ಮನೆಬಿಟ್ಟು ಹೋಗಿದ್ದ ಬಾಲಕ ಒಂದೂವರೆ ವರ್ಷದ ಬಳಿಕ ಪೋಷಕರ ಮಡಿಲಿಗೆ..!

A boy who ran away from home is back in his parents' arms at the age of one and a half!

ಹೊಸಕೋಟೆ: ಮನೆಯಲ್ಲಿ ಜೀವನ ಮಾಡಲು ಕಷ್ಟ ಎಂದು ಮನೆ ಬಿಟ್ಟು ಹೋಗಿದ್ದ ಬಾಲಕನನ್ನು (Boy) ಹೊಸಕೋಟೆ ಪೊಲೀಸರು ಒಂದೂವರೆ ವರ್ಷದ ಬಳಿಕ ಪತ್ತೆ ಹಚ್ಚಿ ಪೋಷಕರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೊಸಕೋಟೆ ನಗರದ ಅಂಬೇಡ್ಕರ್ ಕಾಲೋನಿಯ ಸೋಮಶೇಖರ್ ಎಂಬುವವರ ಪುತ್ರ ಲೋಕಾಯುಕ್ತ(13 ವರ್ಷ) ಮನೆ ಬಿಟ್ಟು ಹೋಗಿದ್ದ ಬಾಲಕ.

ಬಾಲಕ ಲೋಕಾಯುಕ್ತನ ತಾಯಿ ಜ್ಯೋತಿ ಕಳೆದ 12 ವರ್ಷದ ಹಿಂದೆ ತೀರಿಕೊಂಡ ಪರಿಣಾಮವಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತಂದೆ ಸೋಮಶೇಖರ್ ಅವರನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದರು.

ಆತನನ್ನು ಅವರ ಚಿಕ್ಕಮ್ಮ ಹೊಸಕೋಟೆ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗೆ ದಾಖಲು ಮಾಡಿದ್ದರು.

2024ರಲ್ಲಿ ಬಾಲಕ ಲೋಕಾಯುಕ್ತ ತಂದೆ ಸೋಮಶೇಖರ್ ಬಂದು ಆತನನ್ನು ನಗರದ ಅಂಬೇಡ್ಕರ್ ಕಾಲೋನಿಯಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದರು. ಮನೆಗೆ ಹೋಗಿ 3 ದಿನಗಳ ಕಾಲ ಇದ್ದ ಬಾಲಕ ಲೋಕಾಯುಕ್ತ ಮನೆಯಿಂದ ಸೈಕಲ್ ತೆಗೆದುಕೊಂಡು ಹೋದವನು ಸಚಿಜೆಯಾದರೂ ವಾಪಸ್ ಬಂದಿರಲಿಲ್ಲ.

ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿದರೂ ಸಹ ಲೋಕಾಯುಕ್ತನ ಸುಳಿವು ಸಿಕ್ಕಿರಲಿಲ್ಲ. ಆಗ ಜನವರಿ 4 ರಂದು ಲೋಕಾಯುಕ್ತ ಣೆಯಾಗಿರುವ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿರುತ್ತೆ.

ರೈಲಿನಲ್ಲಿ ಚೆನ್ನೈಗೆ ತೆರಳಿದ್ದ ಬಾಲಕ

ಮನೆಯಿಂದ ಕಾಣೆಯಾಗಿದ್ದ ಬಾಲಕ ಲೋಕಾಯುಕ್ತ ಹೊಸಕೋಟೆಯಿಂದ ಬೆಂಗಳ್ರರಿಗೆ ತೆರಳಿ, ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೇ ನಿಲ್ದಾಣದಿಂದ ಚೆನ್ನೈ ಪ್ರಯಾಣ ಬೆಳೆಸಿದ್ದ. ಮೂರ್ನಾಲ್ಕು ದಿನಗಳ ಕಾಲ ಚೆನ್ನೈ ರೈಲು ನಿಲ್ದಾಣದಲ್ಲೆ ಓಡಾಡುತ್ತಿದ್ದ ಬಾಲಕ ಲೋಕಾಯುಕ್ತನನ್ನು ಚೆನ್ನೈ ರೈಲ್ವೇ ಪೊಲೀಸರು ಹಿಡಿದುಕೊಂಡು ವಿಚಾರಣೆ ಮಾಡಲಾಗಿ ಕರ್ನಾಕಟದವನು ಎಂದು ತಿಳಿದಾಕ್ಷಣ ಆತನನ್ನು ಕರ್ನಾಟಕ ರೈಲ್ವೇ ಪೊಲೀಸರ ಮೂಲಕ ಬೆಂಗಳೂರಿನ ಬಾಲಭವನಕ್ಕೆ ರವಾನೆ ಮಾಡಿದ್ದರು.

ಕಳೆದ ಒಂದೂವರೆ ವರ್ಷದಿಂದ ಲೋಕಾಯುಕ್ತ ಬಾಲಭವನದಲ್ಲೆ ಇದ್ದನು.

ತನ್ನ ಹೆಸರು ಭಾರ್ಗವ ಎಂದು ನಂಬಿಸಿದ್ದ ಲೋಕಾಯುಕ್ತ ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನ ಬಾಲಭವನದಲ್ಲಿದ್ದ ಬಾಲಕ ಲೋಕಾಯುಕ್ತ ಮನೆಗೆ ಬಾರಲೇ ಬಾರದೆಂದು ನಿರ್ಧರಿಸಿ ತನ್ನ ಹೆಸರನ್ನು ಭಾರ್ಗವ ಎಂದು ಹೇಳಿ ನಂಬಿಸಿದ್ದ.

ಚೆನ್ನೈ‌ ರೈಲ್ವೇ ಪೊಲೀಸರಿಗೂ ಭಾರ್ಗವ ಎಂದೇ ಹೇಳಿ ನಂಬಿಸಿದ್ದ. ಇತ್ತ ಪ್ರಕರಣ ದಾಖಲು ಮಾಡಿಕೊಂಡಿದ್ದ ಹೊಸಕೋಟೆ ಪೊಲೀಸರು ಸಾಕಷ್ಟು ಹುಡುಕಾಟ ಸಹ ನಡೆಸಿದ್ದರು.

ಬೆಂಗಳೂರಿನ ಬಾಲಭವನದಲ್ಲಿ ಮಕ್ಕಳನ್ನು ಪರಿಶೀಲನೆ ಮಾಡುವ ಸಂಧರ್ಭದಲ್ಲಿ ಭಾರ್ಗವ ಎಂದೇ ಪರಿಚಯ ಮಾಡಿಕೊಂಡಿದ್ದು ಅನುಮಾನ ಬಂದು ಲೋಕಾಯುಕ್ತನ ಫೋಟೋ ಚಹರೆಯನ್ನು ನೋಡಿ ಪ್ರಶ್ನೆ ಮಾಡಿದಾಗ ಮನೆಗೆ ಹೋಗಲೇಬಾರದೆಂದು ತನ್ನ ಹೆಸರನ್ನು ಭಾರ್ಗವ ಎಂದು ಸುಳ್ಳು ಹೇಳಿರುವುದಾಗಿ ಸತ್ಯ ಬಾಯ್ಬಿಟ್ಟಿದ್ದಾನೆ.

ಅಂತಿಮವಾಗಿ ಒಂದೂವರೆ ವರ್ಷದ ಬಳಿಕ ಕಾಣೆಯಾಗಿದ್ದ ಬಾಲಕ ಲೋಕಾಯುಕ್ತನನ್ನು ಅವರ ಕುಟುಂಬಸ್ಥರಿಗೆ ಒಪ್ಪಿಸುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣವನ್ನು ಪತ್ತೆಹಚ್ಚಿದ ಹೊಸಕೋಟೆ ಡಿವೈಎಸ್ಪಿ ಮಲ್ಲೆಶಯ್ಯ, ಇನ್ಸ್ಪೆಕ್ಟರ್ ಗೋವಿಂದ್, ಪೇದೆ ಮಹಾಂತೇಶ್ ಹಾಗೂ ಸಿಬ್ಬಂದಿ ವರ್ಗದವರನ್ನು ಎಸ್ಪಿ ಸಿಕೆ.ಬಾಬಾ ಅಭಿನಂದಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ (Dr.K. Sudhakar) ಅವರು ಸೂಚನೆ ನೀಡಿದರು.

[ccc_my_favorite_select_button post_id="120824"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]