ಜೀವ ವೈವಿದ್ಯತೆ ಕುರಿತು ಜಾಗೃತಿ ಕಾರ್ಯಾಗಾರ

Awareness workshop on biodiversity

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ಜೀವವೈವಿದ್ಯ ಮಂಡಳಿ, ಬೆಂಗಳೂರು ರವರಿಂದ ಗ್ರಾಮಪಂಚಾಯಿತಿ ಮಟ್ಟದ ಜೀವ ವೈವಿದ್ಯ (Biodiversity) ನಿರ್ವಹಣಾ ಸಮಿತಿಗಳ ಕಾರ್ಯಚಟುವಟಿಕೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ದೇವನಹಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಕರ್ನಾಟಕ ಜೀವವೈವಿದ್ಯ ಮಂಡಳಿಯ ತೋಟಗಾರಿಕಾ ಉಪನಿರ್ದೇಶಕಿ ಪವಿತ್ರ.ಕೆ., ಗ್ರಾಮಪಂಚಾಯಿತಿಗಳ ಹಂತದಲ್ಲಿ ಹಾಗೂ ತಾಲ್ಲೂಕು ಹಂತದಲ್ಲಿರುವ ಜೀವ ವೈವಿದ್ಯ ನಿರ್ವಹಣಾ ಸಮಿತಿಗಳು ಸಕ್ರಿಯವಾಗುವ ಮೂಲಕ, ಜೀವವೈವಿದ್ಯತೆ ಸಂರಕ್ಷಣೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ, ಜೀವವೈವಿದ್ಯತೆ ಕುರಿತು ಇರುವ ಕಾನೂನುಗಳು ಹಾಗೂ ಗ್ರಾಮಪಂಚಾಯಿತಿ ಮಟ್ಟದ ಸಮತಿಗಳ ಅಧಿಕಾರಿಗಳ ಕುರಿತು ಅರಿವು ಮೂಡಿಸಲು ಕರ್ನಾಟಕ ಜೀವವೈವಿದ್ಯ ಮಂಡಳಿಯಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸನ್ನ.ಕೆ.ಆರ್ ಮಾತನಾಡಿ, ಪ್ರತಿಯೊಂದು ಗ್ರಾಮಪಂಚಾಯಿತಿಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರೇ ಅಧ್ಯಕ್ಷರಾಗಿರುವ ಗ್ರಾಮಪಂಚಾಯಿತಿ ಮಟ್ಟದ ಜೀವ ವೈವಿದ್ಯ ನಿರ್ವಹಣಾ ಸಮಿತಿ ಕಡ್ಡಾಯವಾಗಿ ರಚಿಸಬೇಕಾಗಿದ್ದು, ಈ ಸಮಿತಿಯಲ್ಲಿ ಕನಿಷ್ಟ 07 ಜನ ಮತ್ತು ಗರಿಷ್ಠ 11 ಜನ ಸದಸ್ಯರು ಇರಲು ಅವಕಾಶವಿದೆ‌.

ಈ ಸಮಿತಿಗೆ ಗ್ರಾಮಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳೇ ಸದಸ್ಯ ಕಾರ್ಯದರ್ಶಿಗಳಾಗಿದ್ದು, ವರ್ಷದಲ್ಲಿ ಕನಿಷ್ಠ 04 ಸಭೆಗಳನ್ನು ನಡೆಸುವ ಮೂಲಕ ಗ್ರಾಮಪಂಚಾಯಿತಿ ಮಟ್ಟದಲ್ಲಿರುವ ಪ್ರಾಣಿ-ಪಕ್ಷಿಗಳು, ಗಿಡ-ಮರ ಒಳಗೊಂಡು ಒಟ್ಟಾರೆ ಪರಿಸರದ ಸಂರಕ್ಷಣೆಗೆ ನಿರ್ದಿಷ್ಟ ಕ್ರಿಯಾಯೋಜನೆಗಳನ್ನು ರೂಪಿಸಿಕೊಂಡು ಜೀವ ವೈವಿದ್ಯತೆ ಶ್ರಮಿಸಬೇಕೆಂದರು.

ಕಳೆ ನಾಶಕಗಳ ಬಳಕೆ ಕಡಿಮೆ ಮಾಡಿ, ಸಾವಯವ ಕೃಷಿಯತ್ತ ಮುಂದಿನ ಜಗತ್ತು ಸಾಗಬೇಕಾದ ಅಗತ್ಯತೆ ಇದೆ ಎಂದು ತಿಳಿಸಿದರು. ಮಾವನ ಸಂಕುಲದ ಉಳಿವಿಗಾಗಿ ಜೀವ ವೈವಿದ್ಯತೆ ರಕ್ಷಣೆ ಅಗತ್ಯತೆ ಕುರಿತು ವಿವರವಾದ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಸ್.ಶ್ರೀನಾಥಗೌಡ ಮಾತನಾಡಿ, ದೇವನಹಳ್ಳಿ ತಾಲ್ಲೂಕಿನಲ್ಲಿ ನಲ್ಲೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ 13ನೇ ಶತಮಾನದಲ್ಲಿ ಚೋಳರ ಅಳ್ವಿಕೆ ಕಾಲದಲ್ಲಿ ನೆಡಲಾಗಿದ್ದ ಹುಣಸೇತೋಪನ್ನು ಕರ್ನಾಟಕ ಜೀವವೈವಿದ್ಯ ಮಂಡಳಿಯವರು 2007 ರಲ್ಲಿ ಜೀವ ವೈವಿದ್ಯ ಪಾರಂಪರಿಕ ತಾಣ ಎಂಬುದಾಗಿ ಘೋಷಿಸಿದ್ದು, ಈ ರೀತಿ ಘೋಷಿಸಿದ ದೇಶದ ಪ್ರಥಮಸ್ಥಳ ಎಂಬುದು ತಮ್ಮಲ್ಲೇರ ಹೆಮ್ಮೆಯಾಗಿದೆ.

ಈ ಕಾರ್ಯದ ಮುಂದುವರೆದ ಭಾಗವಾಗಿ ದೇವನಹಳ್ಳಿ ಚಕ್ಕೊತಾ ತಳಿಯ ಸರಂಕ್ಷಣೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕ್ರಿಯಾಯೋಜನೆ ಅನುಮೋದನೆಯನ್ನು ಪಡೆದುಕೊಂಡಿದ್ದು, ಚಕ್ಕೊತಾ ಸಸಿಗಳನ್ನು ಉಚಿತವಾಗಿ ವಿತರಿಸುವ, ಜೇನು ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವ ಜೊತೆಗೆ ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಕಾರ್ಯಾಗಾರದಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೆಶಕರಾದ ದುರ್ಗಪ್ಪ, ಅಮರನಾರಾಯಣ್ ಸೇರಿದಂತೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕೃಷಿ , ತೋಟಗಾರಿಕೆ, ರೇಷ್ಮೆ, ಅರಣ್ಯ ಒಳಗೊಂಡು ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]