಚಿತವಾಗಿ ವಿತರಿಸುವ, ಜೇನು ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವ ಜೊತೆಗೆ ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಕಾರ್ಯಾಗಾರದಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೆಶಕರಾದ ದುರ್ಗಪ್ಪ, ಅಮರನಾರಾಯಣ್ ಸೇರಿದಂತೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕೃಷಿ , ತೋಟಗಾರಿಕೆ, ರೇಷ್ಮೆ, ಅರಣ್ಯ ಒಳಗೊಂಡು ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!