ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ.ವೈ. ವಿಜಯೇಂದ್ರ

Allegations of election irregularities; If Congress has evidence, submit it to the court: B.Y. Vijayendra

ಶಿವಮೊಗ್ಗ: ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಯಾವ ರೀತಿ ಆಗಲಿದೆ. ಸ್ಥಾನಪಲ್ಲಟ ಯಾವ ರೀತಿ ಆಗಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸ್ಥಾನಪಲ್ಲಟ ಆದರೆ ನಮಗೇನೂ ವ್ಯತ್ಯಾಸ ಆಗುವುದಿಲ್ಲ; ರಾಜ್ಯದ ಜನರಿಗೂ ವ್ಯತ್ಯಾಸ ಆಗುವುದಿಲ್ಲ; 15 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಯಾರೇ ಮುಖ್ಯಮಂತ್ರಿ ಆದರೂ ರಾಜ್ಯವು ಅಭಿವೃದ್ಧಿ ಕಾಣಲು ಸಾಧ್ಯವಾಗದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ ಇರುತ್ತಾರೆ.

ಡಿ.ಕೆ.ಶಿವಕುಮಾರ್ ಜೊತೆ 100 ಶಾಸಕರಿದ್ದಾರೆ. ಅವರಿಗೂ ಅವಕಾಶ ಕೊಡಬೇಕೆಂಬ ನಾನಾ ಹೇಳಿಕೆ ಬರುತ್ತಿದೆ. ಬಿ.ಆರ್.ಪಾಟೀಲರ ಹೇಳಿಕೆ, ರಾಜು ಕಾಗೆಯವರ ಹೇಳಿಕೆಗಳನ್ನು ಗಮನಿಸಿದರೆ ಆಡಳಿತ ಪಕ್ಷದಲ್ಲಿ ಶಾಸಕರು ಮುಖ್ಯಮಂತ್ರಿಗಳ ಮೇಲಿನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂಬುದು ಸ್ಪಷ್ಟ ಎಂದು ವಿಶ್ಲೇಷಿಸಿದರು.

ಸುರ್ಜೇವಾಲಾ ಭೇಟಿ ಹಿಂದೆ ನಿಗದಿತ ಕಾರ್ಯಸೂಚಿ

ಸಿದ್ದರಾಮಯ್ಯನವರು ಮುಂದುವರೆಯುತ್ತಾರಾ? ಅವರ ಸ್ಥಾನಕ್ಕೆ ಬರುವವರು ಯಾರು? ಎಂಬುದು ಮುಖ್ಯವಲ್ಲ; ಆದರೆ, ಒಂದಂತೂ ಸತ್ಯ. ಸುರ್ಜೇವಾಲಾ ಅವರು ಸುಮ್ಮನೆ ಬರುತ್ತಿಲ್ಲ; ಒಂದು ನಿಗದಿತ ಕಾರ್ಯಸೂಚಿ ಇಟ್ಟುಕೊಂಡೇ ಕರ್ನಾಟಕಕ್ಕೆ ಪದೇಪದೇ ಬರುತ್ತಿದ್ದಾರೆ. ಅದು ಮುಖ್ಯಮಂತ್ರಿಗಳು ಮಾತ್ರವಲ್ಲದೇ ಆಡಳಿತ ಪಕ್ಷದ ಎಲ್ಲರಿಗೂ ಗೊತ್ತಿದೆ ಎಂದು ವಿಜಯೇಂದ್ರ ಅವರು ನುಡಿದರು.

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಾಗಿ ಇರಬಾರದು; ಎರಡು ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಿರಬೇಕೆಂಬ ದುರುದ್ದೇಶದಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ರಾಜ್ಯ ಸರಕಾರವು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಇರುವುದು ದುರಂತ ಎಂದು ಅವರು ಶಿವಮೊಗ್ಗದಲ್ಲಿ ವಿಗ್ರಹಗಳಿಗೆ ಅವಮಾನ ಕುರಿತ ಪ್ರಶ್ನೆಗೆ ಉತ್ತರಿಸಿದರು.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ನಡೆದಿದೆ. ಮೈಸೂರಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನೇ ಬೆದರಿಸಿದ ಷಡ್ಯಂತ್ರ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪದೇಪದೇ ಇಂಥ ಅಹಿತಕರ ಘಟನೆ ನಡೆಯುತ್ತಿದೆ. ಟಿಪ್ಪು ಜಯಂತಿ ಸಂದರ್ಭದಲ್ಲಿ ಸಮಸ್ಯೆ ಆಗಿದೆ. ಗಣೇಶ ಹಬ್ಬದ ಸಂದರ್ಭದಲ್ಲೂ ಸಮಸ್ಯೆಗಳು ಆಗುತ್ತಿವೆ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದರು. ಈ ಷಡ್ಯಂತ್ರದ ವಿರುದ್ಧ ರಾಜ್ಯ ಸರಕಾರವು ಯಾವುದೇ ಕ್ರಮ ಕೈಗೊಳ್ಳದ ಕಾರಣ ಇಂಥ ದೇಶದ್ರೋಹಿಗಳಿಗೂ ಧೈರ್ಯ ಬರುತ್ತಿದೆ ಎಂದು ತಿಳಿಸಿದರು.

ಯಾರೇನೇ ಮಾಡಿದರೂ ರಾಜ್ಯ ಸರಕಾರ ನಮ್ಮನ್ನು ಬೆಂಬಲಿಸುತ್ತದೆ, ನಮ್ಮನ್ಯಾರೂ ಅಲ್ಲಾಡಿಸಲು ಆಗುವುದಿಲ್ಲ, ಯಾವುದೇ ಶಿಕ್ಷೆ ಕೊಡಲಾಗದು ಎಂಬಂತಿದೆ. ರಾಜ್ಯದಲ್ಲಿ ಬೇಲಿಯೇ ಎದ್ದು ಹೊಲ ಮೇಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ದುಷ್ಕøತ್ಯಗಳು ನಡೆಯುತ್ತಿವೆ. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಗಮನಿಸಬೇಕು ಎಂದು ಒತ್ತಾಯಿಸಿದರು.

ಹಾಸನ- ಸರಕಾರದ ಬೇಜವಾಬ್ದಾರಿ
ಹಾಸನ ಜಿಲ್ಲೆಯಲ್ಲಿ ಸರಣಿ ಸಾವುಗಳು ಸಂಭವಿಸುತ್ತಿವೆ. ಯುವಜನರು ಪ್ರಾಣ ಕಳಕೊಳ್ಳುತ್ತಿದ್ದಾರೆ. ಅಲ್ಲಿನ ಉಸ್ತುವಾರಿ ಸಚಿವರು ಕಳೆದ 3 ತಿಂಗಳುಗಳಿಂದ ಭೇಟಿ ಕೊಟ್ಟಿಲ್ಲ; ಇದು ಅವರ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

ರಾಜ್ಯ ಸರಕಾರ ಎಷ್ಟು ಬೇಜವಾಬ್ದಾರಿಯಿಂದ ವರ್ತಿಸುತ್ತದೆ ಎಂಬುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಡ ಎಂದು ಗಮನ ಸೆಳೆದರು.

ರಾಜ್ಯದ ಆಡಳಿತ ಸಂಪೂರ್ಣ ಕುಸಿದು ಬಿದ್ದಿದೆ. ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ರಸ್ತೆಗಳು, ಅಭಿವೃದ್ಧಿ ಕೆಲಸ ಆಗಬೇಕೆಂದಿದ್ದರೆ ಗ್ಯಾರಂಟಿಗಳನ್ನು ನಾವು ನಿಲ್ಲಿಸುತ್ತೇವೆ ಎಂದಿರುವುದೇ ಸ್ಪಷ್ಟ ಪುರಾವೆ ಎಂದು ತಿಳಿಸಿದರು.

ಬಿಜೆಪಿಯವರು ಆರ್ಥಿಕ ಪರಿಸ್ಥಿತಿ ಕುರಿತು ಹೇಳಿದರೆ, ಸರಕಾರಿ ನೌಕರರಿಗೆ ಸಂಬಳ ಕೊಡಲಾಗದ ಸ್ಥಿತಿ ಇದೆ ಎಂದು ಹೇಳಿದರೆ ಎಲ್ಲವೂ ಸರಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಅವರದೇ ಆರ್ಥಿಕ ಸಲಹೆಗಾರರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇದು ರಾಯರೆಡ್ಡಿ ಅವರ ಹೇಳಿಕೆ ಅಲ್ಲ, ಸ್ವತಃ ಮುಖ್ಯಮಂತ್ರಿಗಳೇ ಗ್ಯಾರಂಟಿ ಅನುಷ್ಠಾನಕ್ಕೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದನ್ನು ಹಾಗೂ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯವಿಲ್ಲ ಎಂಬುದನ್ನು ಅವರ ಮೂಲಕ ಹೇಳಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸರಕಾರದ ಬಗ್ಗೆ ಜನರು ಬೇಸತ್ತಿದ್ದಾರೆ. ನಾಡಿನ ಜನರು ಭ್ರಷ್ಟ, ಜನವಿರೋಧಿ, ರೈತವಿರೋಧಿ ಸರಕಾರಕ್ಕೆ ಮತ ಕೊಟ್ಟು ಅಧಿಕಾರಕ್ಕೆ ತಂದಿರುವುದಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಹೇಳಿದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]